ಮುಂಗಾರು ಮಳೆ ಅಬ್ಬರಕ್ಕೆ 4 ಬಲಿ
Team Udayavani, Jun 24, 2019, 3:04 AM IST
ಬೆಂಗಳೂರು/ಹುಬ್ಬಳ್ಳಿ: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಭಾನುವಾರದ ಮಳೆಯ ಅನಾಹುತಕ್ಕೆ ಮೂವರು ಬಲಿಯಾಗಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದ್ದು, ಹುಬ್ಬಳ್ಳಿಯಲ್ಲಿ ನೀರಿನ ರಭಸಕ್ಕೆ ದ್ವಿಚಕ್ರ ವಾಹನಗಳು ಕೊಚ್ಚಿ ಹೋಗಿವೆ.
ಗದಗ ತಾಲೂಕಿನ ಲಿಂಗದಾಳ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮುಗಿಸಿ ವಾಪಸ್ ಬರುತ್ತಿದ್ದ ದೇವಕ್ಕ ದೊಡ್ಡಣ್ಣವರ (55) ಎಂಬುವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಜತೆಯಲ್ಲಿದ್ದ ಮೊಮ್ಮಗ ದೇವರಾಜ್(12) ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ.
ಇನ್ನೊಂದೆಡೆ, ಬಸವಕಲ್ಯಾಣ ತಾಲೂಕಿನ ಯಲ್ಲದಗುಂಡಿ ಗ್ರಾಮ ವ್ಯಾಪ್ತಿಯಲ್ಲಿ ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮರಳುವಾಗ ಹಳ್ಳದಲ್ಲಿ ತಾಯಿ-ಮಗ ಕೊಚ್ಚಿಕೊಂಡು ಹೋಗಿದ್ದಾರೆ. ಭಾಗ್ಯವಂತ ಪರಮೇಶ್ (13) ಎಂಬುವರ ಶವ ಪತ್ತೆಯಾಗಿದ್ದು, ಅನೀತಾ ಪರಮೇಶ್ (37) ನಾಪತ್ತೆಯಾಗಿದ್ದಾರೆ.
ಹಾರಕೂಡದಿಂದ ಯಲ್ಲದಗುಂಡಿಗೆ ಸೇರುವ ಹಳ್ಳದಲ್ಲಿ ಮೃತನ ಚಿಕ್ಕಮ್ಮ, ಅಣ್ಣ ಸೇರಿ ನಾಲ್ಕು ಜನ ದಾಟುವಾಗ ಈ ದುರ್ಘಟನೆ ಸಂಭವಿಸಿದೆ. ಅಣ್ಣ ಹಾಗೂ ಚಿಕ್ಕಮ್ಮ ಪಾರಾಗಿ ದಡ ಸೇರಿದ್ದಾರೆ. ಮಹಿಳೆಯ ಶವಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.
ಹುಬ್ಬಳ್ಳಿ-ಧಾರವಾಡದಲ್ಲೂ ಭಾರೀ ಮಳೆಯಾಗಿದ್ದು, ಮಳೆಯ ನೀರಿನ ರಭಸಕ್ಕೆ ರಸ್ತೆ ಪಕ್ಕ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳು ಕೊಚ್ಚಿ ಹೋಗಿವೆ. ಮಂಟೂರು ರಸ್ತೆಯ ಅರಳಿಕಟ್ಟೆ ಓಣಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಮನೆಗಳಿಗೆ ಮಳೆ ನೀರು ನುಗ್ಗಿ ತೊಂದರೆಯಾಗಿದ್ದರಿಂದ ಮಳೆಯಲ್ಲೇ ಅಲ್ಲಿನ ನಿವಾಸಿಗಳು ಪ್ರತಿಭಟನೆ ನಡೆಸಿದರು.
ಕುಷ್ಟಗಿ ತಾಲೂಕಿನ ಜುಮಲಾಪೂರ ಗ್ರಾಮದಲ್ಲಿ ಹಳ್ಳದಲ್ಲಿ ಆಕಳು ಕೊಚ್ಚಿ ಹೋಗಿದೆ. ಗದಗ ಜಿಲ್ಲೆ ಲಕ್ಷ್ಮೇಶ್ವರ, ಗೊಜನೂರು ಭಾಗದಲ್ಲಿ ಭಾರೀ ಮಳೆಯಾಗಿದ್ದು, ಗೊಜನೂರು ಹಳ್ಳ ತುಂಬಿ ಹರಿದಿದ್ದರಿಂದ ಗದಗ-ಲಕ್ಷ್ಮೇಶ್ವರ ಮಾರ್ಗದಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.
ಅಜ್ಜಿ-ಮೊಮ್ಮಗಳ ರಕ್ಷಣೆ: ಭಾರೀ ಮಳೆಯಿಂದಾಗಿ ಯಲಬುರ್ಗಾ ಪಟ್ಟಣ ಮತ್ತು ಸಂಗನಾಳ ಮಧ್ಯದ ಹಳ್ಳದ ದಡದಲ್ಲಿ ಸಿಲುಕಿದ್ದ ಅಜ್ಜಿ ಹಾಗೂ ಮೊಮ್ಮಗಳನ್ನು ರಕ್ಷಿಸಲಾಗಿದೆ. ಬೇವಿನ ಬೀಜ ಆಯ್ದುಕೊಳ್ಳಲು ಮಲ್ಲಮ್ಮ ಕಟ್ಟೆಪ್ಪನವರ ಹಾಗೂ ಮೊಮ್ಮಗಳು ಗಂಗಮ್ಮ ಹಳ್ಳ ದಾಟಿ ಹೋಗಿದ್ದರು. ಮರಳಿ ಬರುವಷ್ಟರಲ್ಲಿ ಮಳೆಯಾಗಿ ಹಳ್ಳ ತುಂಬಿ ಬಂದಿದೆ. ಆಗ ಅಜ್ಜಿ-ಬಾಲಕಿ ಇಬ್ಬರು ದಾರಿ ಕಾಣದೇ ಕೂಗಾಡಿದ್ದಾರೆ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಕೂಗು ಕೇಳಿಸಿಕೊಂಡು ಹಗ್ಗ ಮತ್ತು ಏಣಿ ಸಹಾಯದಿಂದ ರಕ್ಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ