ರಾಜ್ಯದಲ್ಲಿ 679ಮಂದಿಗೆ ಸೋಂಕು ದೃಢ: 21ಸಾವು
Team Udayavani, Feb 21, 2022, 9:45 PM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ತೀವ್ರ ಇಳಿಮುಖಗೊಂಡಿದ್ದು, ಸೋಮವಾರ ಪರೀಕ್ಷೆಗೆ ಒಳಪಡಿಸಲಾದ 52,505 ಮಂದಿಯಲ್ಲಿ 679ಮಂದಿಯಲ್ಲಿ ಸೋಂಕು ದೃಢವಾಗಿದೆ.
ರಾಜ್ಯದಲ್ಲಿ 2021ರ ಡಿ.30ರಂದು 707 ಮಂದಿ ಸೋಂಕಿಗೆ ತುತ್ತಾಗಿದ್ದು, ಅನಂತರ ಹಂತ ಹಂತವಾಗಿ ಸೋಂಕಿತ ಸಂಖ್ಯೆ ಏರಿಕೆಯಾಗಿ ದಿನವೊಂದಕ್ಕೆ ಸೋಂಕಿತರ ಸಂಖ್ಯೆ 70,000 ಸಮೀಪ ತಲುಪಿತ್ತು. ಇದೀಗ ಸುಮಾರು 52ದಿನಗಳ ಬಳಿಕ ಕೋವಿಡ್ ಸೋಂಕು ಕನಿಷ್ಠ ಸಂಖ್ಯೆ ತಲುಪಿದೆ. 1,932ಮಂದಿ ಆಸ್ಪತ್ರೆ ಹಾಗೂ ಮನೆಯಿಂದ ಚಿಕಿತ್ಸೆ ಪಡೆದು ಗುಣಮುಖ ಹೊಂದಿದ್ದಾರೆ. ಆ ಮೂಲಕ ಪಾಸಿಟಿವಿಟಿ ಸಂಖ್ಯೆ ಶೇ.1.29ಗೆ ಹಾಗೂ ಸಕ್ರಿಯ ಪ್ರಕರಣ 11,360ಕ್ಕೆ ಇಳಿಕೆಯಾಗಿದೆ.
ಬೆಂಗಳೂರು ನಗರ 346, ಶಿವಮೊಗ್ಗ 34,ಬಳ್ಳಾರಿ 31, ಕೊಡಗು 28, ಮೈಸೂರು 26, ಹಾಸನ 21, ಉಡುಪಿ 21, ತುಮಕೂರು 20, ಚಿತ್ರದುರ್ಗ 16, ದಕ್ಷಿಣ ಕನ್ನಡ 15, ರಾಮನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 12, ಕಲಬುರಗಿ ಹಾಗೂ ಬೆಳಗಾವಿ 11, ಚಾಮರಾಜನಗರ 9, ಚಿಕ್ಕಮಗಳೂರು 8, ದಾವಣಗೆರೆ, ಧಾರವಾಡ ಹಾಗೂ ಮಂಡ್ಯ ಜಿಲ್ಲೆಯಲ್ಲಿ ತಲಾ 7,ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಯಲ್ಲಿ ತಲಾ 6, ಬಾಗಲಕೋಟೆ 5, ಬೆಂಗಳೂರು ಗ್ರಾಮಾಂತರ ಹಾಗೂ ಚಿಕ್ಕಬಳ್ಳಾಪುರ ತಲಾ 4, ಬೀದರ್ ಹಾಗೂ ವಿಜಯಪುರ 3, ಗದಗ ಹಾಗೂ ಕೋಲಾರ ತಲಾ 2, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ತಲಾ ಒಬ್ಬರಲ್ಲಿ ಸೋಂಕು ದೃಢಗೊಂಡಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ 21 ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 8,ಬಳ್ಳಾರಿ 4, ದ.ಕ. ಹಾಗೂ ಧಾರವಾಡ 2, ವಿಜಯಪುರ, ಶಿವಮೊಗ್ಗ, ಕೊಡಗು, ಕಲಬುರಗಿ ಹಾಗೂ ಹಾವೇರಿ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ಮರಣ ಪ್ರಮಾಣ ಶೇ.3.9ರಷ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು