240 ಚಕ್ರದ ಲಾರಿಯಲ್ಲಿ 300 ಟನ್ ತೂಕದ ವಿಷ್ಣು ಪ್ರತಿಮೆ ತರಲು ಹರಸಾಹಸ
Team Udayavani, Dec 1, 2018, 5:27 PM IST
ಚೆನ್ನೈ: ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಕುಗ್ರಾಮವೊಂದರಲ್ಲಿ ಕೆತ್ತಲ್ಪಟ್ಟಿರುವ ಬೃಹತ್ ಏಕಶಿಲಾ ವಿಶ್ವರೂಪ ಮಹಾವಿಷ್ಣು ಪ್ರತಿಮೆಯನ್ನು ಬೆಂಗಳೂರಿಗೆ ತರಲು ಕಳೆದ ಎರಡು ವರ್ಷಗಳಿಂದ ಹರಸಾಹಸ ಪಡುತ್ತಿದ್ದು, ಕೊನೆಗೂ ಭಾರೀ ಗಾತ್ರದ ಪ್ರತಿಮೆಯನ್ನು ಸಾಗಿಸುವ ಪ್ರಯತ್ನಕ್ಕೆ ಫಲ ಸಿಕ್ಕಂತಾಗಿದೆ ಎಂದು ವರದಿ ತಿಳಿಸಿದೆ.
ತಿರುವಣ್ಣಾಮಲೈನಿಂದ ಬೆಂಗಳೂರಿಗೆ ಸಾಗಿಸಬೇಕೆಂದಿದ್ದ 64 ಅಡಿ ಎತ್ತರದ ಮಹಾವಿಷ್ಣುವಿನ ಪ್ರತಿಮೆಯನ್ನು ಕೊನೆಗೂ 240 ಟಯರ್ ಹೊಂದಿರುವ ಟ್ರೈಲರ್(ಅತೀ ಉದ್ದನೆಯ ಲಾರಿ) ಗೆ ಲೋಡ್ ಮಾಡಲಾಗಿದೆ. ಏತನ್ಮಧ್ಯೆ ಇತ್ತೀಚೆಗೆ ಸುರಿದ ಮಳೆಯಿಂದಾಗಿ ಲಾರಿಯ ಚಕ್ರಗಳು ಮಣ್ಣಿನಲ್ಲಿ ಹುದುಗಿಕೊಂಡಿದ್ದು, ಜಲ್ಲಿಕಲ್ಲುಗಳನ್ನು ಸುರಿದು ಟ್ರೈಲರ್ ನ ಚಕ್ರ ಮಣ್ಣಿನಿಂದ ಮೇಲೆ ಬರುವಂತೆ ಮಾಡಲು ಹರಸಾಹಸ ಪಡುತ್ತಿದ್ದಾರೆ ಎಂದು ವರದಿ ವಿವರಿಸಿದೆ.
ಪ್ರತಿಮೆಯ ಮೂಲ ತೂಕ 380 ಟನ್ ಗಳಷ್ಟು ಇದ್ದಿದ್ದು, ಬಳಿಕ ಶಿಲ್ಪಿಗಳು ಅದನ್ನು 80ರಿಂದ 90ಟನ್ ಗೆ ಇಳಿಸುವ ಮೂಲಕ ಭಾರೀ ತೂಕವನ್ನು ಕಡಿಮೆಗೊಳಿಸಿದ್ದಾರೆ. ನಾವು ಆದಷ್ಟು ಶೀಘ್ರ ಇಲ್ಲಿಂದ ಪ್ರತಿಮೆಯನ್ನು ಸ್ಥಳಾಂತರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಬೆಂಗಳೂರಿನ ಕೋದಂಡರಾಮಸ್ವಾಮಿ ಚಾರಿಟೇಬಲ್ ಟ್ರಸ್ಟ್ ಟ್ರಸ್ಟಿ ಡಾ.ಸದಾನಂದ ಅವರು ಟೈಮ್ಸ್ ಆಫ್ ಇಂಡಿಯಾದ ಜತೆ ಮಾತನಾಡುತ್ತ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ