ಶನಿವಾರ ರಾಜ್ಯದಲ್ಲಿ 9,886 ಮಂದಿಗೆ ಸೋಂಕು: ಏರುಮುಖದಲ್ಲಿ ಗುಣಮುಖರ ಸಂಖ್ಯೆ
Team Udayavani, Oct 3, 2020, 10:36 PM IST
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 6.30 ಲಕ್ಷ ದಾಟಿದ್ದು, ಇದರಲ್ಲಿ 5 ಲಕ್ಷಕ್ಕೂ ಅಧಿಕ ಮಂದಿ ಗುಣಮುಖರಾಗಿದ್ದಾರೆ.
ಶನಿವಾರ ಒಟ್ಟು 48,408 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 9,886 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜತೆಗೆ 8,989 ಮಂದಿ ಗುಣಮುಖರಾಗಿದ್ದು, 100 ಮಂದಿ ಸಾವನ್ನಪ್ಪಿದ್ದಾರೆ.
ಪ್ರಸ್ತುತ 1,12,783 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ 841 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 3952, ಮೈಸೂರಿನಲ್ಲಿ 1514, ಹಾಸನದಲ್ಲಿ 460, ಶಿವಮೊಗ್ಗದಲ್ಲಿ 337 ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೂರಕ್ಕೂ ಅಧಿಕ ಸೋಂಕಿತ ಒಂದೇ ದಿನದಲ್ಲಿ ಪತ್ತೆಯಾಗಿದ್ದಾರೆ. ಹಾಗೆಯೇ ಬೆಂಗಳೂರಿನಲ್ಲಿ 2001, ಮೈಸೂರಿನಲ್ಲಿ 859, ತುಮಕೂರಿನಲ್ಲಿ 963, ಶಿವಮೊಗ್ಗದಲ್ಲಿ 866 ಸೇರಿದಂತೆ ರಾಜ್ಯದಲ್ಲಿ 8989 ಮಂದಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಬೆಂಗಳೂರು ನಗರದಲ್ಲಿ 21, ಮೈಸೂರಿನಲ್ಲಿ 18, ದಕ್ಷಿಣ ಕನ್ನಡದಲ್ಲಿ 9, ಹಾಸನ ಹಾಗೂ ತುಮಕೂರಿನಲ್ಲಿ ತಲಾ 6 ಸೇರಿದಂತೆ 100 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದ 612 ಜ್ವರ ಚಿಕಿತ್ಸಾಲಯದಲ್ಲಿ 4610 ವ್ಯಕ್ತಿಗೆ, ಬಿಬಿಎಂಪಿ ವ್ಯಾಪ್ತಿಯ 150 ಜ್ವರ ಚಿಕಿತ್ಸಾಲಯದಲ್ಲಿ 3914 ಮಂದಿ ಹಾಗೂ 69 ಖಾಸಗಿ ವೈದ್ಯಕೀಯ ಆಸ್ಪತ್ರೆ ಮತ್ತು ಕಾಲೇಜುಗಳಲ್ಲಿ 211 ವ್ಯಕ್ತಿಯ ತಪಾಸಣೆ ಮಾಡಲಾಗಿದೆ. 1703 ಮಂದಿಗೆ ಆಪ್ತ ಸಮಾಲೋಚನೆಯ ಸೇವೆಯನ್ನು ಮಾನಸಿಕ ಆರೋಗ್ಯ ವಿಭಾಗದಿಂದ ನೀಡಲಾಗಿದೆ. 1,96,212 ವ್ಯಕ್ತಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋಂ ಕ್ವಾರಂಟೈನ್ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು