30 ಕೈ ಶಾಸಕರು ರಾಜೀನಾಮೆ ಕೊಡುತ್ತಾರೆ, ಬಿಜೆಪಿ ಸರ್ಕಾರ ರಚಿಸುತ್ತೆ!
Team Udayavani, Sep 17, 2018, 3:30 PM IST
ಬೆಳಗಾವಿ:ಭಾರತೀಯ ಜನತಾ ಪಕ್ಷ ಆಪರೇಶನ್ ಕಮಲ ಮಾಡುತ್ತಿಲ್ಲ. ಪಕ್ಷದ ಒಳಜಗಳದಿಂದ 22 ಮಂದಿ ಅಲ್ಲ 30 ಶಾಸಕರು ಮೈತ್ರಿ ಸರ್ಕಾರವನ್ನು ಬೀಳಿಸಲಿದ್ದಾರೆ ಎಂಬ ಮಾಹಿತಿ ಇದೆ ಎಂಬುದಾಗಿ ಹುಕ್ಕೇರಿ ಶಾಸಕ, ಮಾಜಿ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ನನಗೆ ಆಪರೇಶನ್ ಕಮಲದ ಜವಾಬ್ದಾರಿ ಕೊಟ್ಟರೂ ಓಕೆ ಎಂದರು. ಆದರೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಒಳಜಗಳವೇ ಹೆಚ್ಚಾಗಿದೆ. ನಾವೇನು ಆಪರೇಶನ್ ಕಮಲ ಮಾಡುತ್ತಿಲ್ಲ ಎಂದರು.
ಒಳಜಗಳದಿಂದ ಸರ್ಕಾರ ಬಿದ್ದರೆ ನಾವು ಸುಮ್ಮನೆ ಕೂರಲ್ಲ. ನಾವು ಮಠ ಕಟ್ಟಿಲ್ಲ, ರಾಜಕಾರಣ ಮಾಡಲು ಬಂದಿರುವುದಾಗಿ. ಹೀಗಾಗಿ ಬಿಜೆಪಿ ಅಧಿಕಾರದ ಗದ್ದುಗೆ ಏರಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ನ ಬೇರೆ ಶಾಸಕರಿಂದ ಸಮ್ಮಿಶ್ರ ಸರ್ಕಾರ ಪತನವಾದರೆ ನಾವು ಜವಾಬ್ದಾರರಲ್ಲ, ಅದಕ್ಕೆ ನಾವೇನೂ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಮುಖಂಡ ಸತೀಶ್ ಜಾರಿಕಿಹೊಳಿ ಮೈತ್ರಿ ಸರ್ಕಾರ ಅಪಾಯದಲ್ಲಿದೆ ಎಂಬ ಸುಳಿವು ನೀಡಿದ ಬೆನ್ನಲ್ಲೇ ಬಿಜೆಪಿ ಈ ಹೇಳಿಕೆಯನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ