ಸನ್ನಡತೆ: 96 ಕೈದಿಗಳ ಅವಧಿಪೂರ್ವ ಬಿಡುಗಡೆ
Team Udayavani, May 26, 2022, 9:45 PM IST
ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 96 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಗುರುವಾರ ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 45 ಮಂದಿ ಹಾಗೂ ರಾಜ್ಯದ ಇತರ ಜೈಲುಗಳಲ್ಲಿದ್ದ 51 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಗೊಂಡವರು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಜೈಲಿನಲ್ಲಿ ಅವರ ಪರಿವರ್ತನೆ ಹಾಗೂ ಬದಲಾವಣೆ ಕಂಡು ಬಿಡುಗಡೆ ಮಾಡಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಕೆಲವು ತಿಂಗಳ ಹಿಂದೆ ಸನ್ನಡತೆ ಆಧಾರದ ಮೇಲೆ ಸುಮಾರು 120ಕ್ಕೂ ಅಧಿಕ ಮಂದಿಗಳ ಹೆಸರನ್ನು ಉಲ್ಲೇಖೀಸಿ ಬಿಡುಗಡೆಗೆ ಕಾರಾಗೃಹ ಇಲಾಖೆಗೆ ಸರಕಾರಕ್ಕೆ ಶಿಫಾರಸು ಮಾಡಿತ್ತು. ಈ ಪೈಕಿ 24 ಮಂದಿ ವಿರುದ್ಧ ಗಂಭೀರ ಸ್ವರೂಪದ ಪ್ರಕರಣಗಳು ದಾಖಲಾಗಿದ್ದರಿಂದ ಬಿಡುಗಡೆಗೆ ಸರಕಾರ ಹಾಗೂ ರಾಜ್ಯಪಾಲರು ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ