ಕನ್ನಡದ 51 ಕವನಗಳು ನೇಪಾಳಿ ಭಾಷೆಗೆ ತರ್ಜುಮೆ: ಮನು ಬಳಿಗಾರ್
Team Udayavani, Aug 19, 2019, 3:03 AM IST
ಕೋಲಾರ: ಕನ್ನಡದ ಹೆಸರಾಂತ ಕವಿಗಳ 51 ಕವನಗಳನ್ನು ನೇಪಾಳಿ ಭಾಷೆಗೆ ಅನುವಾದಿಸಿ “ಭಾರತ್ ಶಾಶ್ವತ್ ಆವಾಜ್’ ಹೆಸರಿನಲ್ಲಿ ಬಿಡುಗಡೆ ಮಾಡಲಾಗಿದೆ ಎಂದು ಕಸಾಪ ರಾಜ್ಯಾಧ್ಯಕ್ಷ ಮನು ಬಳಿಗಾರ್ ತಿಳಿಸಿದ್ದಾರೆ.
ನಗರದಲ್ಲಿ ನಡೆಯುತ್ತಿರುವ ದಲಿತ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲು ಆಗಮಿಸಿದ ಅವರು, “ಉದಯವಾಣಿ’ ಜತೆ ಮಾತನಾಡಿದರು. ಕುವೆಂಪು, ಬೇಂದ್ರೆಯಂತ ಹೆಸರಾಂತ ಕವಿಗಳ 51 ಕನ್ನಡ ಕವನಗಳು ನೇಪಾಳಿ ಭಾಷೆಯಲ್ಲಿ ಈಗಾಗಲೇ ಅನುವಾದಗೊಂಡಿದೆ.
ಹಾಗೆಯೇ ನೇಪಾಳಿ ಭಾಷೆಯ 50 ಕವನಗಳನ್ನು ಆಧುನಿಕ ನೇಪಾಳಿ ಕವನಗಳು ಹೆಸರಿನಲ್ಲಿ ಕನ್ನಡಕ್ಕೆ ಅನುವಾದಿಸಲಾಗಿದ್ದು, ಬಿಡುಗಡೆಗೆ ಕಾಯಲಾಗುತ್ತಿದೆ. ಬಹ್ರೇನ್ ಕನ್ನಡಿಗರು ಅಲ್ಲಿ ಕನ್ನಡ ಭವನವೊಂದನ್ನು ನಿರ್ಮಿಸಲು ಮುಂದಾಗಿದ್ದು, ಕನ್ನಡ ಸಾಹಿತ್ಯ ಪರಿಷತ್ನಿಂದ 25 ಲಕ್ಷ ರೂ.ನೀಡಲು ಕೋಲಾರದಲ್ಲಿ ನಡೆದ ಕಾರ್ಯ ಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಲ್ಲಿ ನಿರ್ಮಾಣವಾಗುವ ಸಭಾಂಗಣಕ್ಕೆ ಕನ್ನಡ ಸಾಹಿತ್ಯ ಪರಿಷತ್ ಭವನವೆಂದೇ ನಾಮಕರಣ ಮಾಡಲು ಕೋರಲಾಗಿದೆ. ಕನ್ನಡಿಗರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಉದ್ಯೋಗ ಮಾಹಿತಿ ನೀಡುವ ಸಲುವಾಗಿ “ಉದ್ಯೋಗ’ ಹೆಸರಿನ ಪೋರ್ಟಲ್ ಆರಂಭಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ