ಕಾರಿನಲ್ಲಿ ಸಾಗಾಟ ಮಾಡಲಾಗುತ್ತಿದ್ದ 50 ಕೆ.ಜಿ ಗಾಂಜಾ ವಶ: ಆರೋಪಿ ಬಂಧನ
Team Udayavani, Oct 1, 2020, 7:55 PM IST
ಬೀದರ್: ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ವೇಳೆ ತ್ವರಿತ ಕಾರ್ಯಾಚರಣೆ ನಡೆಸಿದ ಪೊಲೀಸರು, ಓರ್ವ ವ್ಯಕ್ತಿಯನ್ನು ಬಂಧಿಸಿ, ಸುಮಾರು 5 ಲಕ್ಷ ಮೌಲ್ಯದ 50 ಕೆ.ಜಿ ಗಾಂಜಾ ಮತ್ತು 10 ಲಕ್ಷ ರೂ. ಗಳ ಕಾರನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಬೀದರ್-ವಡಗಾಂವ ಮುಖ್ಯ ರಸ್ತೆಯ ನವಲಾಸಪೂರ ಕ್ರಾಸ್ ಬಳಿ ಸ್ವಿಫ್ಟ್ ಕಾರಿನಲ್ಲಿ ಗಾಂಜಾ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಪಡೆದ ಜನವಾಡಾ ಠಾಣೆಯ ಪೊಲೀಸರು ದಾಳಿ ನಡೆಸಿದ ಆರೋಪಿಯನ್ನು ಬಂಧಿಸಿದ್ದಾರೆ.
ತೆಲಂಗಾಣಾದ ದಬಕುಂಟಾ ತಾಂಡಾದ ದೇವಿದಾಸ ಲಕ್ಷ್ಮಣ ರಾಠೋಡ (28) ಬಂಧಿತ ಆರೋಪಿ. ತೆಲಂಗಾಣಾದ ಸಂಗಾರೆಡ್ಡಿ ಕಡೆಯಿಂದ ಜಿಲ್ಲೆಯ ನವಲಾಸಪೂರ ಮುಖಾಂತರ ಮಹಾರಾಷ್ಟ್ರಕ್ಕೆ ಗಾಂಜಾ ಸಾಗಿಸುತ್ತಿದ್ದ ವೇಳೆ ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದಾರೆ.
ಪಿಎಸ್ಐ ಶಿವರಾಜ ಪಾಟೀಲ, ಸಿಬ್ಬಂದಿಗಳಾದ ರಾಜು, ರವೀಂದ್ರ ಸಪಾಟೆ, ಪ್ರಭಾಕರ, ಬಾಬುಶೆಟ್ಟಿ, ಇಸ್ಮಾಯಿಲ್ ಮತ್ತು ಚಾಲಕ ಪ್ರಭಾಕರ ದಾಳಿ ನಡೆಸಿದ್ದಾರೆ. ಘಟನೆ ಕುರಿತು ಜನವಾಠಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ