ಹೈಕೋರ್ಟ್ನ ಬೆಂಗಳೂರು , ಧಾರವಾಡ, ಕಲಬುರಗಿ ಪೀಠಗಳಿಗೆ 5 ದಿನ ರಜೆ
Team Udayavani, Aug 26, 2022, 11:00 PM IST
ಬೆಂಗಳೂರು: ಹೈಕೋರ್ಟ್ನ ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಿಗೆ ಆಗಸ್ಟ್ 29ರಂದು ರಜೆ ಘೋಷಿಸಲಾಗಿದೆ.
ಈ ಕುರಿತು ಹೈಕೋರ್ಟ್ ಪ್ರಭಾರಿ ರಿಜಿಸ್ಟ್ರಾರ್ ಜನರಲ್ ಬಿ. ಮುರಳೀಧರ ಪೈ ಅಧಿಸೂಚನೆ ಹೊರಡಿಸಿದ್ದಾರೆ.
ಆ.29ರ ರಜೆಯ ಬದಲಿಗೆ ಅಕ್ಟೋಬರ್ 15ರಂದು ಕೆಲಸದ ದಿನ ಎಂದು ಘೋಷಿಸಲಾಗಿದ್ದು, ಬೆಂಗಳೂರು ಪ್ರಧಾನ ಪೀಠ ಹಾಗೂ ಧಾರವಾಡ ಮತ್ತು ಕಲಬುರಗಿ ಪೀಠಗಳಲ್ಲಿ ಅಕ್ಟೋಬರ್ 15ರಂದು ಕಲಾಪ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಆ. 27 ಮತ್ತು 28 ಕ್ರಮವಾಗಿ ಶನಿವಾರ ಮತ್ತು ರವಿವಾರ ಹೈಕೋರ್ಟ್ನ ರಜಾ ದಿನಗಳು. ಆ.30ರಂದು ಸ್ವರ್ಣಗೌರಿ ವ್ರತ ನಿಮಿತ್ತ ಹೈಕೋರ್ಟ್ ಬೆಂಗಳೂರು ಪ್ರಧಾನಪೀಠ, ಧಾರವಾಡ-ಕಲಬುರಗಿ ಪೀಠಗಳಿಗೆ ರಜೆ ನೀಡಲಾಗಿದೆ. ಆ.31ರಂದು ವರಸಿದ್ಧಿ ವಿನಾಯಕ ವ್ರತ ರಜೆ ಇದೆ. ಆ.29ರಂದು ರಜೆ ಘೋಷಿಸಲಾಗಿರುವುದರಿಂದ ಸೆ.1ರಂದು ಕೋರ್ಟ್ ಕಲಾಪಗಳು ಪುನರಾರಂಭವಾಗಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?