ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ


Team Udayavani, Jan 28, 2022, 7:10 AM IST

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಬೆಂಗಳೂರು: ಕೊರೊನಾ ಸಂಕಷ್ಟದ ನಡುವೆಯೇ ಅಧಿಕಾರಕ್ಕೇರಿದ್ದ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಶುಕ್ರವಾರಕ್ಕೆ ಆರು ತಿಂಗಳುಗಳನ್ನು ಯಶಸ್ವಿಯಾಗಿ ಪೂರೈಸಿದೆ. ಸರಕಾರ ಆರಂಭವಾದ ದಿನದಿಂದಲೂ ಪ್ರಾಕೃತಿಕ ಮತ್ತು ರಾಜಕೀಯ ಸವಾಲು ಗಳನ್ನು ಎದುರಿಸಿರುವ ಮುಖ್ಯಮಂತ್ರಿ ಬೊಮ್ಮಾಯಿ ಇನ್ನು ಒಂದೂವರೆ ವರ್ಷದಲ್ಲಿ ಎದುರಾಗಲಿರುವ  ಚುನಾವಣೆಗೂ ಸಿದ್ಧರಾಗಬೇಕಿರುವುದು ವಿಶೇಷ.

ಆರು ತಿಂಗಳ ಹಿಂದೆ ಬಿ.ಎಸ್‌.ವೈ. ಸಿಎಂ ಸ್ಥಾನದಿಂದ ಕೆಳಗಿಳಿದಾಗ ಪಕ್ಷದ ದಿಲ್ಲಿ ವರಿಷ್ಠರು, ಬಿಜೆಪಿ ಶಾಸಕರು ಸರ್ವಸಮ್ಮತವಾಗಿ ಬಸವರಾಜ ಬೊಮ್ಮಾಯಿ ಅವರನ್ನು ಆಯ್ಕೆ ಮಾಡಿದ್ದರು. ಬೊಮ್ಮಾಯಿ ಅವರು ಯಡಿಯೂರಪ್ಪ ಆಯ್ಕೆ ಎಂದು ಬಿಂಬಿತರಾಗಿದ್ದರೂ ಅವರ ಆರು ತಿಂಗಳ ಅಧಿಕಾರ ಹೂವಿನ ಹಾದಿಯೇನೂ ಆಗಿರಲಿಲ್ಲ. ಏಕಾಂಗಿಯಾಗಿ ಅಧಿಕಾರ ವಹಿಸಿಕೊಂಡ ಬಸವರಾಜ ಬೊಮ್ಮಾಯಿ ಅವರು ಅಬ್ಬರದ ಆಡಳಿತಕ್ಕೆ ಮುಂದಾಗದೆ ತಮ್ಮದೇ ಆದ ಛಾಪು ಮೂಡಿಸುವ ನಿಟ್ಟಿನಲ್ಲಿ ರೈತರ ಮಕ್ಕಳಿಗಾಗಿ ಮುಖ್ಯಮಂತ್ರಿ ವಿದ್ಯಾನಿಧಿ ಯೋಜನೆ ಹಾಗೂ ಸಾಮಾಜಿಕ ಭದ್ರತೆ ಯೋಜನೆ ಅಡಿಯಲ್ಲಿ ಪಿಂಚಣಿ ಹೆಚ್ಚಳ ಮಾಡಿ ತಮ್ಮ ಆಡಳಿತ ಹಾಗೂ ಅಭಿವೃದ್ಧಿಯ ಗುರಿ ಯಾವ ಕಡೆಗೆ ಇರುತ್ತದೆ ಎನ್ನುವ ಮುನ್ಸೂಚನೆ ನೀಡಿದರು.

ಮುಖ್ಯಮಂತ್ರಿ ಅವರಿಗಿರುವ ಪ್ರೊಟೋ ಕಾಲ್‌ ಬದಿಗೊತ್ತಿ ತಾವೂ ಸಾಮಾನ್ಯ ರೊಳಗೆ ಒಬ್ಬರು ಎಂಬ ಸಂದೇಶ ಸಾರುವ ಪ್ರಯತ್ನವನ್ನು ಬಸವರಾಜ ಬೊಮ್ಮಾಯಿ ಮಾಡಿದರು. ಅಧಿಕಾರಕ್ಕೆ ಬಂದ ನಾಲ್ಕೇ ತಿಂಗಳುಗಳಲ್ಲಿ ನಾಯಕತ್ವ ಬದಲಾವಣೆಯ ಗಾಳಿ ಸುದ್ದಿಗೆ ಆಹಾರ ವಾದರು.

5 ಸವಾಲುಗಳು :

1.ಸಂಪುಟ ವಿಸ್ತರಣೆ ವೇಳೆ  ಕೆಲವರಿಂದ ಇಂಥದ್ದೇ ಸಚಿವ ಸ್ಥಾನ ಬೇಕು ಎಂಬ ಪಟ್ಟು

  1. ಮುಂಗಾರು ಮತ್ತು ಹಿಂಗಾರು ಅವಧಿಯಲ್ಲಿ ಪ್ರವಾಹ

3.ಕೊರೊನಾ ಮೂರನೇ ಅಲೆಯ ಸಂಕಷ್ಟ

4.ನಾಯಕತ್ವ ಬದಲಾವಣೆಯ ಮಾತುಗಳು, ಇದನ್ನು ಬಗೆ ಹರಿಸುವ ಸವಾಲು

5.ಬಿಟ್‌ ಕಾಯಿನ್‌ ಕುರಿತ ಎದ್ದ ಗಾಳಿಸುದ್ದಿಗಳು

5 ಯಶಸ್ಸುಗಳು:

1.ಪ್ರಾಕೃತಿಕ ವಿಕೋಪ,  ಸಂಪುಟ ಸಂಕಷ್ಟ  ಯಶಸ್ವಿಯಾಗಿ ನಿಭಾವಣೆ

2.ಕೊರೊನಾ 3ನೇ ಅಲೆ  ಎದುರಿಸುವಲ್ಲಿ ಅಗತ್ಯ ಮುಂಜಾಗ್ರತೆ

  1. ರೈತರ ಮಕ್ಕಳಿಗೆ ವಿದ್ಯಾನಿಧಿ, ಅಮೃತ ಯೋಜನೆಗಳು

4.ಮುಂಬಯಿ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ಮರು ನಾಮಕರಣ

5.ಶಾಲಾ ಕಾಲೇಜುಗಳಲ್ಲಿ ರಾಯಣ್ಣ ಭಾವಚಿತ್ರ

ಸಿದ್ದಾಂತಕ್ಕೆ ಬದ್ಧವಾದ ನಿರ್ಧಾರಗಳು :

ಬೊಮ್ಮಾಯಿಯವರು ಜನತಾ ಪರಿವಾರದ ಮೂಲದವರಾಗಿದ್ದು, ಆರೆಸ್ಸೆಸ್‌ ಸಿದ್ಧಾಂತವನ್ನು ಬಲವಾಗಿ ಪ್ರದರ್ಶನ ಮಾಡುವುದು ಅನುಮಾನ ಎಂಬ ಮಾತುಗಳಿಗೆ ಕಿವಿಗೊಡಲಿಲ್ಲ. ಇದಕ್ಕೆ ಸಾಕ್ಷಿ ಎಂಬಂತೆ ಸಾರ್ವಜನಿಕ ಸ್ಥಳಗಳಲ್ಲಿರುವ ದೇವಸ್ಥಾನ ತೆರವು ಮಾಡದಂತೆ ತೀರ್ಮಾನ, ಮತಾಂತರ ನಿಷೇಧ ಕಾಯ್ದೆ, ದೇವಸ್ಥಾನಗಳನ್ನು ಮುಜರಾಯಿ ಇಲಾಖೆ ವ್ಯಾಪ್ತಿಯಿಂದ ಕೈಬಿಡುವುದು, ಅಕ್ರಮ ಗೋ ಸಾಗಾಣಿಕೆ ಮಾಡುವವರ ವಿರುದ್ಧ ಗೋರಕ್ಷಕರ ದಾಳಿಯ ಬಗ್ಗೆ ಮೃದುಧೋರಣೆ ಅನುಸರಿಸಿದರು. ಹಾಗೆಯೇ ಬೆಳಗಾವಿ ಸುವರ್ಣ ಸೌಧದ ಎದುರು ಕಿತ್ತೂರು ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆ ನಿರ್ಮಾಣ ಮಾಡುವಂತಹ ರಾಜಕೀಯ ಗಟ್ಟಿ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ.

ಚುನಾವಣೆ ಫ‌ಲಿತಾಂಶ :

ಬೊಮ್ಮಾಯಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ನಡೆದ ಉಪ ಚುನಾವಣೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಾಗೂ ವಿಧಾನ ಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹೇಳಿಕೊಳ್ಳುವಂಥ ಸಾಧನೆ ಮಾಡಲಿಲ್ಲ. ಆದರೂ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಸವಾಲು ಮತ್ತು ಸಂಘರ್ಷಗಳ ನಡುವೆಯೇ ಈ ಸೋಲಿನ ನೋವನ್ನು ಆಡಳಿತದ ಮೂಲಕ ಮುಚ್ಚಿಡಲು ಪ್ರಯತ್ನಿಸಿದರು.

-ಶಂಕರ ಪಾಗೋಜಿ

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.