ರಾಜ್ಯದಲ್ಲಿಂದು 40741 ಜನ ಗುಣಮುಖ : 26811 ಕೋವಿಡ್ ಹೊಸ ಪ್ರಕರಣ ಪತ್ತೆ
Team Udayavani, May 26, 2021, 8:43 PM IST
ಬೆಂಗಳೂರು : ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿಯಾದಾಗಿನಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಹಾಗೂ ಇದರ ಜೊತೆಗೆ ಸೋಂಕಿನಿಂದ ಗುಣಮುಖರಾಗುತ್ತಿರುವರ ಸಂಖ್ಯೆ ಏರುತ್ತಲೆ ಹೋಗುತ್ತಿದೆ.
ಇಂದು ಸಂಜೆ ( ಮೇ.26) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳ ( ದಿನಾಂಕ :25.05.2021, 00:00 ರಿಂದ 23:59ರವರೆಗೆ) ಅವಧಿಯಲ್ಲಿ 26811 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ತಗುಲಿರುವುದು ದೃಢ ಪಟ್ಟಿದೆ. ಇದೆ ಅವಧಿಯಲ್ಲಿ 530 ಜನರು ಮಹಾಮಾರಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಗುಣಮುಖರಾದವರ ಸಂಖ್ಯೆ ಹೆಚ್ಚು :
ಕಳೆದ ಕೆಲ ದಿನಗಳಿಂದ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇಂದು ಕೂಡ 40741 ಜನರು ವೈರಸ್ ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಒಟ್ಟು 2062910 ಜನರು ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಕೋವಿಡ್-19 ಅಂಕಿ-ಸಂಖ್ಯೆಗಳು :
ಬಾಗಲಕೋಟೆ-245, ಬಳ್ಳಾರಿ-796, ಬೆಳಗಾವಿ-1205, ಬೆಂಗಳೂರು ಗ್ರಾಮಾಂತರ-740, ಬೆಂಗಳೂರು ನಗರ-6433, ಬೀದರ್-61, ಚಾಮರಾಜನಗರ-425, ಚಿಕ್ಕಬಳ್ಳಾಪುರ-313, ಚಿಕ್ಕಮಗಳೂರು-585, ಚಿತ್ರದುರ್ಗ-431, ದಕ್ಷಿಣ ಕನ್ನಡ-729, ದಾವಣಗೆರೆ-1309, ಧಾರವಾಡ-853, ಗದಗ-393, ಹಾಸನ-1471, ಹಾವೇರಿ-330, ಕಲಬುರಗಿ-175, ಕೊಡಗು-296, ಕೋಲಾರ-907, ಕೊಪ್ಪಳ-491, ಮಂಡ್ಯ-805, ಮೈಸೂರು-2792, ರಾಯಚೂರು-265, ರಾಮನಗರ-240, ಶಿವಮೊಗ್ಗ-839, ತುಮಕೂರು-1399, ಉಡುಪಿ-973, ಉತ್ತರ ಕನ್ನಡ-786, ವಿಜಯಪುರ-337, ಯಾದಗಿರಿ-187.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?