ರಾಜ್ಯದಲ್ಲಿ ಕೋವಿಡ್-19 ಸ್ಪೋಟ: ಒಂದೇ ದಿನ 53 ಜನರಲ್ಲಿ ಸೋಂಕು ಪತ್ತೆ

ರಾಜ್ಯಕ್ಕೆ ತಲೆನೋವಾದ ಅಜ್ಮೀರ್, ಅಹಮದಾಬಾದ್ ಪ್ರವಾಸಿಗರು

Team Udayavani, May 10, 2020, 1:11 PM IST

ರಾಜ್ಯದಲ್ಲಿ ಕೋವಿಡ್-19 ಸ್ಪೋಟ: ಒಂದೇ ದಿನ 53 ಜನರಿಗೆ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಮಹಾಸ್ಪೋಟವೇ ಸಂಭವಿಸಿದೆ. ಇದೇ ಮೊದಲ ಬಾರಿಗೆ ಒಂದು ದಿನದ ಕೋವಿಡ್ ಸೋಂಕಿತರ ಸಂಖ್ಯ ಅರ್ಧಶತಕದ ಗಡಿ ದಾಟಿದೆ. ಇಂದು ರಾಜ್ಯದಲ್ಲಿ 53 ಜನರಿಗೆ ಸೋಂಕು ತಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ.

ರಾಜಸ್ಥಾನದ ಅಜ್ಮೀರ್ ನಿಂದ ರಾಜ್ಯಕ್ಕೆ ಆಗಮಿಸಿದವರ ಕಾರಣದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಈ ಮಟ್ಟಿನ ಏರಿಕೆ ಕಂಡು ಬಂದಿದೆ. ಅಜ್ಮೀರ್ ನಿಂದ ಬೆಳಗಾವಿಗೆ ಬಂದಿದ್ದ 22 ಜನರಿಗೆ ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಹೊಸ ಎಂಟು ಕೋವಿಡ್ -19 ಪ್ರಕರಣ ದೃಢವಾಗಿದೆ. ಇವರೆಲ್ಲರೂ ರಾಜಸ್ಥಾನದ ಅಜ್ಮೀರ್ ಪ್ರವಾಸದ ಹಿನ್ನಲೆ ಹೊಂದಿದವರು.

ಅಜ್ಮೀರ್ ಪ್ರವಾಸದ ಹಿನ್ನಲೆ ಹೊಂದಿದವರ ಕಾರಣದಿಂದ ದಾವಣಗೆರೆಯಲ್ಲಿ ಒಂದು ಪ್ರಕರಣ, ದೃಢವಾಗಿದೆ. ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಒಂದು ಪ್ರಕರಣ ದಾಖಲಾಗಿದ್ದು, ಸೋಂಕಿತ ಸಂಖ್ಯೆ 790ರ ಸಂಪರ್ಕದಿಂದ ಬಂದಿದೆ.

ಇದುವರೆಗೆ ಒಂದೂ ಪ್ರಕರಣ ಕಂಡಿರದ ಮಲೆನಾಡು ಶಿವಮೊಗ್ಗ ಜಿಲ್ಲೆಯಲ್ಲಿ ಎಂಟು ಪ್ರಕರಣಗಳು ದೃಢವಾಗಿದೆ. ಇವರೆಲ್ಲರೂ ಅಹಮದಾಬಾದ್ ನಿಂದ ಬಂದವರಾಗಿದ್ದಾರೆ.

ಕಲಬುರಗಿಯಲ್ಲಿ ಮೂರು ಪ್ರಕರಣ ದೃಢವಾಗಿದ್ದು, ಓರ್ವ ಮಹಾರಾಷ್ಟ್ರದಿಂದ ವ್ಯಕ್ತಿಗೆ ಸೋಂಕು ತಾಗಿದೆ. ಸೋಂಕಿತ ಸಂಖ್ಯೆ 604ರ ಸಂಪರ್ಕದಿಂದ 72ರ ವೃದ್ಧನಿಗೆ ಸೋಂಕು ಬಂದಿದೆ. ಅಫಜಲಪುರದ 35 ವರ್ಷದ ಪುರುಷನಿಗೂ ಸೋಂಕು ತಾಗಿದೆ.

ಬೆಂಗಳೂರು ನಗರದಲ್ಲಿ ಮೂರು ಪ್ರಕರಣ ದೃಢವಾಗಿದ್ದು, ಅದರಲ್ಲಿ ಓರ್ವ ಮಹಿಳೆ (56 ವ) ಸಾವನ್ನಪ್ಪಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕಯಾಗಿದ್ದು, ಮತ್ತೆ ಏಳು ಸೋಂಕು ಪ್ರಕರಣ ಖಚಿತವಾಗಿದೆ. ಸೋಂಕಿತ ಸಂಖ್ಯೆ 659 ರ ಸಂಪರ್ಕದಿಂದ ಸೋಂಕು ಹರಡಿರುವುದು ಖಚಿತವಾಗಿದೆ.

ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ. ಇವರಲ್ಲಿ 31 ಜನರು ಸಾವನ್ನಪ್ಪಿದ್ದು, 405 ಸೋಂಕಿತರು ಗುಣಮುಖರಾಗಿದ್ದಾರೆ.

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.