ವಕೀಲನ ವಿರುದ್ಧ ಮಾನಭಂಗ ಯತ್ನ ದೂರು
Team Udayavani, Feb 13, 2020, 3:00 AM IST
ಶಿವಮೊಗ್ಗ: ಸಿಎಂ ಯಡಿಯೂರಪ್ಪ, ಸಚಿವ ಈಶ್ವರಪ್ಪ ಅವರ ವಿರುದ್ಧ ಈ ಹಿಂದೆ ಕೇಸ್ ದಾಖಲಿಸಿ ನ್ಯಾಯಾಲಯಕ್ಕೆ ಅಲೆದಾಡಿಸಿದ್ದ ಇಲ್ಲಿನ ಕ್ರಿಮಿನಲ್ ಲಾಯರ್ ಪಿ. ವಿನೋದ್ ವಿರುದ್ಧ ಈಗ ಮಾನಭಂಗ ಯತ್ನ ಆರೋಪದ ದೂರು ದಾಖಲಾಗಿದೆ. ಶರಾವತಿ ನಗರದ ಮಹಿಳೆಯೊಬ್ಬರು ದೂರು ನೀಡಿದ್ದು, ಬಾಕಿ ಹಣ ಕೇಳಲು ಹೋದಾಗ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ದೂರುದಾರ ಮಹಿಳೆಯ ಪತಿ ಜ್ಯುವೆಲ್ಲರಿ ಶಾಪ್ ಹೊಂದಿದ್ದು, ಅಲ್ಲಿ ವಿನೋದ್ ಅವರು 3.69 ಲಕ್ಷ ರೂ. ಮೌಲ್ಯದ ಬಂಗಾ ರದ ನೆಕ್ಲೆಸ್ ಖರೀದಿಸಿದ್ದರು. ಖರೀದಿ ವೇಳೆ ಕೇವಲ 40 ಸಾವಿರ ರೂ. ಮಾತ್ರ ನೀಡಿದ್ದರು. ಇದರ ಬಾಕಿ ಹಣ ಕೇಳಲು ಫೆ.6ರಂದು ವಕೀಲ ವಿನೋದ್ ಮನೆಗೆ ದೂರುದಾರೆ ತೆರಳಿ ದಾಗ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆಮನೆಯಿಂದ ಹೊರಹೋಗಲು ಬಿಡದಂತೆ ತಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ವಕೀಲ ವಿನೋದ್, ಸತ್ಯ ಹಾಗೂ ಇತರರ ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ