ಕೋವಿಡ್ : ರಾಜ್ಯದಲ್ಲಿಂದು 31459 ಜನರು ಗುಣಮುಖ; 24214 ಹೊಸ ಪ್ರಕರಣ ಪತ್ತೆ
Team Udayavani, May 27, 2021, 8:01 PM IST
ಬೆಂಗಳೂರು : ರಾಜ್ಯದಲ್ಲಿಂದು ಹೊಸದಾಗಿ 24214 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಹಾಗೂ 31459 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇಂದು ( ಮೇ.27) ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ:26.05.2021, 00:00 ರಿಂದ 23:59ರ ವರೆಗೆ) ಅವಧಿಯಲ್ಲಿ 24214 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೆ ಅವಧಿಯಲ್ಲಿ ಕೋವಿಡ್ ಸೋಂಕಿನಿಂದ 476 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಸೋಂಕಿಗೆ ಇದುವರೆಗೂ ಸಾವನ್ನಪ್ಪಿರುವವರ ಸಂಖ್ಯೆ 27405ಕ್ಕೆ ಏರಿಕೆಯಾಗಿದೆ.
ಗುಣಮುಖ :
ಇನ್ನು ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಾ ಹೋಗುತ್ತಿದೆ. ಇಂದು ಕೂಡ 31459 ಜನರು ಕೊವಿಡ್ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಕೋವಿಡ್ ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-214, ಬಳ್ಳಾರಿ-725, ಬೆಳಗಾವಿ-1147, ಬೆಂಗಳೂರು ಗ್ರಾಮಾಂತರ-623, ಬೆಂಗಳೂರು ನಗರ-5949, ಬೀದರ್-60, ಚಾಮರಾಜನಗರ-380, ಚಿಕ್ಕಬಳ್ಳಾಪುರ-238, ಚಿಕ್ಕಮಗಳೂರು-715, ಚಿತ್ರದುರ್ಗ-710, ದಕ್ಷಿಣ ಕನ್ನಡ-555, ದಾವಣಗೆರೆ-806, ಧಾರವಾಡ-678, ಗದಗ-370, ಹಾಸನ-1505, ಹಾವೇರಿ-159, ಕಲಬುರಗಿ-153, ಕೊಡಗು-337, ಕೋಲಾರ-591, ಕೊಪ್ಪಳ-495, ಮಂಡ್ಯ-755, ಮೈಸೂರು-2240, ರಾಯಚೂರು-445,ರಾಮನಗರ-263, ಶಿವಮೊಗ್ಗ-822, ತುಮಕೂರು-1219, ಉಡುಪಿ-905,ಉತ್ತರ ಕನ್ನಡ-659, ವಿಜಯಪುರ-306, ಯಾದಗಿರಿ-190.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಶ್ರೀ ಹುಲಿಗೆಮ್ಮ ದೇವಿಯ ಮಹಾರಥೋತ್ಸವ
ಶಂಕರನಾರಾಯಣ : ವಾರಾಹಿ ನದಿಯಲ್ಲಿ ಮುಳುಗಿ ರೈತ ಸಾವು
ಚಿತ್ರದುರ್ಗದ ಐತಿಹಾಸಿಕ ಮುರುಘಾ ಮಠದ ಉತ್ತರಾಧಿಕಾರಿಯಾಗಿ ಬಸವಾದಿತ್ಯ ಶ್ರೀ ಆಯ್ಕೆ
ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು
ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್
ಹೊಸ ಸೇರ್ಪಡೆ
ಉದ್ಯಮಿ ಕಟ್ಟೆ ಭೋಜಣ್ಣ ಸಾವು ಪ್ರಕರಣ; ಆತ್ಮಹತ್ಯೆಗೆ ಪ್ರಚೋದನೆ: ಗಣೇಶ್ ಶೆಟ್ಟಿ ಬಂಧನ
ನೆಲ್ಯಾಡಿ: ಕಾರು – ಟಿಪ್ಪರ್ ಢಿಕ್ಕಿ; ಓರ್ವ ಸಾವು
ಅತಿಕ್ರಮಣ ವಿರುದ್ಧ ಕಟ್ಟು ನಿಟ್ಟಿನ ಕ್ರಮ; ಅಧಿಕಾರಿಗಳಿಗೆ ಡಾ| ಕೆ.ವಿ. ರಾಜೇಂದ್ರ ಸೂಚನೆ
ಜನರ ಸಮಸ್ಯೆಗೆ ತತ್ಕ್ಷಣ ಸ್ಪಂದನೆ: ಸ್ಥಳೀಯ ಅಧಿಕಾರಿಗಳಿಗೆ ಕೂರ್ಮಾರಾವ್ ಸೂಚನೆ
ಕುಂದಾಪುರ:ಕೊನೆಗೂ ಬಂತು ತಾ.ಪಂ. ಅನುದಾನದ ಕಂತು