ಬೆಂಗಳೂರಿನಲ್ಲಿ ಭೀಕರ ಅಪಘಾತ : 7 ಮಂದಿ ದುರ್ಮರಣ
Team Udayavani, Aug 31, 2021, 7:47 AM IST
ಬೆಂಗಳೂರು: ಬೆಂಗಳೂರಿನ ಕೋರಮಂಗಲದ, ಮಂಗಳ ಕಲ್ಯಾಣಮಂಟಪದ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, 7 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತಡರಾತ್ರಿ 1:30ರ ವೇಳೆ ಆಡಿ ಕ್ಯೂ 3 ಕಾರು, ಫುಟ್ ಪಾತ್ ಮೇಲಿದ್ದ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಘಟನೆ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಆಡಿ ಕಾರು ಕಟ್ಟಡಕ್ಕೆ ಅಪ್ಪಳಿಸಿದ್ದು ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಸಾವನ್ನಪ್ಪಿರುವವರನ್ನು ಕರುಣಾಸಾಗರ, ಬಿಂದು, ಇಶಿತಾ, ಡಾ.ಧನುಶಾ, ಅಕ್ಷಯ್ ಗೋಯಲ್, ಉತ್ಸವ್, ರೋಹಿತ್ ಎಂದು ಗುರುತಿಸಲಾಗಿದೆ. ಇನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮೃತರಿಗೆ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ ಎನ್ನಲಾಗಿದೆ.
ಇನ್ನು ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ಜೈಪ್ರಕಾಶ್ ಪುತ್ರ ಕರನಾಕರ್ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕೆ ಸಾವನ್ನಪ್ಪಿರುವವರು ಮದ್ಯ ಸೇವನೆ ಮಾಡಿದ್ದರು ಎನ್ನಲಾಗಿದೆ.