ತಮಿಳುನಾಡಿಗೆ ಸಾಗಿಸುತ್ತಿದ್ದ 300 ಕೆಜಿ ಬೆಳ್ಳಿ ವಶ
Team Udayavani, Feb 3, 2020, 3:05 AM IST
ಬೆಳಗಾವಿ: ಮಹಾರಾಷ್ಟ್ರದಿಂದ ತಮಿಳುನಾಡಿಗೆ ಅಕ್ರಮವಾಗಿ ಬೆಳ್ಳಿ ಗಟ್ಟಿ ಹಾಗೂ ಆಭರಣಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿರುವ ಪೊಲೀಸರು, 63 ಲಕ್ಷ ರೂ. ಮೌಲ್ಯದ 300 ಕೆ.ಜಿ. ಬೆಳ್ಳಿ, 3 ಲಕ್ಷ ರೂ. ನಗದನ್ನು ಹುಕ್ಕೇರಿ ತಾಲೂಕಿನ ದಾದಬಾನಹಟ್ಟಿ ಬಳಿ ವಶಪಡಿಸಿಕೊಂಡಿದ್ದಾರೆ.
ತಮಿಳುನಾಡಿನ ಸವಾಪೇಟ ಸೇಲಂನ ವಿಜಯಕುಮಾರ ಆತ್ಮಾರಾಮ ಶಿಂಧೆ ಹಾಗೂ ಮಹಾ ರಾಷ್ಟ್ರದ ಸಾತಾರಾ ಜಿಲ್ಲೆಯ ಕಟಾವ್ ತಾಲೂಕಿನ ಬೆಳೆವಾಡಿಯ ರಿಯಾಜ್ ಶಾಕೀರ ಹುಸೇನ ಮುಲ್ಲಾನಿ ಎಂಬುವವರನ್ನು ಬಂಧಿಸಲಾಗಿದೆ. ಡಸ್ಟರ್ ಕಾರು, 300 ಕೆ.ಜಿ.ಬೆಳ್ಳಿ ಗಟ್ಟಿ, 3 ಲಕ್ಷ ರೂ. ನಗದು ವಶಪಡಿಸಿಕೊಳ್ಳಲಾಗಿದೆ.
ಖಚಿತ ಮಾಹಿತಿ ಮೇರೆಗೆ ಯಮಕನಮರಡಿ ಹಾಗೂ ಡಿಸಿಐಬಿ ಘಟಕ ಪೊಲೀಸರು, ಕಾರು ತಡೆದು ವಿಚಾರಣೆ ನಡೆಸಿದಾಗ ದೊಡ್ಡ ಪ್ರಮಾಣದಲ್ಲಿ ಬೆಳ್ಳಿ ಪತ್ತೆಯಾಗಿದೆ. ಡಿಸಿಐಬಿ ಘಟಕ ಇನ್ಸ್ಪೆಕ್ಟರ್ ನಿಂಗನಗೌಡ ಪಾಟೀಲ, ಯಮಕನಮರಡಿಯ ರಮೇಶ ಪಾಟೀಲ, ಡಿಸಿಐಬಿ ಎಎಸ್ ಐ ಡಿ.ಕೆ. ಪಾಟೀಲ, ಸಿಬ್ಬಂದಿಗಳಾದ ಟಿ.ಕೆ. ಕೊಳಚಿ, ಎಂ.ಜಿ. ಮುಜಾವರ, ಎಸ್.ಎಂ. ಮಂಗಣ್ಣವರ, ಎಂ.ಆರ್. ಪಠಾಣ, ವಿ.ಆರ್. ನಾಯಕ, ಆರ್.ಬಿ.ಕಲ್ಲೋಳ್ಳಿ ದಾಳಿ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ