ಕಸಾಪದ ವಿವಿಧ ದತ್ತಿ ಪ್ರಶಸ್ತಿಗಳು ಪ್ರಕಟ


Team Udayavani, Feb 16, 2023, 10:58 PM IST

tdy-36

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು 2021ನೇ ಸಾಲಿನ ವಿವಿಧ ದತ್ತಿ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದೆ. 49 ವಿಭಾಗಗಳಲ್ಲಿ 53 ಕೃತಿಗಳು ಆಯ್ಕೆಯಾಗಿವೆ. ಈ ದತ್ತಿ ಪ್ರಶಸ್ತಿಗಳು 250 ರೂ.ಯಿಂದ 10 ಸಾವಿರ ರೂ.ವರೆಗೆ ನಗದು ಬಹುಮಾನ ಒಳಗೊಂಡಿವೆ.

ಮಾ. 12ರಂದು ಪರಿಷತ್‌ನ ಶ್ರೀ ಕೃಷ್ಣರಾಜ ಪರಿಷತ್‌ನ ಮಂದಿರದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪರಿಷತ್‌ ಅಧ್ಯಕ್ಷ ಮಹೇಶ ಜೋಷಿ ತಿಳಿಸಿದ್ದಾರೆ.

ಪ್ರಮುಖ ದತ್ತಿ ಪ್ರಶಸ್ತಿಗಳ ಪಟ್ಟಿ:

ಬಿಸಲೇರಿ ಜಯಣ್ಣ ಮತ್ತು ಬಿಸಲೇರಿ ಬ್ರದರ್ಸ್‌ ದತ್ತಿಗೆ ಮಂಗಳೂರಿನ ಮುರಳಿಮೋಹನ್‌ ಚೂಂತಾರು ಅವರ ಸಂಗಾತಿ ಕೃತಿ, ವಿ. ಗೌರಮ್ಮ ಗಂಗಾಧರಯ್ಯ ಮತ್ತು ಮಕ್ಕಳ ಸಾಹಿತ್ಯ ಪ್ರಶಸ್ತಿಗೆ ಕಾಸರಗೋಡಿನ ರಾಜಶ್ರೀ ಟಿ. ರೈ ಪೆರ್ಲ ಅವರ ತುಳುನಾಡಿನ ಮೂರಿಗಳ ಆರಾಧನೆ ಕೃತಿ ಭಾಜನವಾಗಿದೆ.

ಜತೆಗೆ ಭಾರತಿ ಮೋಹನ ಕೋಟಿ ದತ್ತಿಗೆ ಕಾಸರಗೋಡಿನ ವಿಕ್ರಂ ಕಾಂತಿಕೆರೆ ಅವರ ಕಾವೇರಿ ತೀರದ ಪಯಣ ಕೃತಿ, ಹೊಳಲ್ಕೆರೆ ಪದ್ಮಾವತಮ್ಮ ಶ್ರೀಪಾಲಶೆಟ್ಟಿ ಡಾ| ಮದನಕೇಸರಿ ಜೈನ ದತ್ತಿಗೆ ತುಮಕೂರಿನ ಸಂತೋಷ್‌ ಕುಮಾರ್‌ ಅವರ ಆಪ್ತಮೀಮಾಂಸಾ (ದೇವಾಗಮ ಸ್ತೋತ್ರ) ಕೃತಿ ಆಯ್ಕೆ ಆಗಿದೆ. ಹಾಗೆಯೇ ಪೂಜ್ಯ ಸ್ವಸ್ತಿಶ್ರೀ ದೇವೇಂದ್ರಕೀರ್ತಿ ದತ್ತಿಗೆ ಹುಬ್ಬಳ್ಳಿಯ ಶಾಂತಿನಾಥ ಕೆ. ಹೋತಪೇಟಿ ಅವರ ಅನಾಸಕ್ತ ಮಹಾಯೋಗಿ ಕೃತಿ ಆಯ್ಕೆಯಾಗಿವೆ. ಈ ಪ್ರಶಸ್ತಿಗಳು ತಲಾ 10 ಸಾವಿರ ರೂ.ನಗದು ಮತ್ತು ಪುರಸ್ಕಾರ ಒಳಗೊಂಡಿದೆ.

ಹಾಗೆಯೇ ವಸುದೇವ ಭೂಪಾಲಂ ದತ್ತಿಗೆ ದಕ್ಷಿಣ ಕನ್ನಡದ ಶ್ರೀಧರ ಎಚ್‌.ಜಿ. ಅವರ ಚಪಡ ಕಾದಂಬರಿ, ಬೆಳಗಾವಿಯ ಇಸ್ಮಾಯಿಲ್‌ ತಳಕಲ್‌ ಅವರ ಬೆತ್ತಲೆ ಸಂತ ಸಣ್ಣ ಕಥಾ ಸಂಕಲನ, ಧಾರವಾಡದ ವೈ.ಜಿ. ಭಗವತಿ ಅವರ ಮಕ್ಕಳು ಓದಿದ ಟೀಚರ್‌ ಡೈರಿ  ಹಾಗೂ ಬೆಂಗಳೂರಿನ ಕೆ. ಶ್ರೀನಿವಾಸ ರೆಡ್ಡಿ ಅವರ ಅಂತರಂಗ ಕೃತಿ ಭಾಜನವಾಗಿವೆ. ಈ ಪ್ರಶಸ್ತಿ ಕ್ರಮವಾಗಿ 5, 3 ಮತ್ತು 2 ಸಾವಿರ ರೂ.ನಗದು ಮತ್ತು ಪುರಸ್ಕಾರ ಒಳಗೊಂಡಿದೆ.

ದಿ.ಡಿ. ಮಾಣಿಕರಾವ್‌ ಸ್ಮರಣಾರ್ಥ ಹಾಸ್ಯ ಸಾಹಿತ್ಯ ದತ್ತಿಗೆ ದಕ್ಷಿಣ ಕನ್ನಡದ ನಿರ್ಮಲಾ ಸುರತ್ಕಲ್‌ ಅವರ ನಿತ್ಯಪುಷ್ಪ ಮತ್ತು ಗೂಗಲ್‌ ಗುರು ಕೃತಿ, ದಿ|ಡಾ| ಎ.ಎಸ್‌. ಧರಣೇಂದ್ರಯ್ಯ-ಮನೋವಿಜ್ಞಾನ ದತ್ತಿಗೆ ಚಂದ್ರಶೇಖರ ದಾಮ್ಲೆ ಅವರ ನನ್ನ ಮಗಳು ತುಂಟಿ ಅಲ್ಲ ಕೃತಿ, ಭಾರತೀಸುತ ಸ್ಮಾರಕ ದತ್ತಿ ಪ್ರಶಸ್ತಿಗೆ ಗದಗದ ಪುಂಡಲೀಕ ಕಲ್ಲಿಗನೂರ ಅವರ ಮನೋಜನನಿ ಕೃತಿ, ಲಕ್ಷ್ಮೀ ದೇವಿ ಶಾಂತರಸ ಹೆಂಬೇರಾಳು ದತ್ತಿ ಪ್ರಶಸ್ತಿಗೆ ಲೇಖಕಿ ಕಾವ್ಯಾ ಕಡಮೆ ಅವರ ಮಾಕೋನ ಏಕಾಂತ ಕೃತಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಕಾಶಕ ಆರ್‌.ಎನ್‌. ಹಬ್ಬು ದತ್ತಿ ಪ್ರಶಸ್ತಿಗೆ ಆಸ್ಟ್ರೇಲಿಯಾದ ಶ್ರೀಹರ್ಷ ಸಾಲಿಮಠ ಅವರ ಉದಕ ಉರಿದು ಕೃತಿ, ಅಮೃತ ಮಹೋತ್ಸವ ಸಾಹಿತ್ಯ ಸಮ್ಮೇಳನದ ಸವಿ ನೆನಪಿನ ದತ್ತಿಗೆ ಬಾಗಲಕೋಟೆಯ ಸೋಮಲಿಂಗ ಗೆಣ್ಣೂರ ಅವರ ಅಂಬೇಡ್ಕರ್‌ ಮಾರ್ಗ ಕೃತಿ, ನಿಡಸಾಲೆ ಪುಟ್ಟಸ್ವಾಮಯ್ಯ ಸಾಹಿತ್ಯ ಪ್ರಶಸ್ತಿ ದತ್ತಿಗೆ ಬಳ್ಳಾರಿಯ ಸಿ.ಆರ್‌. ಗೋಪಾಲ್‌ ಅವರ ಸಾಮಾಜಿಕ ಕ್ರಿಯಾಚರಣೆ ಕೃತಿ ಆಯ್ಕೆಯಾಗಿದೆ.

ಗುಬ್ಬಿ ಸೋಲೂರು ಮುರುಗಾರಾಧ್ಯ ದತ್ತಿ ಪ್ರಶಸ್ತಿಗೆ ತುಮಕೂರಿನ ಸಿದ್ದಗಂಗಯ್ಯ ಹೊಲತಾಳು ಅವರ ಸಿಂಗಾರಿ ಕೃತಿ, ಗೌರುಭಟ್‌ ದತ್ತಿ ಪ್ರಶಸ್ತಿಗೆ ಬೆಂಗಳೂರಿನ ಕ್ಷಮಾ ವಿ. ಭಾನುಪ್ರಕಾಶ್‌ ಅವರ ವಿಜ್ಞಾನ ಲೋಕದ ಜ್ಞಾನಕುಸುಮಗಳು ಕೃತಿ, ಶ್ರೀಮತಿ ಗಂಗಮ್ಮ ಶ್ರೀ ಟಿ. ಶಿವಣ್ಣ ದತ್ತಿ ಪ್ರಶಸ್ತಿಗೆ ವಿಜಯಪುರದ ಶಂಕರ ಬೈಚಬಾಳ ಅವರ ಕನ್ನಡದ ಮಠ, ಪುಸ್ತಕದ ಜಗದ್ಗುರು ಡಾ| ತೋಂಟದ ಸಿದ್ದಲಿಂಗ ಶ್ರೀಗಳು ಕೃತಿ ಭಾಜನವಾಗಿದೆ.

ಡಾ| ಹಾ.ಮಾ.ನಾಯಕ ಸ್ಮಾರಕ ದತ್ತಿ ಪ್ರಶಸ್ತಿಗೆ ಬಾಗಲಕೋಟೆಯ ಅಶೋಕ ನರೋಡೆ ಅವರ ಮಹಾಕಾವ್ಯಗಳಲ್ಲಿ ಬುದ್ಧ ಕೃತಿ ಹಾಗೂ ಡಾ| ವೀಣಾ ಶಾಂತೇಶ್ವರ ದತ್ತಿಗೆ ದಕ್ಷಿಣ ಕನ್ನಡದ ದೀಪಾ ಫಡೆR ಅವರ ಮುಂದಣ ಹೆಜ್ಜೆ ಕೃತಿ ಆಯ್ಕೆಯಾಗಿದೆ.ಈ ಪ್ರಶಸ್ತಿಗಳು ತಲಾ 5 ಸಾವಿರ ರೂ. ನಗದು ಒಳಗೊಂಡಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಕಟನೆ ತಿಳಿಸಿದೆ.

 

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.