500 ಮಂದಿಗೆ ಒಬ್ಬ ಪೌರಕಾರ್ಮಿಕ


Team Udayavani, Jul 20, 2018, 2:11 PM IST

bbmp.png

ಬೆಂಗಳೂರು: ಪ್ರತಿ 500 ನಾಗರಿಕರಿಗೆ ಒಬ್ಬ ಪೌರಕಾರ್ಮಿಕನನ್ನು ನೇಮಿಸುವ ನಿಯಮ ಜಾರಿಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿರುವ ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ್‌ ಹಿರೇಮನಿ, ಈ ಮೂಲಕ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿರುವ ಸುಮಾರು 8000 ಮಂದಿಯನ್ನು ರಕ್ಷಿಸುವಂತೆ
ಒತ್ತಾಯಿಸಿದ್ದಾರೆ. ಇದರೊಂದಿಗೆ, ನಗರ ಸ್ಥಳೀಯ ಸಂಸ್ಥೆಗಳಿಗೆ 11 ಸಾವಿರ ಪೌರಕಾರ್ಮಿಕರನ್ನು ನೇಮಿಸಿಕೊಳ್ಳುವಾಗ, ತಲೆ ತಲಾಂತರದಿಂದ ಈ ಕೆಲಸ ಮಾಡಿಕೊಂಡು ಬಂದಿರುವ ಕುಟುಂಬಗಳು ಮತ್ತು ಹಾಲಿ ಕೆಲಸ ನಿರ್ವಹಿಸುತ್ತಿರುವ ಗುತ್ತಿಗೆ ಕಾರ್ಮಿಕರಿಗೆ ಆದ್ಯತೆ ನೀಡಲು ನಿಯಮಾವಳಿ ತಿದ್ದುಪಡಿ ಮಾಡುವಂತೆಯೂ ಅವರು ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಗುರುವಾರ ಪೌರ ಕಾರ್ಮಿಕರಸಮಸ್ಯೆಗಳ ಕುರಿತಂತೆ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ ಮತ್ತು ಬಿಬಿಎಂಪಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 42 ಸಾವಿರ ಪೌರ ಕಾರ್ಮಿಕರಿದ್ದಾರೆ. ಪ್ರಸ್ತುತ ಪ್ರತಿ 700 ಮಂದಿಗೆ ಒಬ್ಬ ಪೌರಕಾರ್ಮಿಕ ಎಂಬ ನಿಯಮ ಜಾರಿಯಲ್ಲಿರುವ ಕಾರಣ ಎಂಟು ಸಾವಿರ ಮಂದಿ ಕೆಲಸ ಕಳೆದುಕೊಳ್ಳುವಆತಂಕದಲ್ಲಿದ್ದಾರೆ. ಹೀಗಾಗಿ ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಐಪಿಡಿ ಸಾಲಪ್ಪ ಅವರು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾಗಿದ್ದಾಗ ನೀಡಿದ್ದ ವರದಿ ಆಧರಿಸಿ 500 ಮಂದಿಗೆ ಒಬ್ಬ ಪೌರ ಕಾರ್ಮಿಕ ಎಂಬ ನಿಯಮ ರೂಪಿಸುವಂತೆ
ಸೂಚಿಸಿರುವುದಾಗಿ ತಿಳಿಸಿದರು. ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರ ಕಾರ್ಮಿಕರನ್ನುನೇಮಕ ಮಾಡಿಕೊಳ್ಳುವಾಗ, ಎರಡು ವರ್ಷ ಇದೇ ಕೆಲಸ ಮಾಡಿಕೊಂಡಿರುವ ಬಗ್ಗೆ ಇಎಸ್‌ಐ ಮತ್ತು nಪಿಎಫ್ ದಾಖಲೆಗಳನ್ನು ನೀಡಬೇಕು ಎಂಬ ನಿಯಮವನ್ನು ಸಡಿಲಗೊಳಿಸಬೇಕು. ಪೌರ ಕಾರ್ಮಿಕರ ನೇಮಕಾತಿಯಲ್ಲಿನ ಮೀಸಲಾತಿ ತೆಗೆದು
ಸಫಾಯಿ ಕರ್ಮಚಾರಿ ಸಮುದಾಯದವರಿಗೆ ಅವಕಾಶ ಮಾಡಿಕೊಡಬೇಕು. ರಾಜ್ಯಾದ್ಯಂತ ಪೌರ ಕಾರ್ಮಿಕರಾಗಿ ದುಡಿಯುತ್ತಿರುವವರ ಪೈಕಿ 22 ಸಾವಿರ ಮಂದಿಗೆ ಮನೆ ಇಲ್ಲ. ಹೀಗಾಗಿ ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮುಂದಿನ ಎರಡು ವರ್ಷದಲ್ಲಿ ಇವರೆಲ್ಲರಿಗೂ ಮನೆ ಒದಗಿಸುವಂತೆಯೂ ಸರ್ಕಾರಕ್ಕೆ ಶಿಫಾರಸು
ಮಾಡಲಾಗಿದೆ ಎಂದರು. ಭಂಗಿ ಸಮುದಾಯಕ್ಕೆ ಮನೆ ಕೊಡಿ: ಈ ಹಿಂದೆ ಮಲ ಹೊರುವ ಕೆಲಸ ಮಾಡುತ್ತಿದ್ದ ಭಂಗಿ ಸಮುದಾಯಕ್ಕೆ ಈವರೆಗೆ 3000 ಮನೆಗಳನ್ನು ನಿರ್ಮಿಸಿಕೊಟ್ಟಿದ್ದು, ಹಕ್ಕುಪತ್ರ ನೀಡಿಲ್ಲ. ಇದೀಗ ಆ
ಎಲ್ಲಾ ಮನೆಗಳು ಶಿಥಿಲಗೊಂಡಿದ್ದು, ಹಕ್ಕುಪತ್ರ ಇಲ್ಲದೆ ಹೊಸ ಮನೆ ನಿರ್ಮಿಸಿಕೊಳ್ಳಲು ಸಾಧ್ಯವಾಗು ತ್ತಿಲ್ಲ. ಆದ್ದರಿಂದ ಅವರಿಗೆ ಹಕ್ಕುಪತ್ರ ನೀಡಿ ಮನೆ ಕಟ್ಟಿಕೊಳ್ಳ ಲು ಸಹಕರಿಸಬೇಕು ಎಂದು ಹೇಳಿದರು

ಸಿಬಿಐ ತನಿಖೆಗೆ ವಹಿಸಲು ಶಿಫಾರಸು
ಬಿಬಿಎಂಪಿ ವ್ಯಾಪ್ತಿಯಲ್ಲಿ ನಕಲಿ ಪೌರ ಕಾರ್ಮಿಕರ ನೇಮಕ ಮತ್ತು ಪೌರ ಕಾರ್ಮಿಕರ ಭವಿಷ್ಯನಿಧಿ ಹಗರಣಗಳನ್ನು ಸಿಬಿಐ ತನಿಖೆಗೆ ವಹಿಸುವಂತೆ ಜಗದೀಶ್‌ ಹಿರೇಮನಿ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ. ಅಕ್ರಮವಾಗಿ ಪೌರ
ಕಾರ್ಮಿಕರನ್ನು ನೇಮಿಸಿಕೊಳ್ಳುವ ಮೂಲಕ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸೇರಿಕೊಂಡು 550 ಕೋಟಿ ರೂ. ಅವ್ಯವಹಾರ ನಡೆಸಿದ್ದಾರೆ. ಅದೇ ರೀತಿ ಪೌರಕಾರ್ಮಿಕರ ಭವಿಷ್ಯನಿಧಿ ಹೆಸರಲ್ಲಿ 320 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ. ಈ ಬಗ್ಗೆ ಸರ್ಕಾರ ಎಸಿಬಿ ತನಿಖೆಗೆ ಆದೇಶಿಸಿತ್ತಾದರೂ ಅಧಿಕಾರಿಗಳು ಮತ್ತು ಗುತ್ತಿಗೆದಾರರು ತನಿಖೆಗೆ ಸಹಕರಿಸುತ್ತಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆ ವಹಿಸಲು ರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆಲಿಖೀತವಾಗಿ ಶಿಫಾರಸು  ಮಾಡುವುದಾಗಿ
ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.