Congress ಶಾಸಕರಿಗೆ ಈಗಲೂ 50 ಕೋ.ರೂ. ಆಫರ್: ಸಿಎಂ ಹೊಸ ಬಾಂಬ್
Team Udayavani, Mar 22, 2024, 10:18 PM IST
ಬೆಂಗಳೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಈಗಲೂ ಬಿಜೆಪಿಯಿಂದ ಪ್ರಯತ್ನ ನಡೆದಿದ್ದು, ತಲಾ 50 ಕೋಟಿ ರೂ. ಆಫರ್ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ಸಂಪೂರ್ಣ ಬಹುಮತ ಹೊಂದಿರುವ ಸರಕಾರ ಇದ್ದರೂ “ಆಪರೇಷನ್ ಕಮಲ’ಕ್ಕೆ ಪ್ರಯತ್ನ ನಡೆಯುತ್ತಲೇ ಇದೆ. ನಮ್ಮ ಶಾಸಕರಿಗೆ ರಾಜೀನಾಮೆ ನೀಡುವಂತೆ ಇವತ್ತಿಗೂ ಅವರು (ಬಿಜೆಪಿ) 50 ಕೋಟಿ ರೂ. ಆಫರ್ ಮಾಡುತ್ತಿದ್ದಾರೆ. ಜತೆಗೆ ರಾಜೀನಾಮೆಯಿಂದ ತೆರವಾಗುವ ಸ್ಥಾನಕ್ಕೆ ನಡೆಯುವ ಚುನಾವಣೆ ಖರ್ಚು ಕೂಡ ತಾವೇ ಭರಿಸುವುದಾಗಿಯೂ ಹೇಳುತ್ತಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಗಂಭೀರ ಆರೋಪ ಮಾಡಿದರು.
ಈ ಹಿಂದೆ ಕೂಡ ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿ ಮಾಡಿ ಸರಕಾರವನ್ನು ಬೀಳಿಸಿದ್ದರು. ಅವರು ಭ್ರಷ್ಟಾಚಾರದ ಪಿತಾಮಹ (ಬಿಜೆಪಿಗೆ). ಅದೇ ಹಣದಿಂದ ಈಗಲೂ ಖರೀದಿಗೆ ಯತ್ನ ಮುಂದುವರಿದಿದೆ ಎಂದು ದೂರಿದರು.
ಇ.ಡಿ., ಐಟಿ ಸೇರಿ ಸರಕಾರದ ಅಂಗಸಂಸ್ಥೆಗಳು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿವೆ. ಬರೀ ಕಾಂಗ್ರೆಸ್ನಲ್ಲಿ ಮಾತ್ರ ಶ್ರೀಮಂತರಿದ್ದಾರೆಯೇ? ಬಿಜೆಪಿಯಲ್ಲಿ ಯಾರೂ ಇಲ್ಲವೇ? ಅಕ್ರಮ ಸಂಪಾದನೆ ಮಾಡಿದವರು ಕಮಲ ಪಾಳಯದಲ್ಲಿ ಯಾರೂ ಇಲ್ಲವೇ? ಕಾಂಗ್ರೆಸ್ನ ಖಾತೆಗಳಿಗೆ ನಿರ್ಬಂಧ ಹೇರಲಾಗಿದೆ. ಬಿಜೆಪಿ ಖಾತೆಗಳಿಗೆ ಯಾಕಿಲ್ಲ ಈ ನಿರ್ಬಂಧ ಎಂದು ತರಾಟೆಗೆ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ