ಆಹಾರ ಧಾನ್ಯ ಶೇ.80 ಹೆಚ್ಚುವರಿ ಪೂರೈಕೆ

ಬೇಳೆಕಾಳು, ತರಕಾರಿ, ಹಣ್ಣು, ಮೀನು, ಮೊಟ್ಟೆ, ಮಾಂಸ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ

Team Udayavani, Apr 17, 2020, 1:14 PM IST

ಆಹಾರ ಧಾನ್ಯ ಶೇ.80 ಹೆಚ್ಚುವರಿ ಪೂರೈಕೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದಲ್ಲಿ ಲಾಕ್‌ಡೌನ್‌ಗೂ ಮೊದಲಿನ ಸ್ಥಿತಿಗೆ ಹೋಲಿಸಿದರೆ ಆಹಾರಧಾನ್ಯ, ಬೇಳೆಕಾಳು, ತರಕಾರಿ, ಹಣ್ಣು ಪೂರೈಕೆ ಪ್ರಮಾಣ ಶೇ.80ರಷ್ಟು ಹೆಚ್ಚುವರಿಯಾಗಿ ಪೂರೈಕೆಯಾಗುತ್ತಿದೆ! ಅಲ್ಲದೆ, ಅಕ್ಕಿ, ಬೇಳೆ ಗಿರಣಿಗಳು ಕಾರ್ಯಾರಂ ಭವಾಗಿರುವ ಜತೆಗೆ ಆಹಾರ ಸಂಸ್ಕರಣಾ ಘಟಕಗಳು ಶುರುವಾಗಿರುವುದರಿಂದ ರಾಜ್ಯದಲ್ಲಿ ಎಲ್ಲಿಯೂ ಆಹಾರ ಧಾನ್ಯ, ಬೇಳೆಕಾಳು, ತರಕಾರಿ, ಹಣ್ಣು, ಮೀನು, ಮೊಟ್ಟೆ, ಮಾಂಸ ಪೂರೈಕೆಯಲ್ಲಿ ವ್ಯತ್ಯಯವಾಗಿಲ್ಲ ಎಂದು ಅಧಿಕಾರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್‌ ಜಾರಿಯಾದ ಆರಂಭದ ಕೆಲ ದಿನಗಳಲ್ಲಿ ರಾಜ್ಯದ ಒಳಗೆ ಹಾಗೂ ರಾಜ್ಯಗಳ ನಡುವೆ ಆಹಾರ ಧಾನ್ಯಗಳ ಪೂರೈಕೆ ದಿಢೀರ್‌ ಸ್ಥಗಿತಗೊಂಡಿದ್ದ
ಸ್ವಲ್ಪ ಸಮಸ್ಯೆ ಉಂಟಾಗಿತ್ತು. ಆದರೆ ಉತ್ಪಾದಕರು, ಮಾರಾಟ ಸಂಸ್ಥೆಗಳ ಸಂಘಟನೆಗಳ ಪದಾಧಕಾರಿಗಳು, ಸೂಪರ್‌ ಮಾರ್ಕೆಟ್‌, ಇ- ಕಾಮರ್ಸ್‌ ಸಂಸ್ಥೆಗಳೊಂದಿಗೆ ನಿರಂತರವಾಗಿ ಸಭೆ ನಡೆಸಿದ ಅಧಿಕಾರಿಗಳು ಆಹಾರ ಧಾನ್ಯ ಪೂರೈಕೆ ಸರಪಳಿ ಕೊಂಡಿ ಕಳಚದಂತೆ ನಡೆಸಿದ ಪ್ರಯತ್ನದಿಂದ ಪೂರೈಕೆ ವ್ಯವಸ್ಥೆ ಸುಧಾರಿಸಲು ಕಾರಣವಾಗಿದೆ.

ಸಾಕಷ್ಟು ಲಭ್ಯತೆ: ಬುಧವಾರದ (ಏ. 15) ಸಂಜೆ ಮಾಹಿತಿ ಪ್ರಕಾರ ರಾಜ್ಯದ ಎಪಿಎಂಸಿ ಸೇರಿ ಇತರೆಡೆ ಅಕ್ಕಿ, ಗೋಧಿ, ಗೋಧಿ ಹಿಟ್ಟು, ರಾಗಿ, ಜೋಳ ದಾಸ್ತಾನು ಒಟ್ಟು 3.83 ಲಕ್ಷ ಟನ್‌ನಷ್ಟಿದೆ. ತೊಗರಿ ಬೇಳೆ ಸೇರಿ ಇತರೆ ಬೇಳೆ ಕಾಳು ಲಭ್ಯತೆ 2.29 ಲಕ್ಷ ಟನ್‌ನಷ್ಟಿದೆ. ಅಡುಗೆ ಎಣ್ಣೆ ಲಭ್ಯತೆ 7250 ಟನ್‌
ಗಳಷ್ಟಿದೆ. 1.57 ಲಕ್ಷ ಟನ್‌ ಸಕ್ಕರೆ ಲಭ್ಯತೆ ಇದೆ ಎಂದು ಮೂಲಗಳು ಹೇಳಿವೆ.

ನಿತ್ಯ 1 ಕೋಟಿ ಮೊಟ್ಟೆ ಮಾರಾಟ: ಇನ್ನು ಕೋಳಿ, ಮಾಂಸ, ಮೀನು ಲಭ್ಯತೆ 42 ಟನ್‌ನಷ್ಟಿದ್ದು, ನಿತ್ಯ 1  ಕೋಟಿ ಮೊಟ್ಟೆ ಮಾರಾಟವಾಗುತ್ತಿದೆ. ಇತ್ತೀಚೆಗೆ
ಒಂದೇ ದಿನದಲ್ಲಿ 3.33 ಕೋಟಿ ಮೊಟ್ಟೆ ಮಾರಾಟವಾಗಿರುವುದು ಕಂಡುಬಂದಿದೆ. ಜತೆಗೆ ತರಕಾರಿ, ಹಣ್ಣು ಪೂರೈಕೆ ಉತ್ತಮವಾಗಿದ್ದು, ಯಾವುದೇ ರೀತಿಯಲ್ಲಿ ಕೊರತೆ ಇಲ್ಲ ಎಂದು ತಿಳಿಸಿವೆ. ಕಲ್ಲಂಗಡಿ, ಕರಬೂಜ ಹಣ್ಣುಗಳನ್ನು ತಮಿಳುನಾಡು, ಕೇರಳ, ಹೈದರಾಬಾದ್‌ಗೆ ಕಳುಹಿಸುವ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ಅನಾನಸ್‌ ದೊಡ್ಡ ಪ್ರಮಾಣದಲ್ಲಿ ದೆಹಲಿ ಹಾಗೂ ಇತರೆ ಉತ್ತರ ಭಾರತ ರಾಜ್ಯಗಳಿಗೆ ಪೂರೈಕೆಯಾಗುತ್ತಿತ್ತು. ಲಾಕ್‌ಡೌನ್‌ನಿಂದ ಸ್ಥಗಿತಗೊಂಡಿದೆ. ಅನಾಸನ್‌ ಹಣ್ಣನ್ನು ಹಾಪ್‌ಕಾಮ್ಸ್‌, ಇತರೆ ಸೂಪರ್‌ ಮಾರ್ಕೆಟ್‌ ಮೂಲಕ ಮಾರಾಟ ವ್ಯವಸ್ಥೆ ಮಾಡಲಾಗಿದ್ದು, ಉತ್ತಮ ಸ್ಪಂದನೆಯಿದೆ ಎಂದು ಹೇಳಿವೆ.

ಸಮಸ್ಯೆ ಪರಿಹಾರವಾಗಿದ್ದು ಹೇಗೆ?: ಲಾಕ್‌ಡೌನ್‌ ಜಾರಿಯಾಗುತ್ತಿದ್ದಂತೆ ಅಕ್ಕಿ, ಬೇಳೆ ಗಿರಣಿಗಳು ಸ್ಥಗಿತಗೊಂಡವು. ಇದರಿಂದ ಪ್ರಮುಖ ಆಹಾರ ಧಾನ್ಯಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಯಿತು. ಮೊದಲಿಗೆ ಗಿರಣಿಗಳ ಕಾರ್ಯಾರಂಭಕ್ಕೆ ಒತ್ತು ನೀಡಲಾಯಿತು. ಕಾರ್ಮಿಕರಿಗೆ ಪಾಸ್‌ ಒದಗಿಸಿ ಕೆಲಸ ಆರಂಭಿಸಲು ಗಮನ ಹರಿಸಲಾಯಿತು. ಸದ್ಯ ಗಿರಣಿಗಳ ಒಟ್ಟು ಸಾಮರ್ಥಯದ ಶೇ. 40- 50ರಷ್ಟು  ಕೆಲಸ ನಡೆಯುತ್ತಿದೆ ಎಂದು ರಾಜ್ಯ ಅಗತ್ಯ ವಸ್ತುಗಳು ಹಾಗೂ ಪೂರೈಕೆ ಸರಪಳಿ ನಿರ್ವಹಣೆ ನೋಡಲ್‌ ಅಧಕಾರಿ ರಾಜೇಂದ್ರ ಕಟಾರಿಯಾ “ಉದಯವಾಣಿ’ಗೆ ತಿಳಿಸಿದರು.

ಇನ್ನೊಂದೆಡೆ ಆಹಾರ ಸಂಸ್ಕರಣಾ ಘಟಕಗಳ  ಕಾರ್ಯಾರಂಭಕ್ಕೆ ಒತ್ತು ನೀಡಲಾಯಿತು. ಕೋಲಾರ, ಚಿತ್ತೂರು, ಕೃಷ್ಣಗಿರಿ ಇತರೆಡೆ ಆಹಾರ ಸಂಸ್ಕರಣಾ
ಘಟಕ ಕಾರ್ಯಾರಂಭಕ್ಕೆ ಪ್ರಯತ್ನ ನಡೆಸಲಾಯಿತು. ಇದರಿಂದಾಗಿ ರೈತರು ಬೆಳೆದ ಹಣ್ಣು, ತರಕಾರಿ ಮಾರಾಟಕ್ಕೆ ಅನುಕೂಲವಾಯಿತು ಎಂದು ವಿವರಿಸಿದರು.

ಲಾಕ್‌ಡೌನ್‌ಗೂ ಮೊದಲಿನ ಸಂದರ್ಭಕ್ಕೆ ಹೋಲಿಸಿದರೆ ಸದ್ಯ ಶೇ. 80ರಷ್ಟು ಹೆಚ್ಚುವರಿಯಾಗಿ ಆಹಾರಧಾನ್ಯ, ಬೇಳೆಕಾಳು, ಹಣ್ಣು, ತರಕಾರಿ ಪೂರೈಕೆಯಾಗುತ್ತಿದೆ. ಇದರಿಂದಾಗಿ ರಾಜ್ಯದ ಯಾವ ಭಾಗದಲ್ಲೂ ಅಗತ್ಯ ವಸ್ತು ಪೂರೈಕೆಯಲ್ಲಿ ವ್ಯತ್ಯಯವಾದ ಬಗ್ಗೆ ಒಂದೂ ದೂರು ಇಲ್ಲ. ಜನರು ಹೆಚ್ಚಿನ ಪ್ರಮಾಣದಲ್ಲಿ ಹಣ್ಣು, ತರಕಾರಿ ಸೇವಿಸುವ ಮೂಲಕ  ರೈತರಿಗೆ ನೆರವಾಗುವ ಜತೆಗೆ ತಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವತ್ತ ಚಿಂತಿಸಬೇಕು.
ರಾಜೇಂದ್ರ ಕಟಾರಿಯಾ, ರಾಜ್ಯ ಅಗತ್ಯ ವಸ್ತುಗಳು ಹಾಗೂ ಪೂರೈಕೆ ಸರಪಳಿ ನಿರ್ವಹಣೆ ನೋಡಲ್‌ ಅಧಿಕಾರಿ

 ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.