Congress ಸರಕಾರದಿಂದ ಗುತ್ತಿಗೆದಾರರಿಗೆ LOC ಕೊಡಲು 5% ಫಿಕ್ಸ್!! : ಹೆಚ್ ಡಿಕೆ ಆರೋಪ

ಆ ಸಚಿವರು ಯಾರು?... ಇವರು ಸತ್ಯ ಹರಿಶ್ಚಂದ್ರರು...

Team Udayavani, Jun 10, 2023, 5:25 PM IST

1-sfdas-dasd

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರದಲ್ಲಿ ನಡೆದಿದ್ದ ಕಾಮಗಾರಿಗಳಿಗೆ ಎಲ್ ಒಸಿ (LOC) ಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಪರ್ಸಂಟೇಜ್ ಫಿಕ್ಸ್ ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಬೆಂಗಳೂರು ನಗರದ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಭಾಗಿಯಾಗುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ”ಹಿಂದಿನ ಬಿಜೆಪಿ ಸರಕಾರವನ್ನು 40 ಪರ್ಸೆಂಟ್ ಸರಕಾರ ಎಂದು ಟೀಕಿಸುತ್ತಿದ್ದ ಕಾಂಗ್ರೆಸ್, ಈಗ ಅಧಿಕಾರಕ್ಕೆ ಬಂದ ಮೇಲೆ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಮಾಡುತ್ತಿದೆ. ಹಿಂದಿನ ಸರಕಾರದಲ್ಲಿ ಕೈಗೊಳ್ಳಲಾಗಿದ್ದ ಕಾಮಗಾರಿಗಳಿಗೆ LOC ಕೊಡುವುದಕ್ಕೆ ಈ ಸರಕಾರದಲ್ಲಿ 5% ಫಿಕ್ಸ್ ಮಾಡಿದ್ದಾರೆ. ಇಂಥವರು ಭಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸರ್ಕಾರದಲ್ಲಿ ಪ್ರಾರಂಭಿಕ ಹಂತದಲ್ಲಿಯೇ ಅಧಿಕಾರಿಗಳ ಸಭೆ ನಡೆದಿದೆ. ಆ ಸಭೆಯಲ್ಲಿ ಅಧಿಕಾರಿಗಳಿಗೆ ಯಾವ ರೀತಿ ಪಾಠ ಮಾಡಿದ್ದಾರೆ ಇವರು ಎನ್ನುವ ಮಾಹಿತಿ ನನಗಿದೆ. ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಅವರು ಕೆಲವು ಸೂಚನೆಗಳನ್ನು ಕೊಟ್ಟಿದ್ದಾರೆ. ನಾವು ಹೇಳಿದಂತೆ ಮಾತ್ರ ಕೇಳಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ಇದರ ಅರ್ಥ ಏನೆಂದರೆ, ನಮಗೆ ಬೇಕಾದ ಹಾಗೆ ಕೆಲಸ ಮಾಡಿ, ಇಲ್ಲವೇ ಹೊರಡಿ ಎನ್ನುವುದೇ ಈ ಫರ್ಮಾನಿನ ಒಳಾರ್ಥ ಎಂದು ದೂರಿದರು.

ಪ್ರಾರಂಭಿಕ ಹಂತದಲ್ಲಿ ಕಾಂಗ್ರೆಸ್ ಸರಕಾರ ಕೆಲವು ನಿರ್ಧಾರ ತೆಗೆದುಕೊಂಡಿದೆ. ಹಿಂದಿನ ಟೆಂಡರ್ ಗಳು ಸೇರಿದಂತೆ ಅನೇಕ ಕಡೆ ಅನುದಾನ ತಡೆ ಹಿಡಿಯಲಾಗಿದೆ. ಬಿಜೆಪಿ ಸರಕಾರ 600 ಕೋಟಿ ರೂಪಾಯಿಗೂ ಹೆಚ್ಚು ಮೊತ್ತದ ಕಾಮಗಾರಿಗಳಿಗೆ ಕಾರ್ಯಾದೇಶ ನೀಡಿತ್ತು. ಕಳೆದ ಮೇ 6ರಂದು 675 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗಳ ಗುತ್ತಿಗೆದಾರರಿಗೆ ಎಲ್ ಒಸಿ ರಿಲೀಸ್ ಆಯಿತು. ಆ ಸಂದರ್ಭದಲ್ಲಿ ಒಬ್ಬ ಕಾಂಗ್ರೆಸ್ ಎಂಪಿ ಹೇಳಿದ್ದರಂತೆ, ಯಾವುದೇ ಕಾರಣಕ್ಕೂ ಹಣ ಬಿಡುಗಡೆ ಮಾಡಬೇಡಿ, ನಮ್ಮ ಸರ್ಕಾರ ಬರುತ್ತದೆ ಅಂತ ಹೇಳಿದ್ದರಂತೆ ಅವರು. ಅವರು ಯಾಕೆ ಹೇಳಿದ್ದರು? ಯಾರು ಆ ಎಂಪಿ ಯಾರು? ಎಂದು ಪ್ರಶ್ನಿಸಿದರು.

675 ಕೋಟಿ ಮೊತ್ತದ ಎಲ್ ಒಸಿ ಹಣ ಯಾಕೆ ಬಿಡುಗಡೆ ಆಗಲಿಲ್ಲ ಎನ್ನುವುದು ಅನುಮಾನಕ್ಕೆ ಕಾರಣ. ಈಗ LOC ಬಿಡುಗಡೆ ಆಗಬೇಕು ಅಂದರೆ 5 ಪರ್ಸೆಂಟ್ ಕೊಡಲೇಬೇಕು ಎಂದು ಡಿಮ್ಯಾಂಡ್ ಇಟ್ಟಿದ್ದಾರೆ. 40 ಪರ್ಸೆಂಟ್ ಜತೆಗೆ ಹೆಚ್ಚುವರಿಯಾಗಿ 5 ಪರ್ಸೆಂಟ್ ಕೊಟ್ರೆ ಹಣ ಬಿಡುಗಡೆ ಮಾಡ್ತೀವಿ ಅಂತ ಹೇಳಿದ್ದಾರಂತೆ. ಅಲ್ಲಿಗೆ ಇದು 45 ಪರ್ಸೆಂಟ್ ಸರಕಾರ ಎಂದಾಯಿತಲ್ವೆ? ಆಗಿರುವ ಕಾಮಗಾರಿಗಳಿಗೆ ಪರ್ಸಂಟೇಜ್ ಕೇಳುತ್ತಿದ್ದಾರೆ, ಇವರು ಸತ್ಯ ಹರಿಶ್ಚಂದ್ರರು ಎಂದು ಕಿಡಿಕಾರಿದರು.

ಆ ಸಚಿವರು ಯಾರು?
ಅಧಿಕಾರಿಗಳ ಪೋಸ್ಟಿಂಗ್ ಗೆ ರೇಟ್ ಫಿಕ್ಸ್ ಮಾಡಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವಿದೇಶಿ ಪ್ರವಾಸದಲ್ಲಿರುವ ಸಚಿವರೊಬ್ಬರ ಇಲಾಖೆಗೆ ವರ್ಗ ಆಗಿರುವ ಹಿರಿಯ ಅಧಿಕಾರಿ ಒಬ್ಬರಿಗೆ ಅಧಿಕಾರ ವಹಿಸಿಕೊಳ್ಳಲು ಸ್ವತಃ ಸಚಿವರೇ ಅವಕಾಶ ನೀಡಿಲ್ಲ, ಯಾಕೆ? ವಿದೇಶಿ ಪ್ರವಾಸದಲ್ಲಿರುವ ಆ ಸಚಿವರು ಯಾರು? ಆ ಸಚಿವರ ಗಮನಕ್ಕೆ ಬಾರದೆಯೇ ಅವರ ಇಲಾಖೆಗೆ ಪೋಸ್ಟಿಂಗ್ ಅದ ಆ ಅಧಿಕಾರಿ ಯಾರು? ಎನ್ನುವುದನ್ನು ಬಹಿರಂಗ ಮಾಡಲಿ. ಮೊದಲು ಇವರು ನನ್ನ ಬಗ್ಗೆ ಬಗ್ಗೆ ಲಘುವಾಗಿ ಮಾತಾನಾಡುವುದನ್ನು ನಿಲ್ಲಿಸಲಿ ಎಂದು ಕಿಡಿಕಾರಿದರು.

ಸಿಎಂ ಅವರೇ ಆ ಅಧಿಕಾರಿಯನ್ನು ವರ್ಗಾವಣೆ ಮಾಡಿದ್ದಾರೆ. ಅದಕ್ಕೆ ಸಂಬಂಧಪಟ್ಟ ಮಂತ್ರಿ ವಿದೇಶದಲ್ಲಿ ಇದ್ದಾರೆ. ಸಿಎಂ ಆದೇಶ ಮಾಡಿದ್ದರೂ, ನಾನು ಬರುವವರೆಗೂ ಅಧಿಕಾರ ತೆಗೆದುಕೊಳ್ಳಬೇಡಿ ಅಂತ ತಾಕೀತು ಮಾಡಿದ್ದಾರಂತೆ. ಹಾಗಾದರೆ ಎಷ್ಟು ಹಣ ಕೊಟ್ಟು ಬಂದರು ಈ ಅಧಿಕಾರಿ? ಈಗ ‘ವರ್ಗಾವಣೆ ಜ್ಯೋತಿ’ ಕಾರ್ಯಕ್ರಮ ನಡೆಯುತ್ತಿದೆ. ಈ ದಂಧೆ ಬಗ್ಗೆ ಏನು ಹೇಳ್ತಾರೆ ಇವರು. ಎಸಿಬಿ ದಾಳಿಗೆ ಒಳಗಾಗಿದ್ದ ಇನ್ನೊಬ್ಬ ಅಧಿಕಾರಿಯನ್ನು ಸಿಎಂ ಕಚೇರಿಯಲ್ಲಿಯೇ ಇಟ್ಟುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

Video: ಬೈಕ್‌ನಲ್ಲಿ ಚಲಿಸುವ ವೇಳೆ ಹಾವು ಕಡಿತ; ಸೆರೆ ಹಿಡಿದ ಹಾವಿನಿಂದಲೇ ಪ್ರಾಣ ಹಾನಿ.!

h c mahadevappa

BJP- JDS ಮೈತ್ರಿಯಿಂದ ಕಾಂಗ್ರೆಸ್ ಗೆ ನಷ್ಟವಿಲ್ಲ: ಸಚಿವ ಮಹದೇವಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police

Doddaballapur:15 ಟನ್ ಗೋ ಮಾಂಸ ಸಾಗಿಸುತ್ತಿದ್ದ ಏಳು ಮಂದಿಯ ಬಂಧನ

Khandre

BJP-JDS ಸ್ಥಿತಿ ಹೇಳ ಹೆಸರಿಲ್ಲದಂತಾಗುತ್ತದೆ: ಸಚಿವ ಈಶ್ವರ ಖಂಡ್ರೆ

jameer

HDK ಮುಸ್ಲಿಂ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ: ಸಚಿವ ಜಮೀರ್ ಆಕ್ರೋಶ

ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Karnataka; ಕಾಂಗ್ರೆಸ್ ಗೆದ್ದ ಬಳಿಕ ‘ಕರ್ನಾಟಕ ಕುಡುಕರ ತೋಟ’ವಾಗಿದೆ: ಕುಮಾರಸ್ವಾಮಿ ಟೀಕೆ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

Exam 9, 11ನೇಗೂ ಬೋರ್ಡ್‌ ಪರೀಕ್ಷೆ: ಈ ವರ್ಷದಿಂದಲೇ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಲು ಆದೇಶ

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-asdsad

Kannada in UK ; ಲಂಡನ್ ನಲ್ಲಿ ಮೊಳಗಲಿರುವ ಕನ್ನಡ ಬಳಗದ ಡಿಂಡಿಮ

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

Sandalwood; ಡಬ್ಬಿಂಗ್ ಮುಗಿಸಿದ ‘ಜಲಂಧರ’

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

gautam

World Cup 2023; ರೋಹಿತ್- ವಿರಾಟ್ ಗಿಂತ ಬಾಬರ್ ಅಜಂ ಉತ್ತಮ ಪ್ರದರ್ಶನ ನೀಡಬಹುದು: ಗಂಭೀರ್

1-sadasd

Kumta ; ಮಸೀದಿಯಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೌಲ್ವಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.