47 ಸಾರ್ವಜನಿಕ ಉದ್ದಿಮೆಗಳಿಂದ 8,124 ಕೋಟಿ ರೂ. ನಷ್ಟ


Team Udayavani, Feb 23, 2023, 5:25 AM IST

47 ಸಾರ್ವಜನಿಕ ಉದ್ದಿಮೆಗಳಿಂದ 8,124 ಕೋಟಿ ರೂ. ನಷ್ಟ

ಬೆಂಗಳೂರು: ರಾಜ್ಯದಲ್ಲಿರುವ 47 ಸಾರ್ವಜನಿಕ ಉದ್ದಿಮೆಗಳು 8,124.12 ಕೋಟಿ ರೂ. ನಷ್ಟ ಭರಿಸಿವೆ. ವಿಧಾನಸಭೆಯಲ್ಲಿ ಬುಧವಾರ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಾರ್ವಜನಿಕ ಉದ್ಯಮಗಳ ಮೇಲಿನ ಮಹಾಲೆಕ್ಕಪರಿಶೋಧಕರ ವರದಿ ಮಂಡಿಸಿದ್ದು, 47 ಸಾರ್ವಜನಿಕ ಉದ್ದಿಮೆಗಳು ನಷ್ಟದಲ್ಲಿರುವುದು ಉಲ್ಲೇಖಿಸಲಾಗಿದೆ.

124 ಸಾರ್ವಜನಿಕ ವಲಯದ ಉದ್ದಿಮೆಗಳ ಪೈಕಿ 13 ಉದ್ದಿಮೆಗಳು ಕಾರ್ಯಸ್ಥಗಿತಗೊಂಡಿದ್ದು, 47 ನಷ್ಟದಲ್ಲಿದ್ದರೆ 42 ಉದ್ದಿಮೆಗಳು 2,986.47 ಕೋಟಿ ಲಾಭಗಳಿಸಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಕರ್ನಾಟಕ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯ ನಾಲ್ಕೂ ಸಂಸ್ಥೆಗಳು 2015ರಿಂದ 2021ರ ವರೆಗೆ 4,689.09 ಕೋಟಿ ನಷ್ಟ ಅನುಭವಿಸಿವೆ ಎಂದು ವರದಿ ತಿಳಿಸಿದೆ.

ಮಂಡ್ಯದ ಮೈಶುಗರ್‌ ಕಾರ್ಖಾನೆ 2005ರಲ್ಲೇ ರೋಗಗ್ರಸ್ತ ಎಂದು ಘೋಷಿಸಿದ ಅನಂತರವೂ 526.51 ಕೋಟಿ ರೂ. ಹೂಡಿಕೆ ಮಾಡಿದ್ದು ಹಾಗೂ ಖಾಸಗಿಯವರಿಗೆ ಗುತ್ತಿಗೆ ನೀಡುವ ನಿರ್ಣಯ ಫ‌ಲಪ್ರದವಾಗಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಮಾರುಕಟ್ಟೆ ಸ್ಥಿತಿಗತಿ ಮತ್ತು ಮಾರಾಟಗಳ ಸಾಧ್ಯತೆ ಸಾಧಕ-ಬಾಧಕ ತಿಳಿಯದೇ ಎಂಎಸ್‌ಐಎಲ್‌ ಮರಳು ಆಮದು ಮಾಡಿಕೊಂಡ ಪರಿಣಾಮ 21.14 ಕೋಟಿ ರೂ.ನಷ್ಟು ಮರಳು ದಾಸ್ತಾನು ನಾಲ್ಕು ವರ್ಷ ಇದ್ದ ಪರಿಣಾಮ 10.57 ಕೋಟಿ ರೂ. ಹೂಡಿಕೆ ನಿರುಪಯುಕ್ತವಾಯಿತು ಎಂದು ವರದಿಯಲ್ಲಿ ಹೇಳಲಾಗಿದೆ. ಕರ್ನಾಟಕ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿ ಮಂಡಳಿಯಲ್ಲಿ ಗುತ್ತಿಗೆದಾರರಿಗೆ ಅನರ್ಹ ಲಾಭ ಮಾಡಿಕೊಡಲಾಗಿದೆ ಎಂದು ವರದಿ ತಿಳಿಸಿದೆ.

ಕೇಂದ್ರ ಸರಕಾರದ ಆರ್ಥಿಕ ನೆರವಿನಿಂದ ಬಿಎಂಟಿಸಿ ಪರಿಸರ -ಸ್ನೇಹಿ ಬಸ್‌ ಖರೀದಿಸಲು ಟೆಂಡರ್‌ ಆಹ್ವಾನಿಸಿದ ಬಳಿಕ ಹಿಂದೆ ಸರಿದ ಪರಿಣಾಮ 170.31 ಕೋಟಿ ರೂ.ನಷ್ಟು ಕೇಂದ್ರದ ಅನುದಾನ ನಷ್ಟವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಬಿಡಿಎ ಕಣಿಮಿಣಿಕೆಯಲ್ಲಿ ವಸತಿ ಯೋಜನೆಯನ್ನು ಅಸಮರ್ಪಕವಾಗಿ ಕಾರ್ಯಗತಗೊಳಿಸಿದ್ದು, 451.53 ಕೋಟಿ ರೂ. ವರಮಾನ ಪಡೆದುಕೊಂಡಿಲ್ಲ, 27.24 ಕೋಟಿ ರೂ. ವ್ಯರ್ಥ ವೆಚ್ಚವಾಗಿದೆ. ಅರ್ಥಿಕವಾಗಿ ಹಿಂದುಳಿದ ವರ್ಗಕ್ಕೆ ಸೇರಿದ ಜನರಿಗೆ ಮನೆಗಳನ್ನು ಒದಗಿಸುವ ಗುರಿಯನ್ನು ಹೊಂದಿದ್ದ ಉದ್ದೇಶವೂ ಈಡೇರಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಟಾಪ್ ನ್ಯೂಸ್

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.