ಹಾಲು ಒಕ್ಕೂಟದ ಒಂದು ಹುದ್ದೆಗೆ 25ರಿಂದ 50 ಲಕ್ಷ ರೂ. ಲಂಚ : ಹೆಚ್ ಡಿಕೆ ಆರೋಪ

ಅಸಿಸ್ಟೆಂಟ್ ಕಮಿಷನರ್ ಹುದ್ದೆ ರೇಟು 1ರಿಂದ 1.5 ಕೋಟಿಗೆ ಹೋಗಿದೆ

Team Udayavani, Apr 23, 2022, 6:19 PM IST

jds

ಬೀದರ್: ರಾಜ್ಯದ ಬಡ ಮಕ್ಕಳಿಗೆ ಪಾರದರ್ಶಕವಾಗಿ ಉದ್ಯೋಗ ಕೊಡುವ ಜವಾಬ್ದಾರಿಯನ್ನು ರಾಜ್ಯ ಸರಕಾರವು ಸರಿಯಾಗಿ ನಿರ್ವಹಿಸುತ್ತಿಲ್ಲ ಎಂದು ನೇರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; “ಪಿಎಸ್ʼಐ ನೇಮಕಾತಿ ಅಷ್ಟೇ ಅಲ್ಲ ಸಹಕಾರಿ ಕ್ಷೇತ್ರದಲ್ಲಿಯೂ ಸರಕಾರಿ ಉದ್ಯೋಗಗಳನ್ನು ಹಣಕ್ಕೆ ಮಾರಿಕೊಳ್ಳುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬೀದರ್ʼನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿ, ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ನೇಮಕಾತಿ ಪಾರದರ್ಶಕವಾಗಿ ನಡೆಯುತ್ತಿಲ್ಲ. ಅಲ್ಲಿ ಒಂದೊಂದು ಹುದ್ದೆಯ ನೇಮಕ 25ರಿಂದ 50 ಲಕ್ಷ ರೂಪಾಯಿವರೆಗೆ ಲಂಚವನ್ನು ನಿಗದಿ ಮಾಡಲಾಗಿದೆ. ಇದು ಎಲ್ಲ ಜಿಲ್ಲೆಗಳ ಹಾಲು ಒಕ್ಕೂಟಗಳಲ್ಲೂ ನಡೆಯುತ್ತಿದೆ. ಈ ಮಾಹಿತಿ ನನಗೆ ಮಾತ್ರವಲ್ಲದೆ, ಈವರೆಗೆ ಆಡಳಿತ ನಡೆಸಿದ, ಈಗ ನಡೆಸುತ್ತಿರುವ ಪ್ರತಿಯೊಬ್ಬರಿಗೂ ಗೊತ್ತಿದೆ ಎಂದರು.

ಎಲ್ಲ ಇಲಾಖೆಗಳಲ್ಲಿಯೂ ಪಾರದರ್ಶಕವಾಗಿ ನೇಮಕಾತಿ ನಡೆಯುತ್ತಿಲ್ಲ. ಕಮೀಷನ್ ದಂಧೆ ಅವ್ಯಾಹತವಾಗಿ ನಡೆಯುತ್ತಿದೆ. ವಸ್ತುಸ್ಥಿತಿ ಹೀಗಿರುವಾಗ ಪ್ರಾಮಾಣಿಕವಾಗಿ ಕಷ್ಟಪಟ್ಟು ಓದಿದ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಪಾರದರ್ಶಕ ಹಾಗೂ ಕಟ್ಟುನಿಟ್ಟಿನ ಕ್ರಮಗಳನ್ನು ಮುಖ್ಯಮಂತ್ರಿ ಕೈಗೊಳ್ಳಬೇಕು ಹಾಗೂ ಈ ಬಗ್ಗೆ ಸಹಕಾರಿ ಸಚಿವರು ವಾಸ್ತವಾಂಶವನ್ನು ಜನರ ಮುಂದೆ ಇಡಲಿ ಎಂದು ಅವರು ಒತ್ತಾಯಿಸಿದರು.

ರಾಜ್ಯದ ಜನರಿಗೆ ಈಗ ನಡೆಯುತ್ತಿರುವ ಪಿಎಸ್ʼಐ ನೇಮಕಾತಿ ಅಕ್ರಮ ಒಂದು ಚಿಕ್ಕ ಉದಾಹಣೆ ಅಷ್ಟೆ. ಆದರೆ, ಸಹಕಾರ ಕ್ಷೇತ್ರದಲ್ಲಿ ಹುದ್ದೆಗಳ ನೇಮಕಾತಿಗೆ ಒಪ್ಪಿಗೆ ನೀಡಲು ಮಂತ್ರಿಗಳಿಗೇ ಅಡ್ವಾನ್ಸ್ ನೀಡಬೇಕು. ಇನ್ನು ಸರಕಾರಿ ಉದ್ಯೋಗ ಸಿಕ್ಕಿದರೆ ಸಾಕು ಜೀವನ ಚೆನ್ನಾಗಿರುತ್ತದೆ ಎಂದು ಮನೆ, ಮಠ ಮಾರಿ 25ರಿಂದ 50 ಲಕ್ಷ ರೂಪಾಯಿ ಕೊಟ್ಟು ಕೆಲಸಕ್ಕೆ ಸೇರುತ್ತಾರೆ. ಈಗ ಪಿ.ಎಸ್ʼಐ ಪ್ರಕರಣ ಹೊರಗೆ ಬಂದಿದೆ. ಅದರಂತೆ ಸಾಕಷ್ಟು ಪಕ್ರರಣಗಳು ಸರಕಾರದ ಮಟ್ಟದಲ್ಲಿ ನಡೆಯುತ್ತಿವೆ. ಇದಕ್ಕೆ ಸರಕಾರ ಅಂತಿಮ ತೆರೆ ಎಳೆದು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪಿಎಸ್ʼಐ ಹಗರಣದಲ್ಲಿ ದೊಡ್ಡ ರಾಜಕಾರಣಿಗಳ ಪಾತ್ರ ಇದೆ ಅಂತ ನಾನು ಹೇಳುವುದಿಲ್ಲ. ಇದರಲ್ಲಿ ಕೆಳಹಂತದಲ್ಲಿ ಕೆಲ ಟೀಮ್ʼಗಳಿವೆ. ಸಿದ್ದರಾಮಯ್ಯ ಕಾಲದಲ್ಲಿ ಶಿವಕುಮಾರ್ ಎಂಬ ಕಿಂಗ ಪಿನ್ ಒಬ್ಬನನ್ನು ಬಂಧಿಸಿದರು. ಆದರೆ, ಏನೂ ಕ್ರಮವನ್ನೂ ಕೈಗೊಳ್ಳಲಿಲ್ಲ. ಹಾಗಾಗಿ ಇಂದಿನ ಪಿಎಸ್ʼಐ ಪರೀಕ್ಷೆಯಲ್ಲಿ ಪ್ರಾಮಾಣಿಕ ಬಡ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಮುಖ್ಯಮಂತ್ರಿಗಳು ಪಾರದರ್ಶಕ ತನಿಖೆ ನಡೆಸಿ ನಿಜವಾದ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆದೇಶ ಮಾಡಿರುವುದಕ್ಕೆ ನನ್ನ ಸಹಮತವಿದೆ ಎಂದರು.

ರಾಜ್ಯ ಸರಕಾರದಲ್ಲಿ ಯಾರಿಗೂ ಯಾರ ಮೇಲೆಯೂ ಹಿಡಿತವಿಲ್ಲ. ಬಿಜೆಪಿ ಹೈಕಮಾಂಡ್ ಚುನಾವಣೆಗಷ್ಟೇ ಸೀಮಿತವಾಗಿದೆ. ಬಿಜೆಪಿ ಜನರ ಬದುಕಿಗೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ. ನಾನು ತಿನ್ನುವುದಿಲ್ಲ, ಬೇರೆಯವರಿಗೂ ತಿನ್ನಲು ಬಿಡುವುದೂ ಇಲ್ಲ ಎಂದು ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ ರಾಜ್ಯ ಸರಕಾರದಲ್ಲಿ 40% ಕಮೀಷನ್ ದಂಧೆ ಬಗ್ಗೆ ಮೌನವಾಗಿದ್ದಾರೆ. ದೇಶದಲ್ಲಿ ಜನಸಾಮಾನ್ಯನ ಜೀವನ ದುಬಾರಿಯಾಗಿದೆ. ಪಕ್ಕದ ಶ್ರೀಲಂಕಾದಲ್ಲಿರುವ ಪರಿಸ್ಥಿತಿ ಭಾರತದಲ್ಲಿ ಬಂದರೂ ನಾವು ಆಶ್ಚರ್ಯಪಡಬೇಕಾಗಿಲ್ಲ ಎಂದು ಸರಕಾರದ ವಿರುದ್ಧ ಅವರು ಹರಿಹಾಯ್ದರು.

ಲೋಕಾಯುಕ್ತವನ್ನು ಮುಗಿಸಿದ ಕಾಂಗ್ರೆಸ್

ಕಾಂಗ್ರೆಸ್ ಸರಕಾರವಿದ್ದಾಗ ಅವರ ಹಗರಣಗಳನ್ನು ಮುಚ್ಚಿಹಾಕಿಕೊಳ್ಳಲು ಲೋಕಾಯುಕ್ತಕ್ಕಿದ್ದ ಅಧಿಕಾರಕ್ಕೆ ಕತ್ತರಿ ಹಾಕಿದರು. ಇವತ್ತು ನೋಡಿದರೆ ಅದೇ ಪಕ್ಷದ ನಾಯಕರು ಹಾದಿಬೀದಿಯಲ್ಲಿ ನಿಂತು ಭ್ರಷ್ಟರನ್ನು ಬಂಧಿಸಿ ಎಂದು ಪ್ರತಿಭಟನೆ ಮಾಡುತ್ತಿದ್ದಾರೆ. 2006ರಲ್ಲಿ ನಾನು ಅಧಿಕಾರದಲ್ಲಿದಾಗ ಲೋಕಾಯುಕ್ತಕ್ಕೆ ಸಂಪೂರ್ಣ ಅಧಿಕಾರ ನೀಡಿದ್ದೆ ಎಂದರು.

ಜಲಧಾರೆ ಬಗ್ಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಯಾರು ಏನೇ ಮಾತನಾಡಿದರು ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಬಾದಾಮಿ ಕ್ಷೇತ್ರದಲ್ಲಿ ನಡೆಯುತ್ತಿರುವ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದ್ದು ನಾನು. ಎರಡೂ ರಾಷ್ಟ್ರಿಯ ಪಕ್ಷಗಳಿಂದ ರೈತರಿಗೆ ಅನ್ಯಾಯವಾಗುತ್ತಿದೆ. ನಾನು ಕಡಿಮೆ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇನೆ. ನನಗೆ ಪೂರ್ಣ ಪ್ರಮಾಣದ ಸರಕಾರ ನೀಡಿದರೆ ಇನಷ್ಟು ಜನ ಪರ ಕೆಲಸ ಮಾಡುತ್ತೇನೆ ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಸೇರಿದಂತೆ ಜೆಡಿಎಸ್ ಪಕ್ಷದ ಹಲವಾರು ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.