80 ತಾಲೂಕು ಪ್ರವಾಹಪೀಡಿತ
Team Udayavani, Aug 11, 2019, 3:00 AM IST
ಬೆಂಗಳೂರು: ರಾಜ್ಯದಲ್ಲಿ ಆ.1ರಿಂದ ಈವರೆಗೆ ಸುರಿದ ಭಾರೀ ಮಳೆ ಹಾಗೂ ಇತರೆ ಕಾರಣಕ್ಕೆ ಅತಿವೃಷ್ಟಿಯಿಂದ ಉಂಟಾದ ಪ್ರವಾಹದಿಂದ ಜೀವ ಹಾನಿ ಜತೆಗೆ ಭಾರೀ ಪ್ರಮಾಣದಲ್ಲಿ ಬೆಳೆ ಹಾನಿ ಹಾಗೂ ಮೂಲ ಸೌಕರ್ಯಕ್ಕೆ ಹಾನಿಯಾಗಿದೆ. ಆ ಹಿನ್ನೆಲೆಯಲ್ಲಿ 17 ಜಿಲ್ಲೆಗಳ 80 ತಾಲೂಕುಗಳನ್ನು ತಕ್ಷಣ ದಿಂದ ಜಾರಿಗೆ ಬರುವಂತೆ ಪ್ರವಾಹಪೀಡಿತ ತಾಲೂಕು ಎಂದು ರಾಜ್ಯ ಸರ್ಕಾರ ಘೋಷಿಸಿ ಶನಿವಾರ ಆದೇಶ ಹೊರಡಿಸಿದೆ.
ಪ್ರವಾಹ ಪೀಡಿತವೆಂದು ಘೋಷಿಸಲಾಗಿರುವ ತಾಲೂಕುಗಳಲ್ಲಿ ಎಸ್ಡಿಆರ್ಎಫ್ ಹಾಗೂ ಎನ್ಡಿಆರ್ಎಫ್ ಮಾರ್ಗಸೂಚಿ ಪ್ರಕಾರ ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯ ಕೈಗೊಳ್ಳಬೇಕು ಎಂದು ಸೂಚಿಸಿದೆ. ಪ್ರವಾಹಪೀಡಿತ ಜಿಲ್ಲೆ, ತಾಲೂಕುಗಳ ವಿವರ ಹೀಗಿದೆ:
ಬೆಳಗಾವಿ: ಅಥಣಿ, ಬೈಲಹೊಂಗಲ, ಬೆಳಗಾವಿ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಖಾನಾಪುರ, ರಾಮದುರ್ಗ, ರಾಯಬಾಗ, ಸವದತ್ತಿ.
ಬಾಗಲಕೋಟೆ: ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಳ.
ರಾಯಚೂರು: ದೇವದುರ್ಗ, ಲಿಂಗಸಗೂರು, ರಾಯಚೂರು.
ಕಲಬುರಗಿ: ಜೇವರ್ಗಿ, ಅಫಲ್ಪುರ.
ಯಾದಗಿರಿ: ಶಹಾಪುರ, ಶೋರಪುರ, ಯಾದಗಿರಿ.
ವಿಜಯಪುರ: ಬಸವನ ಬಾಗೇವಾಡಿ, ಮುದ್ದೇಬಿಹಾಳ, ಇಂಡಿ, ಸಿಂದಗಿ.
ಗದಗ: ನರಗುಂದ, ರೋಣ, ಶಿರಹಟ್ಟಿ.
ಹಾವೇರಿ: ಹಾನಗಲ್, ಹಾವೇರಿ, ಸವಣೂರು, ಶಿಗ್ಗಾಂವಿ, ಬ್ಯಾಡಗಿ, ಹಿರೇಕೆರೂರು.
ಧಾರವಾಡ: ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ, ನವಲಗುಂದ.
ಶಿವಮೊಗ್ಗ: ಹೊಸನಗರ, ಸಾಗರ, ಶಿಕಾರಿಪುರ, ಶಿವಮೊಗ್ಗ, ಸೊರಬ, ತೀರ್ಥಹಳ್ಳಿ.
ಹಾಸನ: ಸಕಲೇಶಪುರ, ಬೇಲೂರು, ಆಲೂರು.
ಚಿಕ್ಕಮಗಳೂರು: ಕೊಪ್ಪ, ಮೂಡಿಗೆರೆ, ನರಸಿಂಹರಾಜಪುರ, ಶೃಂಗೇರಿ.
ಕೊಡಗು: ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ.
ದಕ್ಷಿಣ ಕನ್ನಡ: ಬೆಳ್ತಂಗಡಿ, ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ.
ಉಡುಪಿ: ಕಾರ್ಕಳ, ಕುಂದಾಪುರ, ಉಡುಪಿ.
ಉತ್ತರ ಕನ್ನಡ: ಅಂಕೋಲಾ, ಭಟ್ಕಳ, ಹಳಿಯಾಳ, ಹೊನ್ನಾವರ, ಕಾರವಾರ, ಕುಮಟಾ, ಮುಂಡಗೋಡ, ಸಿದ್ದಾಪುರ, ಶಿರಸಿ, ಸೂಪಾ, ಯಲ್ಲಾಪುರ.
ಮೈಸೂರು: ಹೆಗ್ಗಡದೇವನಕೋಟೆ, ನಂಜನಗೂಡು, ಟಿ.ನರಸೀಪುರ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ