4 ವರ್ಷ ಕುಮಾರಸ್ವಾಮಿಯೇ ಸಿಎಂ: ಜಿಟಿಡಿ
Team Udayavani, May 15, 2019, 3:04 AM IST
ಶ್ರೀರಂಗಪಟ್ಟಣ: ರಾಜ್ಯದಲ್ಲಿ ಇನ್ನೂ 4 ವರ್ಷ ಕುಮಾರಸ್ವಾಮಿಯೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ.
ಪಟ್ಟಣದ ಶ್ರೀ ನಿಮಿಷಾಂಬ ದೇವಿ ವರ್ಧಂತ್ಯುತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಮೇ 23ರ ನಂತರ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆಯಾಗುತ್ತಿದೆ ಎನ್ನುತ್ತಿದ್ದಾರೆ. ಆದರೆ, ರಾಜ್ಯದಲ್ಲಿ ಈ ಫಲಿತಾಂಶದಿಂದ ಏನೂ ಬದಲಾವಣೆಯಾಗೋಲ್ಲ.
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದಾಗಿನಿಂದಲೂ ಅಧಿಕಾರ ಹೋಗುತ್ತೆ ಅಂತಾನೇ ಇದ್ದಾರೆ. ಇದುವರೆಗೂ ಅವರು ಹೇಳಿರುವ ಭವಿಷ್ಯವೆಲ್ಲಾ ಸುಳ್ಳಾಗಿದೆ. ಈಗಲೂ ಸರ್ಕಾರ ಉರುಳುವ ಮಾತನಾಡುತ್ತಿದ್ದಾರೆ. ಅದೂ ಸಹ ಸುಳ್ಳಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.