“777 ಚಾರ್ಲಿ” ನೋಡಲು ಸಾಕು ನಾಯಿಯೊಂದಿಗೆ ಥಿಯೇಟರ್ ಗೆ ಬಂದಿದ್ದವರಿಗೆ ಪ್ರವೇಶ ನಿರಾಕರಣೆ
ಚಿತ್ರಮಂದಿರದ ಮುಂದೆಯೇ ನಾಯಿಯೊಂದಿಗೆ ಪ್ರತಿಭಟನೆ
Team Udayavani, Jun 12, 2022, 6:12 PM IST
ದಾವಣಗೆರೆ: ರಕ್ಷಿತ್ ಶೆಟ್ಟಿ ಅಭಿನಯದ “777 ಚಾರ್ಲಿ” ಚಿತ್ರ ನೋಡಲು ಪ್ರೀತಿಯ ಸಾಕು ನಾಯಿಯೊಂದಿಗೆ ಬಂದಿದ್ದವರಿಗೆ ಚಿತ್ರ ಮಂದಿರದ ಒಳಗೆ ಪ್ರವೇಶ ನಿರಾಕರಿಸಿದ್ದಕ್ಕೆ ನಾಯಿಯೊಂದಿಗೆ ಮೂವರು ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ದಾವಣಗೆರೆಯಲ್ಲಿ ನಡೆದಿದೆ.
ನಾಯಿ ಮತ್ತು ಮನುಷ್ಯನ ನಡುವಿನ ಸಂಬಂಧದ ಬಗ್ಗೆ 777 ಚಾರ್ಲಿ ಚಿತ್ರದಲ್ಲಿ ಅತಿ ಮನೋಜ್ಞವಾಗಿ ತೋರಿಸಲಾಗಿದೆ. ಹಾಗಾಗಿ ತಮ್ಮ ಪ್ರೀತಿಯ ಸಾಕು ನಾಯಿ ಡಯಾನದೊಂದಿಗೆ ಚಿತ್ರವನ್ನು ನೋಡಬೇಕು ಎಂಬ ಆಸೆಯಿಂದ ದಾವಣಗೆರೆ ತಾಲೂಕಿನ ಪುಟಗನಾಳ್ ಗ್ರಾಮದ ಕೆಂಚ ಎಂಬುವರು ಚಿತ್ರಮಂದಿರಕ್ಕೆ ಆಗಮಿಸಿದ್ದರು.
ಮೂವರಿಗೆ ಅಡ್ವಾನ್ಸ್ ಟಿಕೆಟ್ ಬುಕ್ ಸಹ ಮಾಡಿದ್ದರು. ಬೆಳಗಿನ ಪ್ರದರ್ಶನಕ್ಕೆ ಬಂದಾಗ ಚಿತ್ರಮಂದಿರದವರು ನಾಯಿಯನ್ನು ಚಿತ್ರಮಂದಿರದ ಒಳಕ್ಕೆ ಬಿಡಲು ನಿರಾಕರಿಸಿದರು. ಜಿಲ್ಲಾಡಳಿತದಿಂದ ಅನುಮತಿ ತಂದರೆ ಮಾತ್ರ ನಾಯಿಗೆ ಪ್ರವೇಶ ನೀಡಲಾಗುತ್ತದೆ ಎಂದು ಹೇಳಿದರು.
ನಾಯಿ ಮತ್ತು ಮಾನವರ ಸಂಬಂಧದ ಬಗ್ಗೆ 777 ಚಾರ್ಲಿ ಚಿತ್ರದಲ್ಲಿ ಬಹಳ ಚೆನ್ನಾಗಿ ತೋರಿಸಲಾಗಿದೆ. ಹಾಗಾಗಿ ನಾನು ನನ್ನ ಪ್ರೀತಿಯ ಸಾಕು ನಾಯಿಯೊಂದಿಗೆ ಚಿತ್ರ ನೋಡಬೇಕು. ನನ್ನ ನಾಯಿಗೆ ಡಯಾನ 777 ಹೆಸರಿಡಬೇಕು ಎಂದೂ ತೀರ್ಮಾನ ಮಾಡಿದ್ದೇನೆ. ಹಾಗಾಗಿ ಸಾಕುನಾಯಿಯೊಂದಿಗೆ ಚಿತ್ರ ನೋಡಲು ಬಿಡಬೇಕು ಎಂದು ನಾಯಿ ಮಾಲೀಕ ಕೆಂಚ ಇತರರು ಎಷ್ಟೇ ಕೇಳಿಕೊಂಡರೂ ಚಿತ್ರಮಂದಿರದ ಒಳಗೆ ಹೋಗಲು ಬಿಡಲಿಲ್ಲ. ಇದರಿಂದ ಬೇಸತ್ತ ಕೆಂಚ ಮತ್ತಿತರರು ಚಿತ್ರಮಂದಿರದ ಮುಂದೆಯೇ ನಾಯಿಯೊಂದಿಗೆ ಕೆಲ ಕಾಲ ಪ್ರತಿಭಟನೆ ನಡೆಸಿದರು. ನಂತರ ನಿರಾಸೆಯಿಂದಲೇ ಗ್ರಾಮಕ್ಕೆ ತೆರಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ