20 ಸಾವಿರ ನಕಲಿ ಮತದಾರರು?;9,745 ಗುರುತಿನ ಚೀಟಿಗಳು ಪತ್ತೆ !


Team Udayavani, May 9, 2018, 6:00 AM IST

29.jpg

ಬೆಂಗಳೂರು: ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಂಗಳವಾರ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 20 ಸಾವಿರಕ್ಕೂ ಅಧಿಕ ಚುನಾವಣಾ ಗುರುತಿನ ಚೀಟಿ ಪತ್ತೆಯಾಗಿದ್ದು, ಮೂವರನ್ನು ವಶಕ್ಕೆ ಪಡೆಯಲಾಗಿದೆ.  ಜತೆಗೆ ಸ್ಥಳದಲ್ಲಿ ಸ್ಥಳೀಯ ಅಭ್ಯರ್ಥಿ ಮುನಿರತ್ನ ಅವರ ಭಾವಚಿತ್ರವೂ ಪತ್ತೆಯಾಗಿದೆ ಎಂದು ಚುನಾವಣಾ ಅಧಿಕಾರಿ ಸಂಜೀವ್‌ಕುಮಾರ್‌ ಹೇಳಿದ್ದಾರೆ.

ಸ್ಥಳೀಯರು ನೀಡಿದ ಖಚಿತ ಮಾಹಿತಿ ಮೇರೆಗೆ ಜಾಲಹಳ್ಳಿಯ ಎಸ್‌ಎಲ್‌ವಿ ಪಾರ್ಕ್‌ವ್ಯೂ ಅಪಾರ್ಟ್‌ ಮೆಂಟ್ಸ್‌ ಮೇಲೆ ಚುನಾವಣಾ ವಿಚಕ್ಷಣಾ ದಳ ಹಾಗೂ ಸ್ಥಳೀಯ ಪೊಲೀಸರು ದಾಳಿ ನಡೆಸಿದ್ದಾರೆ. ಅಪಾರ್ಟ್‌ ಮೆಂಟ್‌ನ ಕೆಳ ಭಾಗದಲ್ಲಿರುವ ಭದ್ರತಾ ಸಿಬ್ಬಂದಿ  ಕೊಠಡಿಯಲ್ಲಿ ಇನ್ನಷ್ಟು ಗುರುತಿನ ಚೀಟಿ ಜತೆಗೆ ಐದು ಲ್ಯಾಪ್‌ ಟಾಪ್‌, ಉಪಕರಣಗಳು ಹಾಗೂ ಮತದಾರರ ಸ್ವೀಕೃತಿ ಪತ್ರಗಳನ್ನು ಜಪ್ತಿ ಮಾಡಿದ್ದಾರೆ. ವಿಚಿತ್ರವೆಂದರೆ ಪತ್ತೆಯಾಗಿರುವ ಗುರುತಿನ ಚೀಟಿಗಳಲ್ಲಿ ಅಸಲಿ ಮತದಾರರ ಚೀಟಿಗಳೂ ಇದ್ದವು. ರಾಜಕೀಯ ನಾಯಕರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೆ ಅರ್ಜಿ ಪಡೆದು ಪಾಲಿಕೆಯ ಕೆಲವು ಅಧಿಕಾರಿಗಳೊಂದಿಗೆ ಶಾಮೀಲಾಗಿ ಗುರುತಿನ ಚೀಟಿ ಸಿದ್ಧಪಡಿಸಿರಬಹುದು ಎಂದು ಹೇಳಲಾಗಿದೆ. ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ನಮೂನೆಯ ಸ್ವೀಕೃತಿ ರಸೀದಿಗಳೂ ಅಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ದೊರೆತಿವೆ. ಅಪಾರ್ಟ್‌ಮೆಂಟ್‌ನಲ್ಲಿ 2ದೊಡ್ಡ ಟ್ರಂಕ್‌ ಸಿಕ್ಕಿದ್ದು, ಇದರಲ್ಲಿ ಮತದಾರರ ಸೇರ್ಪಡೆ ಫಾರಂಗಳು ಲಭ್ಯವಾಗಿದ್ದು, ಇವುಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಭೇಟಿ ನೀಡಿ, ಸಾವಿರಾರು ಗುರುತಿನ ಚೀಟಿಗಳು ಪತ್ತೆಯಾಗಿರುವುದಕ್ಕೆ ಆತಂಕ  ವ್ಯಕ್ತಪಡಿಸಿದ್ದಾರೆ. ಈ ಕೃತ್ಯದ ಹಿಂದೆ ಆರ್‌.ಆರ್‌.ನಗರ ಶಾಸಕ ಮುನಿರತ್ನ ನಾಯ್ಡು ಕೈವಾಡವಿದೆ ಎಂದು ವಾಗ್ಧಾಳಿ ನಡೆಸಿದರು. ಇಂತಹ ಮೆಗಾ ಹಗರಣವನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ. ನಕಲಿ ಗುರುತಿನ ಚೀಟಿಗಳ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗ  ಗಂಭೀರವಾಗಿ ಪರಿಗಣಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯ ಕಾಂಗ್ರೆಸ್‌, ಬಿಜೆಪಿ ಕಾರ್ಯಕರ್ತರು, ನಕಲಿ ಗುರುತಿನ ಚೀಟಿಗಳನ್ನು ಸಿದ್ಧಪಡಿಸಿ ಚುನಾವಣೆ ಯಲ್ಲಿ ಗೆಲ್ಲಲು ಪ್ರಯತ್ನಿಸುತ್ತಿವೆ ಎಂದು ಪರಸ್ಪರ ಆರೋಪ- ಪ್ರತ್ಯಾರೋಪಗಳಲ್ಲಿ ತೊಡಗಿ ತಳ್ಳಾಟ -ನೂಕಾಟ ಸಹ ನಡೆದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಗುಂಪು ಚದುರಿಸಿ ವಾತಾವರಣ ತಿಳಿಗೊಳಿಸಿದ್ದಾರೆ. ಇನ್ನು ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಚೇತನ್‌ ಸಿಂಗ್‌ ರಾಥೋಡ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ವೆಬ್‌ಸೈಟ್‌ ಹ್ಯಾಕ್‌?: ಚುನಾವಣಾ ಆಯೋಗದ ಇಆರ್‌ಎಂಎಸ್‌ ವೈಬ್‌ ಸೈಟ್‌ನ ಯೂಸರ್‌ ಐಡಿ, ಪಾಸ್‌ವರ್ಡ್‌ ಮತ್ತು ಡಿಜಿಟಲ್‌ ಕೀಗಳನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿ ಬಹಿರಂಗವಾಗಿದೆ. ನಕಲಿ ಮಾತದಾರರಿಗೆ ಹೊಸ ಗುರುತಿನ ಚೀಟಿಗಳನ್ನು ಸಿದಟಛಿಪಡಿಸಿಕೊಡುತ್ತಿದ್ದರು. ಅಲ್ಲದೇ, ಕ್ಷೇತ್ರದ ಕೆಲ ಮತದಾರರಿಗೆ ಹಣ ಹಾಗೂ ಕೆಲ ವಸ್ತುಗಳ ಆಮಿಷವೊಡ್ಡಿ ಗುರುತಿನ ಚೀಟಿ ಪಡೆದುಕೊಳ್ಳುತ್ತಿದ್ದರು. ಅವುಗಳನ್ನು ಅಪಾರ್ಟ್‌ಮೆಂಟ್‌ನಲ್ಲಿ ಮತದಾರರ ಪಟ್ಟಿಯಲ್ಲಿ ಗುರುತಿಸಿ ಚುನಾವಣೆ ಹಿಂದಿನ ದಿನ ನಿರ್ದಿಷ್ಟ ಮತದಾರಿರಗೆ ಮುಚ್ಚಿದ ಕವರ್‌ಲ್ಲಿ ಕೂಪನ್‌ ಹಾಗೂ ಹಣವಿಟ್ಟು ನಿರ್ದಿಷ್ಟ ಪಕ್ಷಕ್ಕೆ ಮತಹಾಕಬೇಕು. ಮತದಾನದ ಬಳಿಕ ಹಣ ಹಾಗೂ ವಸ್ತು ಸ್ವೀಕರಿಸಲು ಸ್ಥಳ ನಿಗದಿ ಮಾಡಿದ್ದಾರೆ. ಆದರೆ, ಈ ದಂಧೆಯ ಹಿಂದೆ ಯಾವ ಪಕ್ಷದ ಅಭ್ಯರ್ಥಿ ಇದ್ದಾರೆ ಎಂಬುದು ಗೊತ್ತಾಗಿಲ್ಲ ಎಂದು ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಕೆಲ ದಿನಗಳ ಹಿಂದೆ ಪೀಣ್ಯ ಪೊಲೀಸರು ನಕಲಿ ಗುರುತಿನ ಚುನಾವಣಾ ಆಯೋಗ ವೆಬ್‌ಸೈಟ್‌ ಹ್ಯಾಕ್‌ ಮಾಡಿ ಮತದಾರರ ಗುರುತಿನ ಚೀಟಿ ಸಿದಟಛಿಪಡಿಸುತ್ತಿದ್ದ ಐವರನ್ನು ಬಂಧಿಸಿದ್ದರು.

ಅಕ್ರಮವಾಗಿ ಸೇರ್ಪಡೆ
ಗುರುತಿನ ಚೀಟಿ ಪತ್ತೆಯಾದ ಅಪಾರ್ಟ್‌ ಮೆಂಟ್‌ಗೆ ಮುಖ್ಯಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ಮತ್ತು ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರತಿಕ್ರಿಯೆ ನೀಡಿದ ಸಂಜೀವ್‌ ಕುಮಾರ್‌, ಈ ಅಪಾರ್ಟ್‌ಮೆಂಟ್‌ನಲ್ಲಿ ಸದ್ಯ 9,745 ಗುರುತಿನ ಚೀಟಿಗಳು ಪತ್ತೆಯಾಗಿವೆ. ಜತೆಗೆ ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಮುನಿರತ್ನ ನಾಯ್ಡು ಭಾವಚಿತ್ರ ಕೂಡ ಪತ್ತೆಯಾಗಿವೆ. ಈ ಕ್ಷೇತ್ರದಲ್ಲಿ ಒಟ್ಟು 4,71,459 ಮತದಾರರಿದ್ದು, 25,825 ಮಂದಿಯ ಹೆಸರನ್ನು ಮತದಾರರ ಪಟ್ಟಿಗೆ ಇದುವರೆಗೆ ಕ್ರಮವಾಗಿ ಸೇರಿಸಲಾಗಿದೆ. ಆದರೆ, ಮತ್ತೆ 19,012 ಮತದಾರರನ್ನು ಹೊಸದಾಗಿ  ಸೇರಿಸಲಾಗಿದೆ. ಪ್ರಾಥಮಿಕ ತನಿಖೆ ಪ್ರಕಾರ ಎಲ್ಲ ಗುರುತಿನ ಚೀಟಿಗಳು ಅಸಲಿ ಎಂಬುದು ಗೊತ್ತಾಗಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.