
2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್
Team Udayavani, Sep 20, 2022, 3:20 PM IST

ವಿಧಾನಸಭೆ: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ.
ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ 16 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಮತ್ತಷ್ಟು ವಿಚಾರಣೆ ನಡೆಸಿದಾಗ 35 ಜನರು ಈ ರೀತಿ ನೇಮಕ ಆದೇಶ ಪಡೆದಿರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿಗೆ ಒಪ್ಪಿಸಲಾಗಿದೆ. ರಾಜ್ಯಾದ್ಯಂತ ಈ ರೀತಿ ಘಟನೆ ನಡೆದಿರುವ ಸಾಧ್ಯತೆ ಇದ್ದು, ಸಮಗ್ರ ತನಿಖೆ ನಡೆಸುತ್ತೇವೆ. ಇದು ಸಮಾಜವೇ ತಲೆತಗ್ಗಿಸುವ ಪ್ರಕರಣ ಎಂದು ಅಭಿಪ್ರಾಯಪಟ್ಟರು.
ಇದನ್ನೂ ಓದಿ:ಸರ್ಕಾರದ ವಿರುದ್ಧ ಸಾಮಾಜಿಕ ತಾಣದಲ್ಲಿ ಪೋಸ್ಟ್ ಮಾಡಿದ ಅಧಿಕಾರಿ ಎತ್ತಂಗಡಿ
ಆದರ ಇಷ್ಟಕ್ಕೆ ಸುಮ್ಮನಾಗದ ಬಿಜೆಪಿ ಶಾಸಕರು, ಈ ಹಗರಣ ಯಾರ ಕಾಲದಲ್ಲಿ ನಡೆದಿದೆ? ಯಾರೆಲ್ಲ ಭಾಗಿಯಾಗಿದ್ದಾರೆಂಬುದು ಗೊತ್ತಾಗಬೇಕು ಎಂದು ಆಗ್ರಹಿಸಿದರು.
ಇಂದು ಕಾಂಗ್ರೆಸ್ ಸದಸ್ಯರು ಪಿಎಸ್ ಐ ನೇಮಕ ಹಗರಣ ಪ್ರಸ್ತಾಪ ಮಾಡುವ ಹಿನ್ನೆಲೆಯಲ್ಲಿ ಇದಕ್ಕೆ ಮಹತ್ವ ಲಭಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
