ಮಹಿಳೆ ಪೀಡಿಸುತ್ತಿದ್ದ ಕಾಮುಕನಿಗೆ ಸಾರ್ವಜನಿಕರಿಂದ ಬಿತ್ತು ಗೂಸಾ
Team Udayavani, Sep 2, 2017, 9:38 AM IST
ತುಮಕೂರು: ವಿವಾಹಿತ ಮಹಿಳೆಯೊಬ್ಬಳನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡು, ಲೈಂಗಿಕವಾಗಿ ಹಿಂಸೆ ನೀಡುತ್ತಿದ್ದ ಕಾಮುಕನನ್ನು ಭೀಮಸಂದ್ರದಲ್ಲಿ ಶುಕ್ರವಾರ ಸಾರ್ವಜನಿಕರು ಹಿಡಿದು ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ನೆಲಮಂಗಲ ಮೂಲದ ಮೋಹನ್ ಎಂಬಾತ ಕಳೆದ ಐದಾರು ತಿಂಗಳಿಂದ ಮಹಿಳೆಯೊಬ್ಬಳಿಗೆ ಫೇಸ್ಬುಕ್ ಹಾಗೂ ದೂರವಾಣಿ ಮೂಲಕ ಕಿರುಕುಳ ನೀಡುತ್ತಿದ್ದ. ಅಲ್ಲದೆ 15 ಲಕ್ಷ ರೂ. ನೀಡಬೇಕೆಂದು ಬೇಡಿಕೆಯನ್ನೂ ಇಟ್ಟಿದ್ದ. ಇದರಿಂದ ಮನನೊಂದ ಮಹಿಳೆ, ತನ್ನ ಪತಿ ಮತ್ತು ಸಂಬಂಧಿಕರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಳು. ಪತಿ ಹಾಗೂ ಕುಟುಂಬಸ್ಥರು ಈತ ಯಾರು ಎಂಬುದನ್ನು ಪತ್ತೆ ಹಚ್ಚಲು ಶುರು ಮಾಡಿದರು. ಆದರೆ, ಆತನ ಪತ್ತೆಯಾಗಿರಲಿಲ್ಲ. ಶುಕ್ರವಾರ ಆತ ಸಂಬಂಧಿಕರ ಮದುವೆಯೊಂದರಲ್ಲಿ ಭಾಗವಹಿಸಲು ಭೀಮಸಂದ್ರಕ್ಕೆ ಬಂದಿದ್ದ. ಈ ವೇಳೆ ಆತನ ಗುರುತು
ಸಿಕ್ಕಿತು. ಈತನೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ ಎಂಬುದನ್ನು ಖಚಿತ ಪಡಿಸಿಕೊಂಡ ಮಹಿಳೆಯ ಸಂಬಂಧಿಕರು ಮತ್ತು ಭೀಮಸಂದ್ರ ನಾಗರಿಕರು, ಆತನನ್ನು ಕಂಬಕ್ಕೆ ಕಟ್ಟಿ ಹಾಕಿ, ಹಿಗ್ಗಾಮುಗ್ಗಾ ಥಳಿಸಿದರು. ನಂತರ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿ, ಪೊಲೀಸರಿಗೆ ಒಪ್ಪಿಸಿದರು.
ಪೊಲೀಸರು ಆರೋಪಿಯನ್ನು ತಮ್ಮ ವಶಕ್ಕೆ ಪಡೆದು, ತನಿಖೆ ನಡೆಸುತ್ತಿದ್ದಾರೆ. ಮಹಿಳೆ ಮೂಲತಃ ತುಮಕೂರಿನ ಭೀಮಸಂದ್ರದವಳಾಗಿದ್ದು, ನೆಲಮಂಗಲಕ್ಕೆ ಕೊಟ್ಟು ಮದುವೆ ಮಾಡಲಾಗಿತ್ತು. ಮಹಿಳೆಗೆ ಫೇಸ್ಬುಕ್ನಲ್ಲಿ ಕಿರುಕುಳ ನೀಡುತ್ತಿದ್ದ ಮೋಹನ್ ಕೂಡ ನೆಲಮಂಗಲದವನೇ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್