ಎರಡು ಗುಜರಿ ವ್ಯಾಪಾರ ಸಂಸ್ಥೆಗಳಿಂದ 83 ಕೋಟಿ ರೂ. ಜಿಎಸ್‌ಟಿ ವಂಚನೆ ಪತ್ತೆ


Team Udayavani, Jun 10, 2019, 3:00 AM IST

Udayavani Kannada Newspaper

ಮಂಗಳೂರು: ಎರಡು ಗುಜರಿ ವ್ಯಾಪಾರಿ ಸಂಸ್ಥೆಗಳು 83 ಕೋಟಿ ರೂ.ಗಳಷ್ಟು ಸರಕು ಸೇವಾ ತೆರಿಗೆ (ಜಿಎಸ್‌ಟಿ) ವಂಚನೆ ಮಾಡಿದ ಪ್ರಕರಣವನ್ನು ಮಂಗಳೂರಿನ ಕೇಂದ್ರೀಯ ಜಿಎಸ್‌ಟಿ ಕಮಿಷನರೆಟ್‌ ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಿದೆ.

ಮಂಗಳೂರಿನ ಗುಜರಿ ವ್ಯಾಪಾರಿ ಮೆ| ತೌಹೀದ್‌ ಸ್ಕ್ರೇಪ್‌ ಡೀಲರ್‌ನ ಪಿ.ಕೆ.ಅಬ್ದುಲ್‌ ರಹೀಂ ಮತ್ತು ಮೆ|ಎಂ.ಕೆ. ಟ್ರೇಡರ್ಸ್ ಮಾಲೀಕ ಅಬ್ದುಲ್‌ ಖಾದರ್‌ ಕೂಳೂರು ಚಾಯಬ್ಬ ಬಂಧಿತರು. ಇಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಇವರಿಬ್ಬರೂ 2018ರಿಂದ ನಕಲಿ ಬಿಲ್‌ ತಯಾರಿಸಿ, ಸರಕಾರಕ್ಕೆ ಜಿಎಸ್‌ಟಿ ಪಾವತಿಸದೆ ವಂಚನೆ ಎಸಗುತ್ತಿದ್ದರು. ಎರಡೂ ಸಂಸ್ಥೆಗಳು ಸುಮಾರು 15 ಕೋಟಿ ರೂ.ಮೊತ್ತದ ನಕಲಿ ಬಿಲ್‌ ಬಳಕೆ ಮಾಡಿದ್ದು, ಒಟ್ಟು 83 ಕೋಟಿ ರೂ.ಮೊತ್ತದ ಸರಕು ಇದರಲ್ಲಿ ಒಳಗೊಂಡಿದೆ ಎಂದು ಕೇಂದ್ರೀಯ ಜಿಎಸ್‌ಟಿ ಕಮಿಷನರ್‌ ಧರ್ಮಸಿಂಗ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಕಲಿ ವ್ಯವಹಾರ ನಡೆಯುತ್ತಿದ್ದುದು ಹೀಗೆ: ಮೆ| ತೌಹೀದ್‌ ಸ್ಕ್ರೇಪ್‌ ಡೀಲರ್‌ ಮತ್ತು ಮೆ| ಎಂ.ಕೆ. ಟ್ರೇಡರ್ ಸಂಸ್ಥೆಗಳು ಬೇರೆ, ಬೇರೆ ಸಂಸ್ಥೆಗಳಿಂದ ಸರಕು ಸಾಗಾಟಕ್ಕೆ ಸಂಬಂಧಿಸಿ ನಕಲಿ ಬಿಲ್‌ (ಇನ್‌ವಾಯ್ಸ) ತಯಾರಿಸಿ ಅದರ ಆಧಾರದಲ್ಲಿ ನಕಲಿ ಇನ್‌ಪುಟ್‌ ಟ್ಯಾಕ್ಸ್‌ ಕ್ರೆಡಿಟ್‌ (ಐಟಿಸಿ) ಪಡೆದು ಸರಕಾರಕ್ಕೆ ವಂಚಿಸುತ್ತಿದ್ದವು. ಇಲ್ಲಿ ನಿಜವಾಗಿಯೂ ಸರಕು ಸಾಗಾಟ ಆಗುತ್ತಿರಲಿಲ್ಲ.

ಈ ಸಂಸ್ಥೆಗಳ ಮಾಲೀಕರು ನೋಂದಣಿ ರಹಿತ ವ್ಯಾಪಾರಿಗಳಿಂದ ಖರೀದಿಸಿದ ಲೋಹದ ಗುಜರಿ ಸಾಮಗ್ರಿಗಳನ್ನು ಅಲ್ಯೂಮಿನಿಯಂ ಎಂಎಸ್‌ ಕಾಪರ್‌ ರಾಡ್ಸ್‌ ಇಂಗೊಟ್ಸ್‌ ಕಾಸ್ಟಿಂಗ್ಸ್‌ ಮತ್ತಿತರ ಸಾಮಗ್ರಿಗಳ ತಯಾರಿಕ ಸಂಸ್ಥೆಗಳಿಗೆ ಪೂರೈಕೆ ಮಾಡುವ ಸಂದರ್ಭದಲ್ಲಿ ಜಿಎಸ್‌ಟಿ ಪಾವತಿಯಿಂದ ತಪ್ಪಿಸಿಕೊಳ್ಳಲು ಈ ನಕಲಿ ಐಟಿಸಿಗಳನ್ನು ಉಪಯೋಗಿಸುತ್ತಿದ್ದರು.

ಅಲ್ಲದೆ, ಅವರು ನಕಲಿ ಬಿಲ್‌ ಹೊಂದಿದವರಿಗೆ ನಕಲಿ ಐಟಿಸಿ ಕ್ರೆಡಿಟ್‌ ವರ್ಗಾವಣೆ ಮಾಡಲು ಕೂಡ ಈ ನಕಲಿ ಬಿಲ್‌ಗ‌ಳನ್ನು ಉಪಯೋಗಿಸುತಿದ್ದರು. ಆರೋಪಿಗಳು ನಕಲಿ ಬಿಲ್‌ ತಯಾರಿಸುವ ವ್ಯಕ್ತಿಗೆ ಶೇ.3ರಷ್ಟು ಕಮಿಷನ್‌ ಪಾವತಿ ಮಾಡುತ್ತಿದ್ದರು ಎಂಬ ಸಂಗತಿ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.