ರಾಜ್ಯದಲ್ಲಿಂದು 249 ಜನರಿಗೆ ಸೋಂಕು ದೃಢ; ರಾಜಧಾನಿಯಲ್ಲಿ ಮತ್ತೆ ಶತಕ ದಾಟಿದ ಸೋಂಕಿತರ ಸಂಖ್ಯೆ
Team Udayavani, Jun 22, 2020, 6:03 PM IST
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿಇಂದು ಮತ್ತೆ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ. ರಾಜ್ಯದಲ್ಲಿಂದು ಒಟ್ಟು 249 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ. ಇದುವರೆಗೆ 5730 ಮಂದಿ ಸೋಂಕಿತರು ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 3523 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರದಲ್ಲಿ ಇಂದು 126 ಜನರಿಗೆ ಸೋಂಕು ದೃಢವಾಗಿದೆ. ಕಲಬುರಗಿಯಲ್ಲಿ 27, ವಿಜಯಪುರದಲ್ಲಿ 15, ಉಡುಪಿಯಲ್ಲಿ 14 ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ಜನರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ.
ದಾವಣಗೆರೆಯಲ್ಲಿ ಒಂಬತ್ತು, ಉತ್ತರ ಕನ್ನಡ ಮತ್ತು ಬಾಗಲಕೋಟೆಯಲ್ಲಿ ಆರು ಮಂದಿಗೆ ಸೋಂಕು ದೃಢವಾಗಿದ್ದರೆ, ಬೀದರ್ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಐವರಿಗೆ, ಧಾರವಾಡ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ತಲಾ ನಾಲ್ವರಿಗೆ, ರಾಮನಗರ ಜಿಲ್ಲೆಯಲ್ಲಿ ಮೂವರಿಗೆ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಡಗು ಜಿಲ್ಲೆಗಳಲ್ಲಿ ತಲಾ ಇಬ್ಬರಿಗೆ ಸೋಂಕು ತಾಗಿರುವುದು ದೃಢವಾಗಿದೆ. ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತಲಾ ಓರ್ವರಿಗೆ ಕೋವಿಡ್ ಸೋಂಕು ಪತ್ತೆಯಾಗಿದೆ.
ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 9399ಕ್ಕೆ ಏರಿಕೆಯಾಗಿದೆ. ಇಂದು 111 ಮಂದಿ ಗುಣಮುಖರಾಗಿದ್ದು, ಒಟ್ಟು 5730 ಮಂದಿ ಗುಣಮುಖರಾಗಿದ್ದಾರೆ. ಸದ್ಯ 3523 ಸಕ್ರಿಯ ಪ್ರಕರಣಗಳಿವೆ. ಇಂದು ಐವರು ಸೋಂಕಿತರು ಮರಣ ಹೊಂದಿದ್ದು, ಸೋಂಕಿನ ಕಾರಣದಿಂದ ಮೃತಪಟ್ಟವರ ಸಂಖ್ಯೆ 142 ಕ್ಕೆ ಏರಿಕೆಯಾಗಿದೆ. ನಾಲ್ವರು ಸೋಂಕಿತರು ಅನ್ಯ ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ