ರಾಕ್ಷಸಿ ಕೃತ್ಯ :ಮೂಡಲಗಿಯ ಹಳ್ಳದಲ್ಲಿ ಎಸೆದ ಏಳು ಭ್ರೂಣಗಳ ಪತ್ತೆ

ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ?? ಬೆಳಗಾವಿ ಜನರನ್ನು ಬೆಚ್ಚಿಬೀಳುವಂತೆ ಮಾಡಿದ ಘಟನೆ

Team Udayavani, Jun 24, 2022, 7:15 PM IST

1-FDSSAD

ಮೂಡಲಗಿ: ರಾಕ್ಷಸಿ ಕೃತ್ಯವೊಂದು ಪಟ್ಟಣದಲ್ಲಿ ಶುಕ್ರವಾರದಂದು ಬೆಳಕಿಗೆ ಬಂದಿದ್ದು, ಹಳ್ಳದಲ್ಲಿ ಪತ್ತೆಯಾಗಿದ್ದು ಒಂದಲ್ಲ, ಎರಡರಲ್ಲ, ಏಳು ಭ್ರೂಣಗಳ ಪತ್ತೆಯಾಗಿದ್ದು, ಇಡೀ ಬೆಳಗಾವಿ ಜಿಲ್ಲೆ ಜನರನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಭ್ರೂಣಗಳ ಹತ್ಯೆಗೈದವರು ಯಾರು? ಹಳ್ಳದಲ್ಲಿ ಎಸೆದವರು ಯಾರು? ಎಂಬುದೇ ನಿಗೂಢವಾಗಿದೆ.

ಮೂಡಲಗಿ ಪಟ್ಟಣದ ಬಸ್ ನಿಲ್ದಾಣ ಹತ್ತಿರದ ಹಳ್ಳದಲ್ಲಿ 7 ಭ್ರೂಣಗಳು ಐದು ಡಬ್ಬಗಳಲ್ಲಿ ಪತ್ತೆಯಾಗಿವೆ. ಇದನ್ನು ಗಮನಿಸಿದ ಸ್ಥಳೀಯರು ಮೂಡಲಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಭ್ರೂಣಗಳನ್ನು ಹಳ್ಳದಿಂದ ಹೊರತೆಗೆದು ಸ್ಥಳೀಯ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಈ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಸ್ಥಳೀಯ ಆರೋಗ್ಯಾಧಿಕಾರಿಗಳು, ಮೂಡಲಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನಾ ಸ್ಥಳಕ್ಕೆ ಬೆಳಗಾವಿಯ ಡಿಹೆಚ್‌ಒ ಡಾ.ಮಹೇಶ್ ಕೋಣಿ ದೌಡಾಯಿಸಿ, ಇನ್ನು ಪ್ರಕರಣ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೂಡಲಗಿ ಪಟ್ಟಣದ ಸೇತುವೆ ಕೆಳಗೆ ಐದು ಡಬ್ಬಿಯಲ್ಲಿ ಏಳು ಭ್ರೂಣಗಳು ಪತ್ತೆಯಾಗಿವೆ. ಸ್ಥಳೀಯ ಆರೋಗ್ಯಾಧಿಕಾರಿಗಳನ್ನು ಸ್ಥಳಕ್ಕೆ ಭೇಟಿ ನೀಡಿದ್ದು, ಪುರಸಭೆಯವ ಕಡೆಯಿಂದ ಪೊಲೀಸರಿಗೆ ದೂರು ನೀಡಲಾಗುವುದು. ಶುಕ್ರವಾರ ಬೆಳಗ್ಗೆ 10.30 ಕ್ಕೆ ನಮಗೆ ಗೊತ್ತಾದ ಮೇಲೆ ಸ್ಥಳಕ್ಕೆ ಸಿಬ್ಬಂದಿಗಳನ್ನು ಕಳುಹಿಸಿದೆ ಎಂದರು.

ಇದು ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಎಂದು ಹೇಳಬಹುದು. ಫೋಟೋ ನೋಡಿದ್ರೆ ಪತ್ತೆಯಾದ ಭ್ರೂಣಗಳು ಐದು ತಿಂಗಳು ತುಂಬಿದ ಹಾಗೇ ಕಾಣುತ್ತಿದೆ. ಈಗಾಗಲೇ ಸ್ಥಳೀಯ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಕೇಸ್ ದಾಖಲಾದ ಬಳಿಕ ಅವುಗಳನ್ನ ಬೆಳಗಾವಿಯ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತಂದು ಪರೀಕ್ಷೆ ನಡೆಸಲಾಗುವುದು. ಇದನ್ನ ಯಾರು ಮಾಡಿದ್ದಾರೆ, ಎಲ್ಲಿಂದ ಬಂದಿದ್ದು ಎಂಬ ಬಗ್ಗೆ ತನಿಖೆ ಮಾಡಲಾಗುವುದು. ಜಿಲ್ಲಾಧಿಕಾರಿ ಜೊತೆ ಚರ್ಚಿಸಿ ಒಂದು ತನಿಖಾ ತಂಡ ರಚನೆ ಮಾಡುತ್ತೇವೆ’ ಎಂದು ತಿಳಿಸಿದ್ದಾರೆ.

ಒಟ್ಟಾರೆಯಾಗಿ ಪಟ್ಟಣದಲ್ಲಿ ಏಳು ಭ್ರೂಣಲಿಂಗಳು ಪತ್ತೆಯಾದ ಸುದ್ದಿ ಹರಡುತ್ತಿದ್ದಂತೆ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಶಿಕ್ಷಾರ್ಹ ಅಪರಾಧವಾಗಿದ್ದರೂ ಈ ರೀತಿ ಒಂದೇ ಸ್ಥಳದಲ್ಲಿ ಏಳು ಭ್ರೂಣಗಳು ಪತ್ತೆಯಾಗಿದ್ದು ಇಡೀ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದೆ. ಪ್ರಕರಣ ಗಂಭೀರವಾಗಿ ಪರಿಗಣಿಸಿರುವ ಜಿಲ್ಲಾಡಳಿತ ಪೊಲೀಸರ ಸಹಾಯದೊಂದಿಗೆ ಆರೋಪಿಗಳ ಪತ್ತೆಗೆ ಬಲೆ ಬೀಸಿದೆ.

ಮೂಡಲಗಿ ಪಟ್ಟಣದ ಬಸ್ ನಿಲ್ದಾಣದ ಬಳಿಯಲ್ಲಿ ಇರುವ ಹಳ್ಳಿ ಶುಕ್ರವಾರ ಪತ್ತೆಯಾದ ಏಳು ಭ್ರೂಣಗಳನ್ನು ಎಸೆದಿರುವ ಸಂಗತಿಯು ನನ್ನ ಗಮನಕ್ಕೆ ಬಂದಿದೆ. ಇದು ಹೀನ ಕೃತ್ಯವಾಗಿದ್ದು, ಸಮಾಜ ತಲೆ ತಗ್ಗಿಸುವಂತ ಸಂಗತಿಯಾಗಿದ್ದು, ಕಾನೂನು ಬಾಹಿರವಾಗಿ ಮಾಡಿರುವ ವ್ಯಕ್ತಿಗಳನ್ನು ಗುರುತಿಸಲು ಈಗಾಗಲೇ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿರುವೆ. ಈ ತರಹ ಮತ್ತೆ ನಡೆಯದಂತೆ ಆರೋಗ್ಯ ಇಲಾಖೆಯವರು ಕಟ್ಟೆಚ್ಚರ ವಹಿಸಬೇಕು ಎಂದು ಸೂಚಿಸಿರುವೆ.

ಬಾಲಚಂದ್ರ ಜಾರಕಿಹೊಳಿ, ಕೆಎಮ್‌ಎಫ್ ಅಧ್ಯಕ್ಷ, ಅರಭಾವಿ ಶಾಸಕ

ಟಾಪ್ ನ್ಯೂಸ್

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.