ವಸತಿಹೀನರಿಗೆ 96 ಎಕರೆ ಭೂಮಿ
Team Udayavani, Oct 23, 2019, 3:00 AM IST
ಬೆಂಗಳೂರು: “ಎಲ್ಲರಿಗೂ ಸೂರು’ ಯೋಜನೆಯಡಿ ವಸತಿಹೀನರಿಗೆ ಸೂರು ಕಲ್ಪಿಸಲು ಚಿಕ್ಕಬಳ್ಳಾಪುರದಲ್ಲಿ 96 ಎಕರೆ ಭೂಮಿಯನ್ನು ಕಂದಾಯ ಇಲಾಖೆ ಯಿಂದ ವಸತಿ ಇಲಾಖೆಗೆ ಹಸ್ತಾಂತರಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಮಂಗಳವಾರ ಸಂಪುಟ ಸಭೆ ಬಳಿಕ ಮಾಹಿತಿ ನೀಡಿದ ಅವರು, ಚಿಕ್ಕಬಳ್ಳಾಪುರ ತಾಲೂಕಿನ ಮರಳುಕುಂಟೆ ಗ್ರಾಮದಲ್ಲಿ 61 ಎಕರೆ, ಆವಲಹಳ್ಳಿಯಲ್ಲಿ 10 ಎಕರೆ, ಚಿಕ್ಕತಿಮ್ಮನಹಳ್ಳಿಯಲ್ಲಿ 25 ಎಕರೆ ಸೇರಿ ಒಟ್ಟು 96 ಎಕರೆ ಕಂದಾಯ ಇಲಾಖೆಯ ಭೂಮಿಯನ್ನು ವಸತಿಹೀನರಿಗೆ ಮನೆ ನಿರ್ಮಿಸಿಕೊಡಲು ವಸತಿ ಇಲಾಖೆಗೆ ಹಸ್ತಾಂತರಿಸಲು ಒಪ್ಪಿಗೆ ನೀಡಲಾಗಿದೆ ಎಂದು ತಿಳಿಸಿದರು.
ಸಾಲಕ್ಕೆ ಸರ್ಕಾರಿ ಖಾತರಿ ನೀಡಲು ಸಂಪುಟ ಒಪ್ಪಿಗೆ
* ಕೃಷಿ ಇಲಾಖೆಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟದ ವತಿಯಿಂದ ಪ್ರಸಕ್ತ ಸಾಲಿಗೆ ರಸಗೊ ಬ್ಬರ ಖರೀದಿ ಮತ್ತು ದಾಸ್ತಾನಿಗಾಗಿ 400 ಕೋಟಿ ರೂ.ಸಾಲ ತೆಗೆದುಕೊಳ್ಳಲು ಸರ್ಕಾರದ ಖಾತರಿ ನೀಡಲು ಒಪ್ಪಿಗೆ ನೀಡಲಾಗಿದೆ.
* ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 15 ಕೋಟಿ ರೂ.ಸಾಲ ಪಡೆಯಲು ಸರ್ಕಾರದ ಖಾತರಿಗೆ ಒಪ್ಪಿಗೆ.
* ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಷೇರು ಬಂಡವಾಳ ಪ್ರಮಾಣವನ್ನು 500 ಕೋಟಿ ರೂ.ನಿಂದ 550 ಕೋಟಿ ರೂ.ಗೆ ಹೆಚ್ಚಿಸಿಕೊಳ್ಳಲು ಅನುಮೋದನೆ.
* ಕೃಷ್ಣಾ ಭಾಗ್ಯ ಜಲ ನಿಗಮ (ಕೆಬಿಜೆಎನ್ಎಲ್) ಐಇಬಿಆರ್ ಅಡಿ 1,000 ಕೋಟಿ ರೂ.ಸಾಲ ಪಡೆಯಲು ಸರ್ಕಾರ ಖಾತರಿ ಕೊಡಲು ಅನುಮೋದನೆ.
ಇತರ ಪ್ರಮುಖ ನಿರ್ಣಯಗಳು
* ನಗರ ಪ್ರದೇಶಗಳಲ್ಲಿನ 1,000 ಅಂಗನವಾಡಿಗಳನ್ನು 10 ಕೋಟಿ ರೂ.ವೆಚ್ಚದಲ್ಲಿ ದುರಸ್ತಿಪಡಿಸಲು ಅನುಮೋದನೆ.
* ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಶಾಲೆ ಹಾಗೂ ಆಶ್ರಮ ಶಾಲೆಗಳ ಮಕ್ಕಳಿಗೆ ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ವತಿಯಿಂದ 18.62 ಕೋಟಿ ರೂ.ವೆಚ್ಚದಲ್ಲಿ ನಿರ್ಮಲ ಹಾಗೂ ಸಿರಿಗಂಧ ಕಿಟ್ ವಿತರಣೆಗೆ ಒಪ್ಪಿಗೆ.
* “ರಾಷ್ಟ್ರೀಯ ಆರೋಗ್ಯ ಮಿಷನ್’ನ ತಾಯಿ ಆರೋಗ್ಯ ಕಾರ್ಯಕ್ರಮದಡಿ ಕಬ್ಬಿಣಾಂಶ, ಫೋಲಿಕ್ ಆ್ಯಸಿಡ್ ಹಾಗೂ ಕ್ಯಾಲ್ಸಿಯಂ ಮಾತ್ರೆಗಳನ್ನು ಕರ್ನಾಟಕ ರಾಜ್ಯ ಡ್ರಗ್ಸ್ ಲಾಜಿಸ್ಟಿಕ್ಸ್ ಮತ್ತು ದಾಸ್ತಾನು ಸೊಸೈಟಿಯಿಂದ 14.38 ಕೋಟಿ ರೂ.ವೆಚ್ಚದಲ್ಲಿ ಖರೀದಿಗೆ ಒಪ್ಪಿಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ
Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ