ಅಂತಾರಾಜ್ಯ ಪ್ರಯಾಣಿಕರಿಂದ ಸೋಂಕು ಸ್ಪೋಟ: ಒಂದೇ ದಿನ 84 ಮಂದಿಗೆ ಸೋಂಕು ದೃಢ
Team Udayavani, May 18, 2020, 1:22 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತರಲ್ಲಿ ಒಮ್ಮಿಂದೊಮ್ಮೆಲೆ ಭಾರಿ ಏರಿಕೆ ಕಂಡು ಬಂದಿದೆ. ರವಿವಾರ ಸಂಜೆಯ ನಂತರ ಇದುವರೆಗೆ ಒಟ್ಟು 84 ಸೋಂಕು ಪ್ರಕರಣಗಳು ಕಂಡು ಬಂದಿದೆ. ಅನ್ಯ ರಾಜ್ಯಗಳಿಂದ ಬರುತ್ತಿರುವ ಜನರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೋಂಕು ಕಂಡುಬರುತ್ತಿದೆ.
ಬೆಂಗಳೂರು ನಗರದಲ್ಲಿ ಅತೀ ಹೆಚ್ಚು 18 ಪ್ರಕರಣಗಳು ಕಂಡುಬಂದಿದೆ. ( ಇದರಲ್ಲಿ 15 ಪ್ರಕರಣಗಳು ರವಿವಾರವೇ ವರದಿಯಾಗಿದೆ) ಉಳಿದಂತೆ ಮಂಡ್ಯದಲ್ಲಿ 17 ಪ್ರಕರಣಗಳು, ಕಲಬುರಗಿ ಮತ್ತು ರಾಯಚೂರಿನಲ್ಲಿ ತಲಾ ಆರು ಪ್ರಕರಣಗಳು, ಉತ್ತರ ಕನ್ನಡದಲ್ಲಿ ಎಂಟು ಪ್ರಕರಣಗಳು, ಗದಗ, ವಿಜಯಪುರ ಮತ್ತು ಯಾದಗಿರಿಯಲ್ಲಿ ತಲಾ ಐದು ಪ್ರಕರಣಗಳು ಕಂಡು ಬಂದಿದೆ.
ಉಳಿದಂತೆ ಹಾಸನದಲ್ಲಿ ನಾಲ್ಕು ಹೊಸ ಪ್ರಕರಣ, ಕೊಪ್ಪಳದಲ್ಲಿ ಮೂರು ಪ್ರಕರಣಗಳು, ಬೆಳಗಾವಿಯಲ್ಲಿ ಎರಡು ಮತ್ತು ಮೈಸೂರು, ಕೊಡಗು, ದಾವಣಗೆರೆ, ಬೀದರ್ ಮತ್ತು ಬಳ್ಳಾರಿಯಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ.
ಇದುವರೆಗೆ ಸೋಂಕು ಪ್ರಕರಣ ಪತ್ತೆಯಾಗಿರದ ರಾಯಚೂರು ಮತ್ತು ಕೊಪ್ಪಳಕ್ಕೂ ಕೋವಿಡ್-19 ಸೋಂಕು ಕಾಲಿಟ್ಟಿದೆ. ಚಿಕ್ಕಮಗಳೂರು, ಚಾಮರಾಜನಗರ, ರಾಮನಗರ ಹೊರತುಪಡಿಸಿ ರಾಜ್ಯದ 27 ಜಿಲ್ಲೆಗಳಲ್ಲಿ ಸೋಂಕು ಪ್ರಕರಣಗಳಿವೆ.
ಇಂದಿನ ಹೊಸ 84 ಸೋಂಕು ಪ್ರಕರಣಗಳಿಂದ ರಾಜ್ಯದ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 1231ಕ್ಕೆ ಏರಿಕೆಯಾಗಿದೆ. ಇದರಲ್ಲಿ 521 ಮಂದಿ ಗುಣಮುಖರಾಗಿದ್ದಾರೆ. 37 ಜನರು ಕೋವಿಡ್ ಕಾರಣದಿಂದ ಸಾವನ್ನಪ್ಪಿದ್ದು, ಓರ್ವ ಸೋಂಕಿತ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ