ಸವಳು-ಜವಳು ಸಮಸ್ಯೆಗೆ ಶಾಶ್ವತ ಕ್ರಮ: ಮುರುಗೇಶ ನಿರಾಣಿ


Team Udayavani, Sep 1, 2022, 5:00 PM IST

ಸವಳು-ಜವಳು ಸಮಸ್ಯೆಗೆ ಶಾಶ್ವತ ಕ್ರಮ: ಮುರುಗೇಶ ನಿರಾಣಿ

ಬೆಂಗಳೂರು: ಕೃಷ್ಣಾ ಮೇಲ್ದಂಡೆ ವ್ಯಾಪ್ತಿಯ ರೈತರನ್ನು ಕಾಡುತ್ತಿರುವ ಸವಳು -ಜವಳು ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶೀಘ್ರದಲ್ಲೇ ರಾಷ್ಟ್ರೀಯ ಮಟ್ಟದ ವಿಚಾರ ಸಂಕೀರ್ಣವನ್ನು ಆಯೋಜಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

ಬೆಂಗಳೂರಿನ ಜಿಕೆವಿಕೆಯಲ್ಲಿ ಗುರುವಾರ ಎಫ್‌ಐಸಿಸಿಐ ಆಯೋಜಿಸಿದ್ದ ‘ಅಗ್ರಿ ಮ್ಯಾಕ್ 2022’ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, “ಸವಳು-ಜವಳು ಸಮಸ್ಯೆಯಿಂದ  ವರ್ಷದಿಂದ ವರ್ಷಕ್ಕೆ ಮಣ್ಣಿನ ಫಲವತ್ತತೆ ಕ್ಷೀಣಿಸುತ್ತಿದೆ.  ಕ್ಯಾನ್ಸರ್‌ನಂತೆ ರೈತರನ್ನು ಎಡೆಬಿಡದೇ ಕಾಡುತ್ತಿರುವ ಈ ವಿಚಾರವಾಗಿ ರಾಷ್ಟ್ರ ಮಟ್ಟದ ವಿಚಾರ ಸಂಕೀರ್ಣ ಆಯೋಜಿಸಲಾಗಿದೆ” ಎಂದು ತಿಳಿಸಿದರು.

“ಸವಳು ಜವಳು ಕುರಿತು ವಿಶೇಷ ಅಧ್ಯಯನ ನಡೆಸಿರುವ ತಜ್ಞರೊಂದಿಗೆ ಕಳೆದ ತಿಂಗಳು ಬಿಳಗಿಯಲ್ಲಿ ಸಂವಾದ ಕಾರ್ಯಕ್ರಮ ಆಯೋಜಿಸಲಾಗಿತ್ತು. ರೈತರಿಗೆ ಕಾರ್ಯಕ್ರಮದಲ್ಲಿ ಉಪಯುಕ್ತ ಮಾಹಿತಿ ದೊರೆತಿದ್ದು, ಮುಂಬರುವ ದಿನಗಳಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲ್ಲಿದ್ದಾರೆ”ಎಂದು ಅವರು ಹೇಳಿದರು.

“ಪ್ರತಿ ವರ್ಷ ನೀರಾವರಿ ಪ್ರದೇಶ ಹೆಚ್ಚುತ್ತಿರುವಂತೆ ಸವಳು-ಜವಳು ಸಮಸ್ಯೆಯ ತೀವ್ರತೆಯೂ ಹೆಚ್ಚುತ್ತಿದೆ. ಪರಿಣಾಮವಾಗಿ, ಫಲವತ್ತಾದ ಭೂಮಿ ಇದ್ದರೂ ಅದರಲ್ಲಿ ಬೆಳೆ ತೆಗೆಯಲು ಸಾಧ್ಯವಾಗುತ್ತಿಲ್ಲ” ಎಂದರು.

ಎಥನಾಲ್ ಉತ್ಪಾದನೆಯಲ್ಲಿ ನಾವೇ ಮೊದಲು: ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಯನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ವಿವರಿಸಿದ ಸಚಿವರು, “ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬಳಕೆಯನ್ನು ಕಡಿಮೆ ಮಾಡಿ, ಎಥನಾಲ್ ಉತ್ಪಾದನೆ ಹೆಚ್ಚಳ ಮಾಡಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಕರೆಗೆ ಸಕ್ಕರೆ ಕಾರ್ಖಾನೆ ಮಾಲೀಕರು ವಿಶೇಷ ಒಲವು ತೋರಿದ್ದು ಇನ್ನೊಂದು ವರ್ಷದಲ್ಲಿ ಕರ್ನಾಟಕ ದೇಶದಲ್ಲೇ ಉತ್ಪಾದನೆಯಲ್ಲಿ ಮೊದಲ ಸ್ಥಾನಕ್ಕೆ ಬರಲಿದೆ,” ಎಂದು ಸಚಿವ ನಿರಾಣಿ ವಿವರಿಸಿದರು.

“ಕೇಂದ್ರ ಸರ್ಕಾರವು ಪೆಟ್ರೋಲ್, ಡಿಸೇಲ್‍ನೊಂದಿಗೆ ಶೇ.20ರಷ್ಟು ಎಥನಾಲ್ ಮಿಶ್ರಣ ಮಾಡಲು ಕರೆ ಕೊಟ್ಟಿದ್ದರು. ಅದಕ್ಕೆ ಸಾಕ್ಷಿ ಎಂಬಂತೆ, ರಾಜ್ಯದಲ್ಲಿ ಕಳೆದೊಂದು ವರ್ಷದಲ್ಲಿ 5,850 ಕೋಟಿ ರೂಪಾಯಿ ಹೂಡಿಕೆ ಆಗಿದೆ. ಈ ಮೂಲಕ ದೇಶದಲ್ಲೇ ಅತಿ ಹೆಚ್ಚು ಎಥನಾಲ್ ಉತ್ಪಾದಿಸುವ ರಾಜ್ಯ ಎಂಬ ಹೆಗ್ಗಳಿಕೆ ನಮ್ಮದಾಗಲಿದೆ,” ಎಂದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಸಿ. ಕಳಸದ, ಕೃಷಿ ವಿವಿ ಜಿಕೆವಿಕೆಯ ಉಪ ಕುಲಪತಿ ಎಸ್. ರಾಜೇಂದ್ರ ಪ್ರಸಾದ್, ಫೆಡರ್ ಯುನಾಕೋಮಾದ ಅಧ್ಯಕ್ಷ ಅಲೆಸ್ಸಾಂಡ್ರೊ ಮಲವೋಲ್ಟಿ, ಎಫ್‍ಐಸಿಸಿಐ ಅಧ್ಯಕ್ಷ ಉಲ್ಲಾಸ ಕಾಮತ್, ಎಫ್‍ಐಸಿಸಿಐ ಕೃಷಿ ಸಮಿತಿ ಅಧ್ಯಕ್ಷ ಟಿ.ಆರ್.ಕೇಶವನ್,  ಎಫ್‍ಐಸಿಸಿಐ ಕೃಷಿ ಉಪಸಮಿತಿಯ ಅಧ್ಯಕ್ಷ ರವೀಂದ್ರ ಅಗರ್ವಾಲ್ ಹಾಗೂ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.