ಮಂಜೇಶ್ವರ ಗೋವಿಂದ ಪೈ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕಾಗಿ 30 ಲಕ್ಷ ರೂ. ಧನ ಸಹಾಯ ಮಂಜೂರು
Team Udayavani, Aug 30, 2022, 6:39 PM IST
ಬೆಂಗಳೂರು: ಕನ್ನಡದ ಮೊದಲ ರಾಷ್ಟ್ರ ಕವಿ ಮಂಜೇಶ್ವರ ಗೋವಿಂದ ಪೈ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕಾಗಿ 30 ಲಕ್ಷ ರೂ. ಧನ ಸಹಾಯ ಮಂಜೂರು ಮಾಡಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಮಹತ್ವದ ಆದೇಶ ಪ್ರಕಟಿಸಿದೆ.
ಗೋವಿಂದ ಪೈ ಗಳ ಸಂಶೋಧನಾ ಸಂಪುಟ 1995 ರಲ್ಲಿ ಪ್ರಕಟವಾಗಿತ್ತು. ಇದಾಗಿ ಇಪ್ಪತೈದು ವರ್ಷಗಳು ಕಳೆದಿವೆ. ಸದ್ಯಕ್ಕೆ ಆ ಸಂಪುಟದ ಯಾವುದೇ ಪ್ರತಿಗಳು ಲಭ್ಯವಿರಲಿಲ್ಲ.
ಈ ಹಿನ್ನೆಲೆಯಲ್ಲಿ ಉಡುಪಿಯ ಸಂಶೋಧನಾ ಕೇಂದ್ರದ ಆಡಳಿತಾಧಿಕಾರಿಗಳು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಪತ್ರ ಬರೆದು ಧನ ಸಹಾಯ ಕೋರಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ 30 ಲಕ್ಷ ರೂ. ಅನುದಾನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ.
ಮಂಜೇಶ್ವರ ಗೋವಿಂದ ಪೈಗಳು ಕನ್ನಡದ ಮೊದಲ ರಾಷ್ಟ್ರಕವಿ. ಇಪ್ಪತೈದು ವರ್ಷಗಳ ನಂತರ ಅವರ ಸಂಶೋಧನಾ ಸಂಪುಟ ಪುನರ್ ಮುದ್ರಣಕ್ಕೆ ಸರಕಾರ ಧನಸಹಾಯ ಒದಗಿಸಿದೆ. ಇದರಿಂದ ಗೋವಿಂದ ಪೈಗಳ ಲೇಖನ ಸಂಪತ್ತು ಕನ್ನಡಿಗರನ್ನು ತಲುಪುವಂತಾಗಲಿ ಎಂದು ಆಶಿಸುತ್ತೇನೆ-ವಿ.ಸುನಿಲ್ ಕುಮಾರ್ ಕನ್ನಡ- ಸಂಸ್ಕ್ರತಿ ಹಾಗೂ ಇಂಧನ ಸಚಿವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!