7ನೇ ವೇತನ ಆಯೋಗ ರಚನೆ: ಚರ್ಚಿಸಿ ಅಂತಿಮ-ಸಿಎಂ ಭರವಸೆ
Team Udayavani, Feb 18, 2022, 6:30 AM IST
ಬೆಂಗಳೂರು: ರಾಜ್ಯ ಸರಕಾರಿ ನೌಕರರ ವೇತನ ಮತ್ತು ಭತ್ತೆಗಳ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚಿಸುವ ಬಗ್ಗೆ ಬಜೆಟ್ ಮಂಡನೆಗಿಂತ ಮೊದಲು ಅಧಿಕಾರಿಗಳೊಂದಿಗೆ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಸದ್ಯ 6ನೇ ವೇತನ ಆಯೋಗ ಚಾಲ್ತಿಯಲ್ಲಿದೆ. ಹೇಗಿದ್ದರೂ ಮುಂದಿನ ತಿಂಗಳು ಬಜೆಟ್ ಮಂಡಿಸಬೇಕಿದೆ. ಅದಕ್ಕೂ ಮೊದಲು ಆರ್ಥಿಕ ಪರಿಸ್ಥಿತಿ ಗಮನಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿ 2022-23ನೇ ಸಾಲಿನಲ್ಲಿ 7ನೇ ವೇತನ ಆಯೋಗ ರಚಿಸುವ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
45 ಸಾವಿರ ಹುದ್ದೆ ಭರ್ತಿಗೆ ಕ್ರಮ :
ಕಳೆದ ಹಲವಾರು ವರ್ಷಗಳಿಂದ ಆಗಾಗ ಜಾರಿಗೆ ತರಲಾದ ಆರ್ಥಿಕ ನಿರ್ಬಂಧಗಳ ಪರಿಣಾಮ ಹುದ್ದೆಗಳ ಭರ್ತಿ ಆಗಿರಲಿಲ್ಲ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಆರ್ಥಿಕ ಹಿಂಜರಿಕೆ ಎದುರದಾರ ಪರಿಣಾಮ ಹುದ್ದೆಗಳ ನೇಮಕಾತಿ ಸ್ಥಗಿತಗೊಂಡಿತ್ತು. ಆದರೆ, ಆರ್ಥಿಕ ಇತಿಮಿತಿಯೊಳಗೆ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದ್ದು, 16 ಸಾವಿರ ಶಿಕ್ಷಕರ ನೇಮಕಾತಿಗೆ ಆದೇಶ ನೀಡಲಾಗಿದೆ. 16 ಸಾವಿರ ಪೊಲೀಸ್ ಹುದ್ದೆಗಳ ಭರ್ತಿ ಚಾಲ್ತಿಯಲ್ಲಿದೆ. ಕಲ್ಯಾಣ ಕರ್ನಾಟಕ ಭಾಗದ ವಿವಿಧ ಇಲಾಖೆಗಳಲ್ಲಿನ 14 ಸಾವಿರ ಹುದ್ದೆಗಳು ತುಂಬಲಾಗುತ್ತಿದೆ ಎಂದು ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ