ನೆರೆ ಸಂತ್ರಸ್ತರ ಪರಿಹಾರಕ್ಕೆ 418 ಕೋ.ರೂ. ಬಿಡುಗಡೆ
Team Udayavani, Nov 24, 2021, 6:35 AM IST
ಬೆಂಗಳೂರು: ನೆರೆ ಸಂತ್ರಸ್ತರು ಮತ್ತು ಮನೆ ಕಳೆದುಕೊಂಡವರಿಗೆ ಎಸ್ಡಿಆರ್ಎಫ್ ನಿಧಿ ಯಿಂದ 418.72 ಕೋಟಿ ರೂ. ಪರಿಹಾರ ಬಿಡುಗಡೆ ಮಾಡಿ ಮಂಗಳವಾರ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಮಳೆ ಮತ್ತು ನೆರೆ ಹಾವಳಿಯ ಕುರಿತು ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರೆ ಮಾಡಿ ತ್ವರಿತ ಪರಿಹಾರ ಕ್ರಮಕ್ಕೆ ಸೂಚಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಪ್ರಧಾನಿ ಮೋದಿ ಅವರೊಂದಿಗೆ ದೂರವಾಣಿ ಮಾತುಕತೆ ನಡೆಸಿದ ಬಳಿಕ ಸಿಎಂ ಬೊಮ್ಮಾಯಿ ಭಾರೀ ಮಳೆಯಿಂದ ಜಲಾವೃತಗೊಂಡ ಬೆಂಗ ಳೂರಿನ ಯಲಹಂಕ ಸುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಮುಂದಿನ ದಿನಗಳಲ್ಲಿ ಈ ರೀತಿಯ ದಿಢೀರ್ ನೆರೆ ತಪ್ಪಿಸಲು “ಮಾಸ್ಟರ್ ಪ್ಲ್ರಾನ್’ ರೂಪಿಸುವುದಾಗಿಯೂ ಘೋಷಿಸಿದರು.
ಇದನ್ನೂ ಓದಿ:ಗಾಲ್ವನ್ ಹುತಾತ್ಮರಿಗೆ ಶೌರ್ಯ ಗೌರವ ಪ್ರದಾನ
ಜತೆಗೆ ಪರಿಹಾರ ಮಾರ್ಗಸೂಚಿ ಪ್ರಕಟಿಸಿದ್ದು, ಜುಲೈಯಿಂದ ನವೆಂಬರ್ವರೆಗೆ ಸುರಿದ ಮಳೆಯಿಂದ ಸಂಕಷ್ಟಕ್ಕೆ ಒಳಗಾದ ರಾಜ್ಯದ ಎಲ್ಲ ಜಿಲ್ಲೆಗಳ ಕುಟುಂಬಗಳಿಗೂ ಪರಿಹಾರ ವಿತರಿಸಲು ಸೂಚಿಸಿದರು. ಪ್ರಧಾನಿ ಮೋದಿ ಮಳೆಯಿಂದಾದ ನಷ್ಟದ ವಿವರ ಪಡೆದು, ಅಲ್ಪಾವಧಿ ಮತ್ತು ದೀರ್ಘಾವಧಿ ಪರಿಹಾರ ಕ್ರಮಗಳಿಗೆ ಸೂಚನೆ ನೀಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ