21 ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ
Team Udayavani, Mar 19, 2024, 7:00 AM IST
ಬೆಂಗಳೂರು: ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಸಂಬಂಧ ಮಂಗಳವಾರ ನಡೆಯಲಿರುವ ಕಾಂಗ್ರೆಸ್ ಚುನಾವಣ ಸಮಿತಿ ಸಭೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮಂಗಳವಾರ ದಿಲ್ಲಿಗೆ ಪ್ರಯಾಣ ತೆರಳಲಿದ್ದಾರೆ. ಬಾಕಿ ಉಳಿದಿರುವ ರಾಜ್ಯದ 21 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಸಭೆಯಲ್ಲಿ ಅಂತಿಮಗೊಳ್ಳುವ ಸಾಧ್ಯತೆಗಳಿವೆ.
ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಕಲಬುರಗಿ, ಬಳ್ಳಾರಿ, ಕೋಲಾರ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು-ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ-ಧಾರವಾಡ, ಬಾಗಲಕೋಟೆ, ಉತ್ತರ ಕನ್ನಡ, ದಾವಣಗೆರೆ, ಕೊಪ್ಪಳ, ರಾಯಚೂರು, ಬೀದರ್ ಹಾಗೂ ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿ ಪಟ್ಟಿ ಬಿಡುಗಡೆ ಆಗಬೇಕಿದೆ.
ಸಿಇಸಿ ಸಭೆಗೂ ಮುನ್ನ ಮೈಸೂರು, ಬೆಳಗಾವಿ, ಚಿಕ್ಕೋಡಿ, ಕಲಬರುಗಿ ಮತ್ತಿತರ ಕೆಲವು ಕ್ಷೇತ್ರಗಳ ಬಗ್ಗೆ ರಾಜ್ಯದಲ್ಲಿ ಕಾಂಗ್ರೆಸ್ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುಜೇìವಾಲ ಅವರೊಂದಿಗೆ ಒಂದು ಸುತ್ತಿನ ಸಭೆ ನಡೆಯಲಿದೆ. ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರ ಸ್ವಂತ ಜಿಲ್ಲೆ ಮೈಸೂರಿನಿಂದ ಬಿಜೆಪಿಯ ಹಾಲಿ ಸಂಸದ ಪ್ರತಾಪಸಿಂಹ ಬದಲಿಗೆ ಯದುವೀರ್ ಒಡೆಯರ್ ಕಣಕ್ಕಿಳಿದಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಯಾರಾಗಬೇಕು ಎಂಬುದನ್ನು ಸಿಎಂ ವಿವೇಚನೆಗೆ ಬಿಡಲಾಗಿದೆ.
ಜತೆಗೆ ಮಲ್ಲಿಕಾರ್ಜುನ ಖರ್ಗೆ ಪ್ರತಿನಿಧಿಸುತ್ತಿದ್ದ ಕಲಬುರಗಿ ಕ್ಷೇತ್ರದ ಅಭ್ಯರ್ಥಿ ಆಯ್ಕೆಯನ್ನು ಖರ್ಗೆ ವಿವೇಚನೆಗೆ ಬಿಡಲಾಗಿದೆ. ಹೀಗಾಗಿ ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸುವ ಮುನ್ನ ಎಐಸಿಸಿ ಉಸ್ತುವಾರಿ ಸಮ್ಮುಖದಲ್ಲಿ ಸಿಎಂ, ಡಿಸಿಎಂ ಅವರು ಸಮಾಲೋಚನೆ ನಡೆಸಿ ಅಲ್ಲಿ ಒಮ್ಮತದ ಅಭಿಪ್ರಾಯ ಮೂಡಿ ಬಂದರೆ ಅದನ್ನು ಸಿಇಸಿಗೆ ಶಿಫಾರಸು ಮಾಡಲಿದ್ದಾರೆ. ಬಹುತೇಕ ಮಂಗಳವಾರದ ಸಭೆ ಯಶಸ್ವಿಯಾದರೆ ರಾತ್ರಿ ಅಥವಾ ಬುಧವಾರ ಪಟ್ಟಿ ಹೊರಬೀಳುವ ಸಾಧ್ಯತೆಗಳಿವೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
MUST WATCH
ಹೊಸ ಸೇರ್ಪಡೆ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ