ಜು.6ರಂದು ಡಾ.ಬಾಬು ಜಗಜೀವನ್ ರಾಂ 34ನೇ ಪುಣ್ಯಸ್ಮರಣೆ, ಸರಳ ಕಾರ್ಯಕ್ರಮ: ಗೋವಿಂದ ಕಾರಜೋಳ
Team Udayavani, Jul 2, 2020, 1:26 PM IST
ಬೆಂಗಳೂರು: ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಮಂತ್ರಿಗಳಾದ ಡಾ.ಬಾಬು ಜಗಜೀವನ್ ರಾಂ ರವರ 34ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಜುಲೈ 6 ರಂದು ನಡೆಯಲಿದೆ.
ಬೆಳಗ್ಗೆ 10.30 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, , ವಿಧಾನ ಸೌಧದ ಪಶ್ಚಿಮ ದ್ವಾರದ ಬಳಿ ಇರುವ ಡಾ. ಬಾಬು ಜಗಜೀವನ್ ರಾಂ ಅವರ ಪ್ರತಿಮೆಗೆ ಮಾಲಾರ್ಪಣೆ ಸಲ್ಲಿಸಿ, ಗೌರವ ಸಮರ್ಪಿಸಲಿದ್ದಾರೆ.
ಈಗಾಗಲೇ ವ್ಯಾಪಕವಾಗಿ ಹರಡುತ್ತಿರುವ ಕೋವಿಡ್-19 ವೈರಾಣುಗಳನ್ನು ನಿಯಂತ್ರಣಗೊಳಿಸಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ತುಂಬಾ ಸರಳವಾಗಿ, ಹೆಚ್ಚಿನ ಜನಸಂದಣಿ ಸೇರದೇ, ಕಡ್ಡಾಯವಾಗಿ ಮಾಸ್ಕ್ ಧರಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಆಚರಿಬೇಕಾಗಿದೆ.
ಸಾರ್ವಜನಿಕರು, ಸಂಘಟನೆಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು, ಅನುಯಾಯಿಗಳು ಸಹಕರಿಸಬೇಕು. ಈ ಮನವಿಯನ್ನು ಸ್ವಯಂ ಪ್ರೇರಣೆಯಿಂದ ಅನುಸರಿಸಬೇಕು ಎಂದು ಕೋರುತ್ತೇನೆ ಎಂದು ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ
Election Campaign: ಕಾಂಗ್ರೆಸ್ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ