ಅರಣ್ಯ ಇಲಾಖೆಯ ವಶದಲ್ಲಿರುವ 6 ಲಕ್ಷ ಹೆಕ್ಟೇರ್ ಭೂಮಿ ಕಂದಾಯ ಇಲಾಖೆಗೆ
ಆಸ್ಪತ್ರೆಯಿಂದ ಹಿಡಿದು ಹಲವು ಸಾರ್ವಜನಿಕ ಕೆಲಸಗಳಿಗಾಗಿ ಬಳಕೆ, ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ತೆರೆ
Team Udayavani, May 4, 2022, 8:25 PM IST
ಬೆಂಗಳೂರು: ತನ್ನ ವಶದಲ್ಲಿರುವ ಆರು ಲಕ್ಷ ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆ ಕಂದಾಯ ಇಲಾಖೆಗೆ ಹಿಂತಿರುಗಿಸಲಿದ್ದು ಈ ಹಿನ್ನೆಲೆಯಲ್ಲಿ ತನ್ನ ಅಗತ್ಯಕ್ಕೆ ಬೇಕಾದ ಭೂಮಿಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲು ಸರ್ಕಾರ ನಿರ್ಧರಿಸಿದೆ. ಆ ಮೂಲಕ ಮೈಸೂರು,ಚಾಮರಾಜನಗರ,ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಇರುವ ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಜತೆ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಈ ವಿಷಯ ತಿಳಿಸಿದ್ದು, ಅರಣ್ಯ ಇಲಾಖೆಯ ವಶದಲ್ಲಿ ಆರು ಲಕ್ಷ ಹೆಕ್ಟೇರ್ ನಷ್ಟು ಭೂಮಿ ಡೀಮ್ಡ್ ಅರಣ್ಯ ಪ್ರದೇಶವೆಂದು ಗುರುತಿಸಲಾಗಿದ್ದು ಮೂಲತ: ಇದು ಕಂದಾಯ ಇಲಾಖೆಗೆ ಸೇರಿದ್ದು ಎಂದರು.
ಈಗ ಈ ಭೂಮಿಯನ್ನು ಅರಣ್ಯ ಇಲಾಖೆಗೆ ಕಂದಾಯ ಇಲಾಖೆಗೆ ಹಸ್ತಾಂತರಿಸಲಿದ್ದು,ಹೀಗೆ ಕಂದಾಯ ಇಲಾಖೆಗೆ ಮರಳಲಿರುವ ಬಹುತೇಕ ಭೂಮಿಯನ್ನು ರೈತರಿಗೆ ಹಂಚಲು ನಿರ್ಧರಿಸಲಾಗಿದೆ ಎಂದರು.
ಕಂದಾಯ ಇಲಾಖೆಗೆ ಮರಳಿ ಬರಲಿರುವ ಭೂಮಿಯ ಪೈಕಿ ಎಷ್ಟು ಪ್ರಮಾಣದ ಭೂಮಿ ಸರ್ಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸಲಾಗುತ್ತಿದ್ದು,ಆಸ್ಪತ್ರೆಯಿಂದ ಹಿಡಿದು ಹಲವು ಸಾರ್ವಜನಿಕ ಕೆಲಸಗಳಿಗಾಗಿ ಇದು ಬಳಕೆಯಾಗಲಿದೆ. ಉಳಿದಂತೆ ಐದು ಲಕ್ಷ ಹೆಕ್ಟೇರ್ ನಷ್ಟು ಭೂಮಿಯನ್ನು ರೈತರಿಗೆ ಹಂಚಲಾಗುವುದು ಎಂದ ಅವರು,ಇದರಿಂದಾಗಿ ದಶಕಗಳಿಂದ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರ ಸಮಸ್ಯೆ ಶಾಶ್ವತವಾಗಿ ಪರಿಹಾರವಾಗಲಿದೆ ಎಂದರು.
ಈ ಮಧ್ಯೆ ಕೊಡಗು,ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ತೊಂಭತ್ತು ಸಾವಿರ ಎಕರೆಗೂ ಹೆಚ್ಚು ಭೂಮಿ ಒತ್ತುವರಿಯಾಗಿದ್ದು ಹೀಗೆ ಒತ್ತುವರಿಯಾದ ಜಮೀನನ್ನು ಒತ್ತುವರಿದಾರರಿಗೇ ಗುತ್ತಿಗೆ ಆಧಾರದ ಮೇಲೆ ನೀಡಲು ತೀರ್ಮಾನಿಸಲಾಗಿದೆ ಎಂದರು.
ಕೊಡಗು ಜಿಲ್ಲೆಯಲ್ಲಿ ಹನ್ನೆರಡು ಸಾವಿರ ಎಕರೆ ಭೂಮಿ,ಹಾಸನದಲ್ಲಿ ಮೂವತ್ತು ಸಾವಿರ ಎಕರೆ ಭೂಮಿ ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ನಲವತ್ತೈದು ಸಾವಿರ ಎಕರೆ ಭೂಮಿ ಒತ್ತುವರಿಯಾಗಿದೆ ಎಂದು ವಿವರ ನೀಡಿದರು.
ಹೀಗೆ ಒತ್ತುವರಿಯಾದ ಭೂಮಿಯಲ್ಲಿ ಕಾಫಿ,ಏಲಕ್ಕಿ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತಿದ್ದು ಈ ಭೂಮಿಯನ್ನು ಮೂವತ್ತು ವರ್ಷಗಳ ಗುತ್ತಿಗೆ ಆಧಾರದ ಮೇಲೆ ಒತ್ತುವರಿದಾರರಿಗೇ ನೀಡಲಾಗುವುದು ಎಂದರು.
ಹೀಗೆ ಒತ್ತುವರಿಯಾದ ಭೂಮಿಯ ಪೈಕಿ ಐದು ಎಕರೆಗಿಂತ ಕಡಿಮೆ ಪ್ರಮಾಣದ ಭೂಮಿಯನ್ನು ಒತ್ತುವರಿ ಮಾಡಿಕೊಂಡವರ ಸಂಖ್ಯೆ ಶೇಕಡಾ ಎಂಭತ್ತರಷ್ಟಿದೆ ಎಂದು ಅವರು ವಿವರ ನೀಡಿದರು.
ಹೀಗಾಗಿ ಒಂದರಿಂದ ಎರಡು ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಎಕರೆಗೆ ವಾರ್ಷಿಕ ಒಂದೂವರೆ ಸಾವಿರ ರೂಪಾಯಿಗಳಿಂದ ಎರಡು ಸಾವಿರ ರೂಪಾಯಿಗಳಷ್ಟು ಗುತ್ತಿಗೆ ಹಣ ನಿಗದಿ ಪಡಿಸಲಾಗುವುದು. ಇನ್ನು ಮೂರರಿಂದ ಐದು ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಎರಡರಿಂದ ಎರಡೂವರೆ ಸಾವಿರ ರೂಪಾಯಿ,ಐದರಿಂದ ಹತ್ತು ಎಕರೆ ಮೇಲ್ಪಟ್ಟ ಭೂಮಿಯನ್ನು ಒತ್ತುವರಿ ಮಾಡಿಕೊಂಡವರಿಗೆ ಎರಡೂವರೆಯಿಂದ ಮೂರು ಸಾವಿರ ರೂಪಾಯಿ ಗುತ್ತಿಗೆ ದರ ನಿಗದಿ ಪಡಿಸಲಾಗುವುದು. ಇದೇ ರೀತಿ ಸ್ಲ್ಪಾಬ್ ಆಧಾರದ ಮೇಲೆ ಒತ್ತುವರಿ ಭೂಮಿಗೆ ಗುತ್ತಿಗೆ ದರವನ್ನು ನಿಗದಿ ಮಾಡಲಾಗುವುದು ಎಂದ ಅವರು,ಇಂತಹ ಭೂಮಿಯನ್ನು ಹಲ ಕಾಲದಿಂದ ಒತ್ತುವರಿದಾರರು ಸರ್ಕಾರಕ್ಕೆ ಹಣ ಪಾವತಿಸದೆಯೇ ಅನುಭವಿಸುತ್ತಿದ್ದರು. ಆದರೆ ಇನ್ನು ಮುಂದೆ ಅವರು ಗುತ್ತಿಗೆ ಹಣ ಪಾವತಿಸಬೇಕಾಗುತ್ತದೆ.ಆ ಮೂಲಕ ಒತ್ತುವರಿ ಜಮೀನು ಸರ್ಕಾರದ್ದು ಎಂದು ದಾಖಲೆಗಳಲ್ಲಿ ಖಚಿತವಾಗಿ ಗುರುತಿಸಲ್ಪಡುತ್ತದೆ ಎಂದರು.
ಇದೇ ರೀತಿ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒತ್ತುವರಿ ಗೇರು ಭೂಮಿಯನ್ನು ಒತ್ತುವರಿದಾರರಿಗೇ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ