ಕಾರು ಕ್ಯಾಂಟರ್ ಡಿಕ್ಕಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವು
Team Udayavani, Jul 11, 2017, 8:07 PM IST
ಕನಕಪುರ : ಕ್ಯಾಂಟರ್ ಹಾಗೂ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ತೋಪುಗನಹಳ್ಳಿಯಲ್ಲಿ ಸಂಭವಿಸಿದೆ.
ಬೆಂಗಳೂರು ಕನಕಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು ಕಾರು ಕನಕಪುರದಿಂದ ಬೆಂಗಳೂರಿನ ಕಡೆ ಸಂಚರಿಸುತ್ತಿದ್ದು ಎನ್ನಲಾಗಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಕನಕಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.