2000 ಇಎಸ್ ಡಿಎಂ ನವೋದ್ಯಮಗಳ ಸ್ಥಾಪನೆ ಗುರಿ- ಡಾ.ಸಿ.ಎನ್.ಅಶ್ವತ್ಥ ನಾರಾಯಣ

ತಾಂತ್ರಿಕ ನಾವೀನ್ಯತೆಗಾಗಿ ಐಇಎಸ್ಎ ಪ್ರಶಸ್ತಿ ಪ್ರದಾನ

Team Udayavani, Dec 14, 2020, 7:11 PM IST

2000 ಇಎಸ್ ಡಿಎಂ ನವೋದ್ಯಮಗಳ ಸ್ಥಾಪನೆ ಗುರಿ- ಡಾ.ಸಿ.ಎನ್.ಅಶ್ವತ್ಥ ನಾರಾಯಣ

ಬೆಂಗಳೂರು: ಎಲೆಕ್ಟ್ರಾನಿಕ್ಸ್ ವ್ಯವಸ್ಥೆ ವಿನ್ಯಾಸ ಮತ್ತು ತಯಾರಿಕೆ (ಇ,ಎಸ್,ಡಿ.ಎಂ) ವಲಯದಲ್ಲಿ 2022ರ ವೇಳೆಗೆ ಸುಮಾರು 2000 ನವೋದ್ಯಮಗಳ ಸ್ಥಾಪನೆ ಹಾಗೂ 2025ರ ವೇಳೆಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಹಾಗೂ ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದರು.

ಇ,ಎಸ್.ಡಿ.ಎಂ. ವಲಯದಲ್ಲಿ ನಾವೀನ್ಯತೆ ಉತ್ತೇಜಿಸುವ ಸಲುವಾಗಿ ಭಾರತೀಯ ವಿದ್ಯುನ್ಮಾನ ಅರೆವಾಹಕ ಸಂಸ್ಥೆ (ಐ.ಇ.ಎಸ್.ಎ) ನೀಡುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವರ್ಚುವಲ್ ಆಗಿ ಸೋಮವಾರ ಪಾಲ್ಗೊಂಡು ಅವರು ಮಾತನಾಡಿದರು.

ಕೌಶಲಾಭಿವೃದ್ಧಿ, ಗುಣಮಟ್ಟದ ಮೂಲಸೌಕರ್ಯ, ನವೋದ್ಯಮಗಳಿಗೆ ಉತ್ತೇಜನ ಹಾಗೂ ಸುಗಮ ವ್ಯವಹಾರಕ್ಕೆ ಅನುವು ಮಾಡಿಕೊಡುವ ಮೂಲಕ ನಿಗದಿತ ಗುರಿ ಸಾಧಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಭಾರತದಲ್ಲಿ ಇ.ಎಸ್.ಡಿ.ಎಂ. ವಲಯವು ತ್ವರಿತವಾಗಿ ಬೆಳವಣಿಗೆ ಹೊಂದುತ್ತಿದೆ. ಇದು ದೇಶದ ಆರ್ಥಿಕತೆಯ ಪುನಶ್ಚೇತನದಲ್ಲಿ ಮಹತ್ವದ ಪಾತ್ರ ವಹಿಸಲು ಅಪಾರ ಅವಕಾಶಗಳನ್ನು ಹೊಂದಿದೆ, ಇದನ್ನು ಗಮನದಲ್ಲಿರಿಸಿಕೊಂಡು ಕೇಂದ್ರ ಸರ್ಕಾರವು ಈ ಉದ್ಯಮವನ್ನು ಪ್ರೋತ್ಸಾಹಿಸುವ ಕಾರ್ಯನೀತಿ ಜಾರಿಗೊಳಿಸಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಈಗ ಭಾರತದ ಇ.ಎಸ್.ಡಿ.ಎಂ. ರಫ್ತಿನಲ್ಲಿ ಶೇ 64ರಷ್ಟು ಕರ್ನಾಟಕದ ಕೊಡುಗೆಯಾಗಿದೆ. ಜೊತೆಗೆ ಕರ್ನಾಟಕವು ದೇಶದ ಅತ್ಯಂತ ದೊಡ್ಡ ಚಿಪ್ ವಿನ್ಯಾಸ ವಲಯವಾಗಿದೆ. ದೇಶದ ಶೇ 70ರಷ್ಟು ಚಿಪ್ ವಿನ್ಯಾಸಕರು ರಾಜ್ಯದಲ್ಲಿ ಉದ್ಯಮನಿರತರಾಗಿದ್ದಾರೆ ಎಂದರು.

ಇ.ಎಸ್.ಡಿ.ಎಂ. ವಲಯಕ್ಕೆ ಪ್ರೋತ್ಸಾಹಕರವಾದಂತಹ ಕಾರ್ಯನೀತಿಯನ್ನು ರಾಜ್ಯ ಹೊಂದಿದೆ. ಜೊತೆಗೆ, ನವೋದ್ಯಮಗಳ ಸ್ಥಾಪನೆಗೆ ಹಲವು ವಿನಾಯಿತಿಗಳನ್ನು ಹಾಗೂ ಪ್ರೋತ್ಸಾಹಕಗಳನ್ನು ನೀಡಲಾಗುತ್ತಿದೆ ಎಂದು ಅಶ್ವತ್ಥ ನಾರಾಯಣ ಹೇಳಿದರು.

ಐಟಿ‌ ನಿರ್ದೇಶಕಿ ಮೀನಾ‌ ನಾಗರಾಜ ಇದ್ದರು.

ವಿವಿಧ ವಿಭಾಗಗಳಲ್ಲಿನ ವಿಜೇತರ ಪಟ್ಟಿ ಹೀಗಿದೆ:
ನವೋದ್ಯಮಗಳು: ಪಥ್ ಶೋಧ್, ಹ್ಯಾಕ್ ಲ್ಯಾಬ್ಸ್, ದೇವಿಕ್ ಅರ್ಥ್, ಆಕ್ಸೆಲರಾನ್ ಲ್ಯಾಬ್ಸ್, ಇವಿಕ್ಯುಪಾಯಿಂಟ್, ಆಲ್ಫಾಐಸಿ, ನವೋದ್ಯಮ ಪರಿಪೋಷಕ: ಸೈನ್, ಐಐಟಿ ಮುಂಬೈ
ಸೂಕ್ಷ್ಮ, ಸಣ್ಣ, ಮಧ್ಯಮ ಗಾತ್ರದ ಉದ್ದಿಮೆಗಳು (ಎಂ.ಎಸ್.ಎಂ.ಇ): ಸಾಂಖ್ಯ ಲ್ಯಾಬ್ಸ್, ಸ್ಕ್ಯಾನ್ ರೇ, ಐವೇವ್, ಸಹಸ್ರ
ಉದ್ದಿಮೆ: ಎಎಂಡಿ, ಬಿಇಎಲ್, ಐಇನ್ಫೋಚಿಪ್ಸ್, ವಿಸ್ಟ್ರಾನ್
ತಂತ್ರಜ್ಞಾನ ದೂರದರ್ಶಿತ್ವ: ನಿವೃತಿ ರಾಯ್, ಪ್ರೊ,ರಾಮಗೋಪಾಲ್ ರಾವ್, ಪ್ರೊ.ಎ,ಪೌಲ್ ರಾಜ್, ಅರುಣಾ ಸುಂದರರಾಜನ್

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.