ಮರ ಬಿದ್ದು ಯುವಕ ಸಾವು: ಕುಟುಂಬಸ್ಥರಿಗೆ ಐದು ಲಕ್ಷ ಪರಿಹಾರ; ಡಿಸಿ ನಿತೇಶ್ ಪಾಟೀಲ
Team Udayavani, Sep 13, 2022, 8:05 PM IST
ಬೆಳಗಾವಿ: ನಗರದ ಆರ್.ಟಿ.ಓ. ವೃತ್ತದ ಸಮೀಪ ಬೃಹತ್ ಮರ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದ ಯುವಕನ ಕುಟುಂಬಸ್ಥರಿಗೆ ತಕ್ಷಣವೇ ಐದು ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಇದನ್ನೂ ಓದಿ:ಚಿಂಚೋಳಿ: ವಸತಿ ಶಾಲೆಯ ಬಾಲಕಿಯರಿಗೆ ಲೈಂಗಿಕ ಕಿರುಕುಳ; ಇಬ್ಬರ ಬಂಧನ
ಬೆಳಗಾವಿ ತಾಲ್ಲೂಕು ತುಮ್ಮರಗುದ್ದಿ ಗ್ರಾಮದ ಸಿದ್ದನಹಳ್ಳಿ ಮಜರೆ ನಿವಾಸಿ ರಾಕೇಶ್ ಲಗಮಪ್ಪ ಸುಲಧಾಳ(27) ಎಂಬ ಯುವಕ ಮಂಗಳವಾರ ನಗರದ ಆರ್.ಟಿ.ಓ. ವೃತ್ತದ ಮರಾಠಾ ಮಂಡಳ ಶಾಲೆಯ ಬಳಿ ಬೈಕ್ ಮೇಲೆ ತೆರಳುತ್ತಿರುವಾಗ ಮಳೆ-ಗಾಳಿಯಿಂದ ಬೃಹತ್ ಮರ ಬಿದ್ದು ಮೃತಪಟ್ಟಿದ್ದನು.
ಈ ಕುರಿತು ಬಿಮ್ಸ್ ನಿಂದ ಮರಣೋತ್ತರ ವರದಿ ಪಡೆದುಕೊಂಡು ತಕ್ಷಣವೇ ಮೃತ ಯವಕನ ತಾಯಿ ಹಾಲವ್ವ ಲಗಮಪ್ಪ ಸುಲಧಾಳ ಅವರ ಆಕ್ಸಿಸ್ ಬ್ಯಾಂಕ್ ಖಾತೆಗೆ ಐದು ಲಕ್ಷ ರೂಪಾಯಿ ಪರಿಹಾರಧನವನ್ನು ಬೆಳಗಾವಿ ತಹಶೀಲ್ದಾರ ಕಚೇರಿಯಿಂದ ಆರ್.ಟಿ.ಜಿ.ಎಸ್. ಮೂಲಕ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಮೃತ ಯುವಕ ರಾಕೇಶ್ ಲಗಮಪ್ಪ ಸುಲಧಾಳ ಅವರ ಕುಟುಂಬಕ್ಕೆ ಜಿಲ್ಲಾದಿಕಾರಿಗಳು ಸಾಂತ್ವನ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ