ಗುರು ರಾಯರ 346 ನೇ ಮಧ್ಯಾರಾಧನೆ:ಮಂತ್ರಾಲಯದಲ್ಲಿ ಭಕ್ತ ಸಾಗರ
Team Udayavani, Aug 9, 2017, 11:49 AM IST
ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ 346ನೇ ಆರಾಧನೆ ಮಹೋತ್ಸವವನ್ನು ಬುಧವಾರ ಭಕ್ತಿ ಭಾವಗಳಿಂದ ಆಚರಿಸಲಾಗುತ್ತಿದ್ದು, ಶ್ರೀಮಠಕ್ಕೆ ಲಕ್ಷಾಂತರ ಭಕ್ತರು ಹರಿದು ಬಂದಿದ್ದಾರೆ.
ಶ್ರೀಗುರು ರಾಘವೇಂದ್ರರು ಸಶರೀರ ಬೃಂದಾವನಸ್ಥರಾಗಿ ಇಂದಿಗೆ 346 ವಸಂತಗಳು ತುಂಬಿರುವ ಗಳಿಗೆಯಲ್ಲಿ ಪುರೋಹಿತರು ರಾಯರ ಮೂಲ ವೃಂದಾವನಕ್ಕೆ ವಿಶೇಷ ಅಭಿಷೇಕಗಳನ್ನು ಮಾಡಿದರು. ತುಪ್ಪ, ಕ್ಷೀರ, ಒಣ ಹಣ್ಣುಗಳು ಮತ್ತು ಪಂಚಾಮೃತ ಅಭಿಷೇಕ ಮಾಡಲಾಯಿತು.
ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ವಿಶೇಷ ಪೂಜೆಗಳನ್ನು ನೆರವೇರಿಸಿದರು. ಸಂಪ್ರದಾಯದಂತೆ ತಿರುಪತಿ ತಿರುಮಲ ದೇಗುಲದಿಂದ ವಿಶೇಷ ವಸ್ತ್ರವನ್ನು ಸಮರ್ಪಿಸಲಾಗಿದೆ.
ಮಠಕ್ಕೆ ಆಗಮಿಸಿರುವ ಅಸಂಖ್ಯ ಭಕ್ತರ ಅನುಕೂಲಕ್ಕಾಗಿ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದೆ. ನದಿಯಲ್ಲಿ ನೀರಿಲ್ಲದ ಕಾರಣ ಸ್ನಾನಕ್ಕೆ ನದಿ ಪಾತ್ರದಲ್ಲಿ ಶವರ್ಗಳನ್ನು ನಿರ್ಮಿಸಲಾಗಿದೆ. ಆರೋಗ್ಯ, ವಸತಿ, ಸಾರಿಗೆ ಸೌಲಭ್ಯಕ್ಕೆ ಕುಂದುಂಟಾಗದಂತೆ ಸಕಲ ಸೌಕರ್ಯ ಕಲ್ಪಿಸಲಾಗಿದೆ.
ವಿವಿಧೆಡೆಗಳಿಂದ ಗಣ್ಯಾತೀಗಣ್ಯರು ಸೇರಿದಂತೆ 2 ಲಕ್ಷಕ್ಕೂ ಅಧಿಕ ಭಕ್ತರು ಮಂತ್ರಾಲಯಕ್ಕೆ ಆಗಮಿಸಿದ್ದಾರೆ. ದೇಶದ ವಿವಿಧೆಡೆ ಏಕಕಾಲದಲ್ಲಿ ರಾಯರ ಆರಾಧನೆಯನ್ನು ವೈಭವದಿಂದ ನೆರವೇರಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ