842 ರೈತರ ಆತ್ಮಹತ್ಯೆ: ಅಧ್ಯಯನಕ್ಕೆ ಮುಖ್ಯಮಂತ್ರಿ ಸೂಚನೆ

ಆತ್ಮಹತ್ಯೆಗೆ ಕಾರಣ, ಪರಿಹಾರ ಕುರಿತು ಅಧ್ಯಯನ ನಡೆಸಲು ಸೂಚನೆ

Team Udayavani, May 23, 2024, 11:44 PM IST

1-asasa

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ರೈತರ ಆತ್ಮಹತ್ಯೆ ಪ್ರಕರಣಗಳ ಕುರಿತು ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ “ಕೃಷ್ಣಾ’ದಲ್ಲಿ ಸಚಿವರು, ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒಗಳೊಂದಿಗೆ ಗುರುವಾರ ವೀಡಿಯೋ ಸಂವಾದ ನಡೆಸಿ, ರೈತರ ಆತ್ಮಹತ್ಯೆ ಪ್ರಕರಣಗಳು ಯಾವ ಜಿಲ್ಲೆಯಲ್ಲಿ ಹೆಚ್ಚಿದೆ? ಅದಕ್ಕೆ ಕಾರಣ, ಪರಿಹಾರಗಳೇನೆಂಬ ಬಗ್ಗೆ ಅಧ್ಯಯನ ನಡೆಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ.

ರಾಜ್ಯದಲ್ಲಿ 2023-24ರಲ್ಲಿ 842 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅನ್ನದಾತರ ಆತ್ಮಹತ್ಯೆ ಪ್ರಕರಣದ ಹಿಂದಿನ ಕಾರಣ ತಿಳಿಯುವುದಕ್ಕೆ ಸರಕಾರ ಮುಂದಾಗಿದೆ. ಅಧಿಕಾರಿಗಳು ಸಭೆಗೆ ನೀಡಿರುವ ಮಾಹಿತಿ ಪ್ರಕಾರ ಒಟ್ಟು ಪ್ರಕರಣಗಳ ಪೈಕಿ 90 ಮನವಿಗಳು ತಿರಸ್ಕೃತವಾಗಿವೆ. 63 ಉಪ ವಿಭಾಗಾಧಿಕಾರಿ ಹಂತದಲ್ಲಿ ಬಾಕಿಯಿವೆ. ಉಳಿದ ರೈತರ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಸಲ್ಲಿಕೆಯಲ್ಲಿ ವಿಳಂಬವಾಗಿದೆ.

82.4 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ
ರಾಜ್ಯದಲ್ಲಿ ಉತ್ತಮ ಮುಂಗಾರು ನಿರೀಕ್ಷೆ ಹುಟ್ಟಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಹಂಗಾಮಿನಲ್ಲಿ 82.40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿಯನ್ನು ರಾಜ್ಯ ಸರಕಾರ ಹೊಂದಿದ್ದು, ಮುಂಗಾರು ಪೂರ್ವದಲ್ಲಿ 2.95 ಲಕ್ಷ ಹೆಕ್ಟೇರ್‌ ಗುರಿಯ ಪೈಕಿ 68 ಸಾವಿರ ಹೆಕ್ಟೇರ್‌ನಲ್ಲಿ ಮಾತ್ರ ಬಿತ್ತನೆಯಾಗಿದೆ ಎಂದು ಆಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಮಾರ್ಚ್‌ 1ರಿಂದ ಈವರೆಗೆ 87 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 123 ಮಿ.ಮೀ. ಮಳೆಯಾಗಿದೆ. 8 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಕಂಡಿದೆ. ಸಹಾಯಧನ ಯೋಜನೆ ಅನ್ವಯ 5,52,350 ಕ್ವಿಂಟಾಲ್‌ ಬಿತ್ತನೆ ಬೀಜಕ್ಕೆ ಬೇಡಿಕೆಯಿದೆ. 9,01,397 ಕ್ವಿಂಟಾಲ್‌ ಬಿತ್ತನೆ ಬೀಜ ಲಭ್ಯವಿದೆ. ಮೇ 22ರ ವರೆಗೆ 5492.44 ಕ್ವಿಂಟಾಲ್‌ ಬಿತ್ತನೆ ಬೀಜ ವಿತರಿಸಲಾಗಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ 14,608.49 ಕ್ವಿಂಟಾಲ್‌ ಬಿತ್ತನೆ ಬೀಜ ದಾಸ್ತಾನಿದೆ. ಎಪ್ರಿಲ್‌ 1ರಿಂದ ಈವರೆಗೆ 3.22 ಲಕ್ಷ ಟನ್‌ ರಸಗೊಬ್ಬರ ಮಾರಾಟವಾಗಿದ್ದರೆ, 14,86,067 ಟನ್‌ ರಸಗೊಬ್ಬರ ದಾಸ್ತಾನಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದ್ದಾರೆ.

ಅಭಾವವಾಗದಂತೆ ನೋಡಿಕೊಳ್ಳಿ
ಕುಡಿಯುವ ನೀರಿನ ಅಭಾವ ಉಂಟಾಗದಂತೆ ನೋಡಿಕೊಳ್ಳುವುದು ಮೊದಲ ಆದ್ಯತೆ. ನಿತ್ಯವೂ ಕುಡಿಯುವ ನೀರಿನ ಪರೀಕ್ಷೆ ನಡೆಸಿ ಶುದ್ಧ ಕುಡಿಯುವ ಪೂರೈಕೆ ಖಾತರಿಪಡಿಸಿಕೊಳ್ಳಿ. ಆಯಾ ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಲಭ್ಯವಿರುವ ಹಣವನ್ನು ಕುಡಿಯುವ ನೀರು ಪೂರೈಕೆಗೆ ಅಗತ್ಯಕ್ಕೆ ಅನುಗುಣವಾಗಿ ಬಳಸಿಕೊಳ್ಳುವುದಕ್ಕೆ ಯಾವುದೇ ಅಡ್ಡಿಯಿಲ್ಲ. ನೀತಿ ಸಂಹಿತೆ ಕಾರಣದಿಂದ ಆಡಳಿತ ಲಕ್ವ ಹೊಡೆದ ಸ್ಥಿತಿಯಲ್ಲಿದ್ದು, ಅಭಿವೃದ್ಧಿ ಕೆಲಸಗಳೆಲ್ಲ ಸ್ಥಗಿತವಾಗಿದ್ದವು. ಚುನಾವಣೆ ಮುಗಿದ ಬಳಿಕ ಆಯೋಗಕ್ಕೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಟ್ಟು ನೀತಿ ವಿನಾಯಿತಿ ಪಡೆದುಕೊಳ್ಳಲಾಗಿದೆ. ಈಗ ಆಡಳಿತ ಯಂತ್ರ ಚುರುಕುಗೊಳ್ಳಬೇಕು. ಎಲ್ಲ ಹಂತದ ಅಧಿಕಾರಿಗಳ ಜತೆಗೆ ಸಮನ್ವಯ ಸಾಧಿಸಿ ಅಭಿವೃದ್ಧಿ ಕಾಮಗಾರಿಗಳ ಟೆಂಡರ್‌ ಪ್ರಕ್ರಿಯೆ, ಕಾರ್ಯಾದೇಶ ತ್ವರಿತವಾಗಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಟಾಪ್ ನ್ಯೂಸ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

ನಾಯಕರ ಬೆನ್ನು ಬಿಡಿ, ಕ್ಷೇತ್ರ ಸುತ್ತಾಡಿ: ಪದಾಧಿಕಾರಿಗಳಿಗೆ ಡಿಕೆಶಿ ತಾಕೀತು

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

Gowri Movie Dhool Yebsava Video Song

Samarjith lankesh; ಧೂಳ್‌ ಎಬ್ಬಿಸುತ್ತ ಬಂದ ಗೌರಿ ಹಾಡು

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

1-aaaa

Bihar:ಗಂಗಾ ನದಿಯಲ್ಲಿ ಮುಳುಗಿದ 17 ಭಕ್ತರಿದ್ದ ದೋಣಿ,6 ಮಂದಿ ನಾಪತ್ತೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.