9,55,943 ಮನೆ ಮಂಜೂರು: ಸೋಮಣ್ಣ
Team Udayavani, Mar 17, 2020, 3:03 AM IST
ವಿಧಾನಸಭೆ: ರಾಜ್ಯದಲ್ಲಿ 2017 ರಿಂದ ವಾಜಪೇಯಿ, ಬಸವ , ಅಂಬೇಡ್ಕರ್ ಸೇರಿ ವಿವಿಧ ವಸತಿ ಯೋಜನೆಗಳಡಿ 9,55,943 ಮನೆಗಳನ್ನು ಮಂಜೂರು ಮಾಡಲಾಗಿದ್ದು, ಇತ್ತೀಚೆಗಷ್ಟೇ 39 ಸಾವಿರ ಮನೆಗಳಿಗೆ 183 ಕೋಟಿ ರೂ. ಬಿಡುಗಡೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ವೇದ ವ್ಯಾಸ್ ಕಾಮತ್ ಪ್ರಶ್ನೆಗೆ ಉತ್ತರಿಸಿ, ಸಾಕಷ್ಟು ಕಾಲಾವಕಾಶ ನೀಡಿದರೂ ಪ್ರಾರಂಭಗೊಳ್ಳದ 2,74,253 ಮನೆ ಬ್ಲಾಕ್ ಮಾಡಲಾಗಿತ್ತು ನಂತರ ಸಚಿವ ಸಂಪುಟದಲ್ಲಿ ಬ್ಲಾಕ್ ಆಗಿರುವ ಎಲ್ಲ ಮನೆ ಆನ್ಬ್ಲಾಕ್ ಮಾಡಿ 1 ತಿಂಗಳು ಕಾಲಾವಕಾಶ ನೀಡಿ ಕಾಮಗಾರಿ ಪೂರ್ಣಗೊಳಿಸಲು ಅವಕಾಶ ನೀಡಲಾಗಿದೆ. ಮಾರ್ಚ್ ಅಂತ್ಯದವರೆಗೂ ಕಾಲಾವಕಾಶ ಇದೆ ಎಂದು ಹೇಳಿದರು.
ಮನೆಗಳು ಪೂರ್ಣಗೊಂಡ ನಂತರ ನಗರ ಪ್ರದೇಶದಲ್ಲಿ ಜಿಲ್ಲಾಧಿಕಾರಿಗಳು, ಗ್ರಾಮೀಣ ಭಾಗದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸ್ಥಳೀಯ ಅಧಿಕಾರಿಗಳಿಂದ ಮಾಹಿತಿ ಪಡೆದು ರವಾನಿ ಸಿದ ತಕ್ಷಣ ಹಣ ಆರ್ಟಿಜಿಎಸ್ ಮೂಲಕ ಖಾತೆಗಳಿಗೆ ಜಮೆ ಮಾಡಲಾಗುವುದು ಎಂದರು.
ಕಾಂಗ್ರೆಸ್ನ ಶಿವಾನಂದ ಪಾಟೀಲ್, ಯು.ಟಿ.ಖಾದರ್ ಸೇರಿ ಹಲವು ಸದಸ್ಯರು, ವಸತಿ ಯೋಜನೆಗಳಡಿ ಫಲಾನುಭವಿಗಳ ಪಾಲಿನ ಹಣ ಹೊಂದಿಸುವುದು ಬಡವರಿಗೆ ಕಷ್ಟವಾ ಗುತ್ತಿದೆ. ಬ್ಯಾಂಕುಗಳ ಮೂಲಕ ಅವ ರಿಗೆ ಸಾಲದ ವ್ಯವಸ್ಥೆ ಮಾಡಿ ಸಬೇಕು ಎಂದು ಒತ್ತಾಯಿಸಿದರು. ಉಡುಪಿಯಲ್ಲಿ ಬರೋಡಾ ಬ್ಯಾಂಕ್ ಸಾಲ ನೀಡಲು ಮುಂದಾಗಿದೆ. ಆದರೆ, ಇತರೆ ಜಿಲ್ಲೆಗಳಲ್ಲಿ ಬ್ಯಾಂಕ್ನವರು ಮುಂದಾಗುತ್ತಿಲ್ಲ, ಈ ಕುರಿತು ಬ್ಯಾಂಕ್ ಅಧಿಕಾರಿಗಳ ಜತೆ ಚರ್ಚಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು