3 ಡಿಸಿಎಂಗಳ ಅಗತ್ಯವೇನಿತ್ತು?
Team Udayavani, Aug 28, 2019, 3:05 AM IST
ಮೈಸೂರು: ಸಂವಿಧಾನದಲ್ಲಿ ಇಲ್ಲದ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿ, ಮೂವರು ಉಪ ಮುಖ್ಯಮಂತ್ರಿಗಳನ್ನೇಕೆ ಮಾಡಬೇಕಿತ್ತು. ಈ ರೀತಿ ಮೂಗಿಗೆ ತುಪ್ಪ ಸವರುವ ಕೆಲಸವನ್ನೇಕೆ ಮಾಡಿದ್ದೀರಿ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ, ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರು ಪಕ್ಷದ ನಿರ್ಧಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮೂರು ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಿದ್ದರಿಂದ ಶಾಸಕರಲ್ಲಿ ಅಸಮಾಧಾನ ಜಾಸ್ತಿಯಾಗಿದೆ. ಖಾತೆ ಹಂಚಿಕೆ ಬಗ್ಗೆಯೂ ಈಗಾಗಲೇ ಹಲವು ಸಚಿವರಲ್ಲಿ ಅಸಮಾಧಾನವಿದೆ. ಈ ರೀತಿ ಕಚ್ಚಾಡಿಕೊಂಡೇ ದೋಸ್ತಿಗಳು ಮನೆಗೆ ಹೋದರು. ರಾಜ್ಯದ ಪರಿಸ್ಥಿತಿಯ ಬಗ್ಗೆ ಪಕ್ಷದ ಹೈಕಮಾಂಡ್ಗೆ ಸೂಕ್ತ ಮಾಹಿತಿ ನೀಡಬೇಕಿತ್ತು.
ಜತೆಗೆ, ಹೈಕಮಾಂಡ್ ಕೂಡ ಸರಿಯಾಗಿ ಯೋಚನೆ ಮಾಡಬೇಕಿತ್ತು. ಇಲ್ಲಿ ಯಡಿಯೂರಪ್ಪ-ಸಂತೋಷ್ ಎಂಬ ಪ್ರಶ್ನೆ ಬರುವುದಿಲ್ಲ. ಯಡಿಯೂರಪ್ಪ ಹಾಗೂ ಪಕ್ಷದ ಧುರೀಣರು ಕುಳಿತು ಈ ಬಗ್ಗೆ ಚರ್ಚಿಸಿ, ಹೊಂದಾಣಿಕೆ ಮಾಡಿಕೊಂಡು ಹೋಗಬೇಕೆಂದು ಸಲಹೆ ನೀಡಿದರು.
“ನಿಮ್ಮನ್ನು ಅಧಿಕಾರಕ್ಕೆ ತಂದ 17 ಶಾಸಕರು ಅತಂತ್ರರಾಗಿದ್ದಾರೆ. ಅವರಿಂದ ನೀವು ಸರ್ಕಾರ ರಚನೆ ಮಾಡಿರುವುದು ಎಂಬುದು ನೆನಪಿರಲಿ. ಅವರಿಲ್ಲದಿದ್ದರೆ ನಿಮ್ಮಿಂದ ಸರ್ಕಾರ ರಚಿಸಲು ಸಾಧ್ಯವಾಗುತ್ತಿತ್ತಾ?. ಸರ್ಕಾರ ರಚಿಸಲು ಬಹುಮತ ಇತ್ತಾ?’ ಎಂದು ಪಕ್ಷದ ನಾಯಕರನ್ನು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ