ಪಕ್ಷಾಂತರಿಗಳಿಗೆ ಜನತೆ ತಕ್ಕ ಪಾಠ: ದಿನೇಶ್
Team Udayavani, Nov 27, 2019, 3:03 AM IST
ಹುಬ್ಬಳ್ಳಿ: “ದೇಶವನ್ನೇ ಲೂಟಿ ಹೊಡೆದಿರುವ ಬಿಜೆಪಿ ನಾಯಕರು, ಇತರೆ ಪಕ್ಷಗಳ ಶಾಸಕರಿಗೆ ಹಣದ ಆಮಿಷವೊಡ್ಡಿ ವಾಮಮಾರ್ಗದಿಂದ ಅಧಿಕಾರಕ್ಕೆ ಬಂದಿದ್ದು ಜನ ಬಿಜೆಪಿ ಹಾಗೂ ಪಕ್ಷಾಂತರಿಗಳಿಗೆ ತಕ್ಕ ಪಾಠ ಕಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ಗುಂಡೂರಾವ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಚುನಾವಣೆ ನಂತರ ಮತ್ತಷ್ಟು ಶಾಸಕರು ಬಿಜೆಪಿಗೆ ಬರಲಿದ್ದಾರೆ ಎನ್ನುವ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ ಗಮನಿಸಿದರೆ ಹಣದ ಹೊಳೆಹರಿಸಲು ಮತ್ತೆ ಸಜ್ಜಾಗಿದ್ದಾರೆ.
ಹೇಗಾದರೂ ಮಾಡಿ ಅಧಿಕಾರಕ್ಕೆ ಬರಬೇಕು ಎನ್ನುವ ಕಾರ ಣಕ್ಕೆ ದೇಶ ಲೂಟಿ ಮಾಡಿದ ಹಣದಿಂದ ಶಾಸಕರನ್ನು ಕೊಂಡುಕೊಳ್ಳುತ್ತಿ ದ್ದಾರೆ. ಅವರೆಲ್ಲಾ, ರಾಜಕೀಯವಾಗಿ ನೈತಿಕತೆ ಕಳೆದುಕೊಂಡಿದ್ದಾರೆಂದು ದೂರಿದರು. ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರಿಗೆ ಹಲವು ಆಮಿಷ ಹಾಗೂ ಬೆದರಿಕೆ ಹಾಕಿ ರಾಜೀನಾಮೆ ಕೊಡಿಸಿದ್ದಾರೆ. ರಾಜ್ಯದಲ್ಲಿ ಕೃತಕ ಬಹುಮತ ಸೃಷ್ಟಿಸಿ ನಡೆಯುತ್ತಿರುವ ಸರ್ಕಾರ ಬಹಳ ದಿನ ನಡೆಯಲ್ಲ. ಈ ಉಪ ಚುನಾವಣೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ತಿರುವು ನೀಡಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
ಕ್ರಿಕೆಟ್ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್11ನಲ್ಲಿ ಒಲಿಯಿತು 1.5 ಕೋಟಿ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!