ರಾಜ್ಯದಲ್ಲಿ 642ಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ: 304 ಜನರು ಗುಣಮುಖ
Team Udayavani, May 4, 2020, 12:47 PM IST
ಬೆಂಗಳೂರು: ರಾಜ್ಯದಲ್ಲಿ ರವಿವಾರ ಸಂಜೆಯ ನಂತರ ಒಟ್ಟು 28 ಪ್ರಕರಣಗಳು ದೃಢವಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 642ಕ್ಕೆ ಏರಿಕೆಯಾಗಿದೆ. ಹೊಸ 28 ಸೋಂಕಿತರ ಪೈಕಿ 21 ಪ್ರಕರಣಗಳು ದಾವಣಗೆರೆಯಲ್ಲಿ ದೃಢವಾಗಿದೆ.
ಉಳಿದಂತೆ ಹಾವೇರಿಯಲ್ಲಿ ಮೊದಲ ಸೋಂಕು ಪ್ರಕರಣ ಪತ್ತೆಯಾಗಿದ್ದರೆ, ಮಂಡ್ಯದಲ್ಲಿ ಎರಡು, ಕಲಬುರಗಿಯಲ್ಲಿ ಎರಡು, ಚಿಕ್ಕಬಳ್ಳಾಪುರ ವಿಜಯಪುರದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ.
ದಾವಣಗೆರೆಯಲ್ಲಿ ಸೋಂಕಿತ ಸಂಖ್ಯೆ 533ರ ಸಂಪರ್ಕದಿಂದ 18 ಜನರಿಗೆ ಸೋಂಕು ತಾಗಿದ್ದರೆ, ಸೋಂಕಿತ ಸಂಖ್ಯೆ 556ರ ಸಂಪರ್ಕದಿಂದ ಇಬ್ಬರಿಗೆ ಸೋಂಕು ದೃಢವಾಗಿದೆ.
ಮುಂಬೈಗೆ ಪ್ರಯಾಣ ಮಾಡಿದ ಹಿನ್ನಲೆ ಇರುವ ಮಂಡ್ಯ 20 ಮತ್ತು 19 ವರ್ಷದ ಇಬ್ಬರು ಯುವತಿಯರಿಗೆ ಸೋಂಕು ದೃಢವಾಗಿದೆ. ಮುಂಬೈ- ಪುಣೆ ಪ್ರಯಾಣ ಮಾಡಿದ್ದ ಹಾವೇರಿ ಸವಣೂರಿನ ಯುವಕನಿಗೂ ಸೋಕು ತಾಗಿರುವುದು ದೃಢವಾಗಿದೆ.
ಸೋಂಕಿತ ಸಂಖ್ಯೆ 604ರ ಸಂಪರ್ಕದಿಂದ ಕಲಬುರಗಿಯ 36 ವರ್ಷದ ಮಹಿಳೆಗೆ ಸೋಂಕು ತಾಗಿದ್ದರೆ, ಹೈದರಾಬಾದ್ ಗೆ ಪ್ರಯಾಣ ಮಾಡಿದ್ದ 37 ವರ್ಷದ ಚಿಂಚೋಳಿಯ ಯುವಕನಿಗೂ ಸೋಂಕು ದೃಢವಾಗಿದೆ.
ಸೋಂಕಿತ ಸಂಖ್ಯೆ 586ರ ಸಂಪರ್ಕದಿಂದ ಚಿಕ್ಕಬಳ್ಳಾಪುರದ 30 ವರ್ಷದ ವ್ಯಕ್ತಿಗೆ ಸೋಂಕು ತಾಗಿದೆ. ವಿಜಯಪುರದ 62 ವರ್ಷದ ವೃದ್ಧೆಗೆ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ ಸೋಂಕು ಕಾರಣದಿಂದ 26 ಜನರು ಸಾವನ್ನಪ್ಪಿದರೆ, 304 ಜನರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ
Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ
Road Mishap: ಆಗುಂಬೆ ಬಳಿ ಭೀಕರ ಅಪಘಾತ.. ಸ್ಥಳದಲ್ಲೇ ಓರ್ವ ದುರ್ಮರಣ, ಚಾಲಕನ ಸ್ಥಿತಿ ಗಂಭೀರ
Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ
Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ
BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ
Sandalwood; ಎವಿಡೆನ್ಸ್ ಮೇಲೆ ಪ್ರವೀಣ್ ಕಾನ್ಫಿಡೆನ್
MASOCON: ಕೆಎಂಸಿಯಲ್ಲಿ ಮಣಿಪಾಲ್ ಸರ್ಜಿಕಲ್ ಆಂಕೊಲಾಜಿ ಕಾನ್ಫರೆನ್ಸ್ 2024
Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ